Prithviraj Movie: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

Akshay Kumar | Amit Shah: ಅಕ್ಷಯ್ ಕುಮಾರ್ ಸೇರಿದಂತೆ ಖ್ಯಾತ ಕಲಾವಿದರು ಬಣ್ಣಹಚ್ಚಿರುವ ‘ಪೃಥ್ವಿರಾಜ್’ ಚಿತ್ರ ಜೂನ್ 3ರಂದು ತೆರೆಕಾಣುತ್ತಿದೆ. ಅದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಷಾ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Prithviraj Movie: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
ಅಮಿತ್ ಷಾ (ಎಡ ಚಿತ್ರ), ‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್
Follow us
| Updated By: shivaprasad.hs

Updated on:May 25, 2022 | 10:01 AM

ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಪೃಥ್ವಿರಾಜ್’ (Prithviraj Movie) ಈಗಾಗಲೇ ನಿರೀಕ್ಷೆ ಮೂಡಿಸಿದೆ. ಸ್ಟಾರ್ ನಟರ ಹಿಟ್ ಚಿತ್ರಗಳಿಲ್ಲದೇ ಕಂಗಾಲಾಗಿರುವ ಹಿಂದಿ ಚಿತ್ರರಂಗಕ್ಕೆ ಅಕ್ಷಯ್ ನಟನೆಯ ಚಿತ್ರ ಬೂಸ್ಟ್​ ಕೊಡಬಹುದು ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಜೂನ್​ 3ರಂದು ಚಿತ್ರವು ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿದೆ. ಈ ನಡುವೆ ಚಿತ್ರದ ವಿಶೇಷ ಪ್ರದರ್ಶನದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಚಿತ್ರವನ್ನು ವೀಕ್ಷಿಸಲಿದ್ದಾರೆ. ಜೂನ್ 1ರಂದು ದೆಹಲಿಯಲ್ಲಿ ನಡೆಯುವ ವಿಶೇಷ ಪ್ರದರ್ಶನವನ್ನು ಅವರು ವೀಕ್ಷಿಸಲಿದ್ದಾರೆ ಎಂದು ತಿಳಿಸಿದೆ. ಯಶ್ ರಾಜ್ ಫಿಲ್ಮ್ಸ್​ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಕೇಂದ್ರದ ಕೆಲವು ಮಂತ್ರಿಗಳು, ಹಿರಿಯ ರಾಜಕಾರಣಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ವೀಕ್ಷಿಸುವ ಸಾಧ್ಯತೆ ಇದೆ.

‘‘ವಿಶೇಷವಾಗಿ ಅಮಿತ್ ಷಾ ಅವರಿಗೆ ಪೃಥ್ವಿರಾಜ್ ಚೌಹಾಣ್​ ಅವರ ಕತೆಯ ಬಗ್ಗೆ ಬಹಳ ಆಸಕ್ತಿ ಇದೆ. ಪೃಥ್ವಿರಾಜ್​ ಚೌಹಾಣ್​ರಂತಹ ವೀರರ ಐತಿಹಾಸಿಕ ಮೌಲ್ಯ ಮತ್ತು ಶೌರ್ಯದ ಬಗ್ಗೆ ಭಾರತೀಯರು ತಿಳಿದುಕೊಳ್ಳಬೇಕೆಂದು ಅವರು ಅಭಿಪ್ರಾಯಪಡುತ್ತಾರೆ’’ ಎಂದು ಹೆಸರು ಹೇಳಲು ಇಚ್ಛಿಸದ ಮೂಲವೊಂದನ್ನು ಉಲ್ಲೇಖಿಸಿ ಹೆಚ್​​ಟಿ ವರದಿಯಲ್ಲಿ ತಿಳಿಸಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನದ ಈ ಚಿತ್ರವು ಜೂನ್ 3 ರಂದು ತೆರೆಕಾಣುತ್ತಿದೆ. ಪೃಥ್ವಿರಾಜ್ ಚೌಹಾಣ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ಬಣ್ಣಹಚ್ಚಿದ್ದಾರೆ. ಪೃಥ್ವಿರಾಜ್​ ಹೋರಾಟದ ಕತೆಯನ್ನು ಚಿತ್ರವು ಒಳಗೊಂಡಿರಲಿದೆ.

ಇದನ್ನೂ ಓದಿ
Image
Love Birds Movie: ‘ಲವ್ ಬರ್ಡ್ಸ್​’ನಲ್ಲಿ ತೆರೆ ಹಂಚಿಕೊಳ್ಳಲಿರುವ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್
Image
Karan Johar: 50ನೇ ವಸಂತಕ್ಕೆ ಕಾಲಿಟ್ಟ ಕರಣ್ ಜೋಹರ್; ಸ್ಟಾರ್ ನಿರ್ಮಾಪಕನ ಪಾರ್ಟಿಯಲ್ಲಿ ಯಶ್?
Image
ಒಂದು ಆ್ಯಕ್ಷನ್ ದೃಶ್ಯಕ್ಕೆ 35 ಲಕ್ಷ ರೂ. ವೆಚ್ಛ ಮಾಡಿದ ‘ಗೌಳಿ’ ತಂಡ; ಶ್ರೀನಗರ ಕಿಟ್ಟಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​
Image
ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಇದನ್ನೂ ಓದಿ: Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..

ದೊಡ್ಡ ಬಜೆಟ್​ನಲ್ಲಿ ತಯಾರಾಗಿರುವ ಈ ಚಿತ್ರವು 18 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಕತೆಯನ್ನು ಆಧರಿಸಿದೆ. ಕೇಂದ್ರ ಗೃಹಮಂತ್ರಿಗಳು ಇದನ್ನು ವೀಕ್ಷಿಸಿದರೆ ಅದು ಚಿತ್ರತಂಡದ ಪ್ರಯತ್ನವನ್ನು ಉತ್ತೇಜಿಸಿದಂತಾಗುತ್ತದೆ ಎಂದು ಮೂಲಗಳು ಹೇಳಿವೆ.

ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಈ ಚಿತ್ರದ ಮೂಲಕ ಬಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಸಂಜಯ್ ದತ್, ಸೋನು ಸೂದ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಚಿತ್ರದ ಟ್ರೇಲರ್​ ರಿಲೀಸ್ ಆಗಿದ್ದು, ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Wed, 25 May 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ