AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಊಂಚಾಯಿ’ ಸಿನಿಮಾದ 3 ನೇ ದಿನದ ಬಾಕ್ಸ್​ ಆಫೀಸ್ ಕಲೆಕ್ಷನ್ ಎಷ್ಟು?

ಅಮಿತಾಬ್​ ಬಚ್ಚನ್​ ಅವರ ‘ಊಂಚಾಯಿ' ಸಿನಿಮಾವು ಉತ್ತಮ ಪ್ರದರ್ಶನ ಕಾಣುತ್ತಿದ್ದು, ವರದಿಯ ಪ್ರಕಾರ ಮೂರನೇ ದಿನ 4.90 ರಿಂದ5.20 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ ಎಂದು ಹೇಳಲಾಗಿದೆ.

‘ಊಂಚಾಯಿ' ಸಿನಿಮಾದ 3 ನೇ ದಿನದ ಬಾಕ್ಸ್​ ಆಫೀಸ್ ಕಲೆಕ್ಷನ್ ಎಷ್ಟು?
ಅಮಿತಾಭ್​ ಬಚ್ಚನ್​
TV9 Web
| Edited By: |

Updated on: Nov 14, 2022 | 3:31 PM

Share

ಅಮಿತಾಭ್ ಬಚ್ಚನ್​, ಅನುಪಮ್​ ಖೇರ್​, ನೀನಾ ಗುಪ್ತಾ ಮತ್ತು ಬೋಮನ್​ ಇರಾನಿ ನಟಿಸಿರುವ ಸೂರಜ್​ ಬರ್ಜಾತ್ಯಾ ಅವರ ‘ಊಂಚಾಯಿ‘(unchai) ಸಿನಿಮಾವು ಶುಕ್ರವಾರ(ನವೆಂಬರ್​ 11) ರಿಲೀಸ್ ಆಗಿತ್ತು. ಮೊದಲ ದಿನವೇ 1.81ಕೋಟಿ ರೂಪಾಯಿ ಗಳಿಸುವುದರೊಂದಿಗೆ ಉತ್ತಮ ಓಪನಿಂಗ್​ ಮಾಡಿತು. ಎರಡನೇ ದಿನ 3.65ಕೋಟಿ ರೂಪಾಯಿ ಗಳಿಸಿಕೊಂಡಿದ್ದ ‘ಊಂಚಾಯಿ’ ಚಿತ್ರ, ಮೂರನೇ ದಿನ 35ರಿಂದ40 ಶೇಕಡ ಜಿಗಿತವನ್ನು ಕಾಣುವುದರೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ 4.90-5.20 ಕೋಟಿ ರೂ. ಕಮಾಯಿ ಮಾಡಿದೆ. ಇದರೊಂದಿಗೆ ‘ಊಂಚಾಯಿ’ ಚಿತ್ರವು ಒಟ್ಟೂ 10.50 ಕೋಟಿ ರೂಪಾಯಿ ಗಳಿಸಿಕೊಂಡಿದೆ.

‘ಊಂಚಾಯಿ’ ಸಿನಿಮಾವು ದೇಶಾದ್ಯಂತ ಸೀಮಿತ ಬಿಡುಗಡೆಯನ್ನು ಹೊಂದಿದೆ. ಕೊರೊನಾ ಬಳಿಕ ಅಮಿತಾಭ್​ ನಟನೆಯ ಈ ಸಿನಿಮಾವು ವಾರಾಂತ್ಯದ ಅತ್ಯಧಿಕ ದಾಖಲೆಯಾಗಿದೆ. ಇನ್ನು ಇವತ್ತು(ನವೆಂಬರ್ 14) ಕೂಡ ಎಂದಿನಂತೆ ಚೆನ್ನಾಗಿ ಕಮಾಯಿ ಮಾಡಿದರೆ ತಿಂಗಳ ಪೂರ್ತಿ ಬಾಕ್ಸ್​ಆಫೀಸ್​ನಲ್ಲಿ ತನ್ನ ಓಟವನ್ನು ಮುಂದುವರೆಸುವ ಸಾಧ್ಯತೆ ಇದೆ. ಬಾಲಿವುಡ್​ನಲ್ಲಿ ‘ಲಾಲ್​ ಸಿಂಗ್​ ಚಡ್ಡಾ’ದಂತಹ ದೊಡ್ಡ ಬಜೆಟ್​ ಸಿನಿಮಾಗಳು ಮತ್ತು ಅಕ್ಷಯ್​ ಕುಮಾರ್​ ಅವರ ನಾಲ್ಕು ಚಿತ್ರಗಳು ಈ ವರ್ಷದಲ್ಲಿ ವಿಫಲವಾದವು, ಪ್ರಾದೇಶಿಕ ಸಿನಿಮಾಗಳ ಮುಂದೆ ಸತತ ಸೋಲನ್ನು ಅನುಭವಿಸುತ್ತಿರುವ ಬಾಲಿವುಡ್ ಸಿನಿಮಾಗಳು ‘ಊಂಚಾಯಿ’ ಚಿತ್ರದಿಂದ ಟೇಕ್​ ಆಫ್​ ಮಾಡುವ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ:Amitabh Bachchan: ಪುನೀತ್​​ ಬಗ್ಗೆ ಅಮಿತಾಭ್​ ಬಚ್ಚನ್​ ಮಾತು; ದಿಗ್ಗಜ ನಟನಿಗೂ ಕಾಡುತ್ತಿದೆ ಅಪ್ಪು ನಗು

ಕತ್ರಿನಾ ಕೈಫ್​ ಅವರ ಇತ್ತೀಚಿನ ಹಾರರ್​-ಕಾಮಿಡಿ ‘ಫೋನ್​ಭೂತ್’​ ಸಿನಿಮಾ ಕೂಡ ಬಾಕ್ಸ್​ಆಫೀಸ್​ನಲ್ಲಿ ಹೇಳಿಕೊಳ್ಳುವಷ್ಟು ಗಳಿಕೆ ಮಾಡಿಲ್ಲ. ಇದರೊಟ್ಟಿಗೆ ಜಾನ್ವಿ ಕಪೂರ್​ ಅವರ ಥ್ರಿಲ್ಲರ್​ ಸಿನಿಮಾ ‘ಮಿಲಿ’ ಕೂಡ ಫ್ಲಾಪ್​ ಆಯಿತು. ಇನ್ನು ಈ ಚಿತ್ರದಲ್ಲಿ ನಟಿಸಿದ ಅನುಪಮ್​ ಖೇರ್ ‘ಊಂಚಾಯಿ’ ಸಿನಿಮಾ ಟಿಕೆಟ್​ ಪಡೆಯಲು ಪ್ರಯತ್ನಿಸುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಊಂಚಾಯಿ’ ಸಿನಿಮಾವನ್ನು ಸೂರಜ್​ ಬರ್ಜಾತ್ಯಾ ನಿರ್ದೇಶಿಸಿದ್ದು, ರಾಜಶ್ರೀ ಪ್ರೊಡಕ್ಷನ್ಸ್​ ಅಡಿ ನಿರ್ಮಾಣ ಮಾಡಲಾಗಿದೆ. ‘ಊಂಚಾಯಿ’ ಚಿತ್ರವು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಈ ಸಿನಿಮಾವು ಬಾಕ್ಸ್​​ ಆಫೀಸ್​ನಲ್ಲಿ ಎಷ್ಟರ ಮಟ್ಟಿಗೆ ಗಳಿಕೆ ಮಾಡಬಹುದು ಎಂದು ಕಾದು ನೋಡಬೇಕಾಗಿದೆ.

ಇನ್ನಷ್ಟು ಹೆಚ್ಚಿನ ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ