AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಊಂಚಾಯಿ’ ಸಿನಿಮಾದ 3 ನೇ ದಿನದ ಬಾಕ್ಸ್​ ಆಫೀಸ್ ಕಲೆಕ್ಷನ್ ಎಷ್ಟು?

ಅಮಿತಾಬ್​ ಬಚ್ಚನ್​ ಅವರ ‘ಊಂಚಾಯಿ' ಸಿನಿಮಾವು ಉತ್ತಮ ಪ್ರದರ್ಶನ ಕಾಣುತ್ತಿದ್ದು, ವರದಿಯ ಪ್ರಕಾರ ಮೂರನೇ ದಿನ 4.90 ರಿಂದ5.20 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ ಎಂದು ಹೇಳಲಾಗಿದೆ.

‘ಊಂಚಾಯಿ' ಸಿನಿಮಾದ 3 ನೇ ದಿನದ ಬಾಕ್ಸ್​ ಆಫೀಸ್ ಕಲೆಕ್ಷನ್ ಎಷ್ಟು?
ಅಮಿತಾಭ್​ ಬಚ್ಚನ್​
TV9 Web
| Edited By: |

Updated on: Nov 14, 2022 | 3:31 PM

Share

ಅಮಿತಾಭ್ ಬಚ್ಚನ್​, ಅನುಪಮ್​ ಖೇರ್​, ನೀನಾ ಗುಪ್ತಾ ಮತ್ತು ಬೋಮನ್​ ಇರಾನಿ ನಟಿಸಿರುವ ಸೂರಜ್​ ಬರ್ಜಾತ್ಯಾ ಅವರ ‘ಊಂಚಾಯಿ‘(unchai) ಸಿನಿಮಾವು ಶುಕ್ರವಾರ(ನವೆಂಬರ್​ 11) ರಿಲೀಸ್ ಆಗಿತ್ತು. ಮೊದಲ ದಿನವೇ 1.81ಕೋಟಿ ರೂಪಾಯಿ ಗಳಿಸುವುದರೊಂದಿಗೆ ಉತ್ತಮ ಓಪನಿಂಗ್​ ಮಾಡಿತು. ಎರಡನೇ ದಿನ 3.65ಕೋಟಿ ರೂಪಾಯಿ ಗಳಿಸಿಕೊಂಡಿದ್ದ ‘ಊಂಚಾಯಿ’ ಚಿತ್ರ, ಮೂರನೇ ದಿನ 35ರಿಂದ40 ಶೇಕಡ ಜಿಗಿತವನ್ನು ಕಾಣುವುದರೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ 4.90-5.20 ಕೋಟಿ ರೂ. ಕಮಾಯಿ ಮಾಡಿದೆ. ಇದರೊಂದಿಗೆ ‘ಊಂಚಾಯಿ’ ಚಿತ್ರವು ಒಟ್ಟೂ 10.50 ಕೋಟಿ ರೂಪಾಯಿ ಗಳಿಸಿಕೊಂಡಿದೆ.

‘ಊಂಚಾಯಿ’ ಸಿನಿಮಾವು ದೇಶಾದ್ಯಂತ ಸೀಮಿತ ಬಿಡುಗಡೆಯನ್ನು ಹೊಂದಿದೆ. ಕೊರೊನಾ ಬಳಿಕ ಅಮಿತಾಭ್​ ನಟನೆಯ ಈ ಸಿನಿಮಾವು ವಾರಾಂತ್ಯದ ಅತ್ಯಧಿಕ ದಾಖಲೆಯಾಗಿದೆ. ಇನ್ನು ಇವತ್ತು(ನವೆಂಬರ್ 14) ಕೂಡ ಎಂದಿನಂತೆ ಚೆನ್ನಾಗಿ ಕಮಾಯಿ ಮಾಡಿದರೆ ತಿಂಗಳ ಪೂರ್ತಿ ಬಾಕ್ಸ್​ಆಫೀಸ್​ನಲ್ಲಿ ತನ್ನ ಓಟವನ್ನು ಮುಂದುವರೆಸುವ ಸಾಧ್ಯತೆ ಇದೆ. ಬಾಲಿವುಡ್​ನಲ್ಲಿ ‘ಲಾಲ್​ ಸಿಂಗ್​ ಚಡ್ಡಾ’ದಂತಹ ದೊಡ್ಡ ಬಜೆಟ್​ ಸಿನಿಮಾಗಳು ಮತ್ತು ಅಕ್ಷಯ್​ ಕುಮಾರ್​ ಅವರ ನಾಲ್ಕು ಚಿತ್ರಗಳು ಈ ವರ್ಷದಲ್ಲಿ ವಿಫಲವಾದವು, ಪ್ರಾದೇಶಿಕ ಸಿನಿಮಾಗಳ ಮುಂದೆ ಸತತ ಸೋಲನ್ನು ಅನುಭವಿಸುತ್ತಿರುವ ಬಾಲಿವುಡ್ ಸಿನಿಮಾಗಳು ‘ಊಂಚಾಯಿ’ ಚಿತ್ರದಿಂದ ಟೇಕ್​ ಆಫ್​ ಮಾಡುವ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ:Amitabh Bachchan: ಪುನೀತ್​​ ಬಗ್ಗೆ ಅಮಿತಾಭ್​ ಬಚ್ಚನ್​ ಮಾತು; ದಿಗ್ಗಜ ನಟನಿಗೂ ಕಾಡುತ್ತಿದೆ ಅಪ್ಪು ನಗು

ಕತ್ರಿನಾ ಕೈಫ್​ ಅವರ ಇತ್ತೀಚಿನ ಹಾರರ್​-ಕಾಮಿಡಿ ‘ಫೋನ್​ಭೂತ್’​ ಸಿನಿಮಾ ಕೂಡ ಬಾಕ್ಸ್​ಆಫೀಸ್​ನಲ್ಲಿ ಹೇಳಿಕೊಳ್ಳುವಷ್ಟು ಗಳಿಕೆ ಮಾಡಿಲ್ಲ. ಇದರೊಟ್ಟಿಗೆ ಜಾನ್ವಿ ಕಪೂರ್​ ಅವರ ಥ್ರಿಲ್ಲರ್​ ಸಿನಿಮಾ ‘ಮಿಲಿ’ ಕೂಡ ಫ್ಲಾಪ್​ ಆಯಿತು. ಇನ್ನು ಈ ಚಿತ್ರದಲ್ಲಿ ನಟಿಸಿದ ಅನುಪಮ್​ ಖೇರ್ ‘ಊಂಚಾಯಿ’ ಸಿನಿಮಾ ಟಿಕೆಟ್​ ಪಡೆಯಲು ಪ್ರಯತ್ನಿಸುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಊಂಚಾಯಿ’ ಸಿನಿಮಾವನ್ನು ಸೂರಜ್​ ಬರ್ಜಾತ್ಯಾ ನಿರ್ದೇಶಿಸಿದ್ದು, ರಾಜಶ್ರೀ ಪ್ರೊಡಕ್ಷನ್ಸ್​ ಅಡಿ ನಿರ್ಮಾಣ ಮಾಡಲಾಗಿದೆ. ‘ಊಂಚಾಯಿ’ ಚಿತ್ರವು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಈ ಸಿನಿಮಾವು ಬಾಕ್ಸ್​​ ಆಫೀಸ್​ನಲ್ಲಿ ಎಷ್ಟರ ಮಟ್ಟಿಗೆ ಗಳಿಕೆ ಮಾಡಬಹುದು ಎಂದು ಕಾದು ನೋಡಬೇಕಾಗಿದೆ.

ಇನ್ನಷ್ಟು ಹೆಚ್ಚಿನ ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ