ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಸಂಭಾವನೆ ಎಷ್ಟು?

Arijit Singh: ಅರಿಜಿತ್ ಸಿಂಗ್ ಭಾರತದ ಅತ್ಯುತ್ತಮ ಸಿನಿಮಾ ಗಾಯಕ. ಅರಿಜಿತ್ ಸಿಂಗ್​ರ ಲೈವ್ ಕಾನ್ಸರ್ಟ್​ಗಳಿಗೆ ಭಾರಿ ಸಂಖ್ಯೆಯ ಜನ ಬರುತ್ತಾರೆ. ಅಂದಹಾಗೆ ಮದುವೆಯಲ್ಲಿ ಹಾಡು ಹಾಡಲು ಎಷ್ಟು ಸಂಭಾವನೆ ಪಡೆಯುತ್ತಾರೆ.

ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಸಂಭಾವನೆ ಎಷ್ಟು?
Follow us
| Updated By: ಮಂಜುನಾಥ ಸಿ.

Updated on: Sep 22, 2024 | 12:17 PM

ಗ್ರ್ಯಾಂಡ್ ಆಗಿ ಮದುವೆ ಆಗಬೇಕು ಎಂಬುದು ಅನೇಕರ ಕನಸು. ಅದೇ ರೀತಿ ಮಕ್ಕಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕು ಎಂಬುದು ಕೆಲವರ ಕನಸಾಗಿರುತ್ತದೆ. ದೊಡ್ಡ ಉದ್ಯಮಿಗಳು ಸದಾ ಖ್ಯಾತ ಸೆಲೆಬ್ರಿಟಿಗಳನ್ನು, ಗಾಯಕರನ್ನು ಕರೆಸಿ ಹಾಡಿಸೋ ಟ್ರೆಂಡ್ ಚಾಲ್ತಿಯಲ್ಲಿ ಇದೆ. ಈ ರೀತಿ ಅವರನ್ನು ಕರೆದಾಗ ಅವರು ದೊಡ್ಡ ಮೊತ್ತಕ್ಕೆ ಬೇಡಿಕೆ ಇಡುತ್ತಾರೆ. ಹಾಗಾದರೆ ಅರಿಜಿತ್ ಸಿಂಗ್ ಅವರು ಪ್ರತಿ ಮದುವೆಯಲ್ಲಿ ಭಾಗಿ ಆಗಲು, ದೊಡ್ಡ ಕಾರ್ಯಕ್ರಮ ನೀಡಲು ಎಷ್ಟು ಪಡೆಯುತ್ತಾರೆ ಅನ್ನೋದು ಗೊತ್ತೇ? ಆ ಬಗ್ಗೆ ಇಲ್ಲಿದೆ ವಿವರ.

ಅರಿಜಿತ್ ಸಿಂಗ್ ಅವರು ಅನೇಕ ಕಾನ್ಸರ್ಟ್ ನೀಡುತ್ತಾರೆ. ಅವರು ಸಂಗೀತ ಲೋಕದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರನ್ನು ಭೇಟಿ ಮಾಡಬೇಕು ಎಂಬುದು ಅನೇಕರ ಆಸೆ. ಅವರು ಅನೇಕ ಕಡೆಗಳಲ್ಲಿ ಕಾನ್ಸರ್ಟ್ ನೀಡುತ್ತಾರೆ. ಅವರು ಬಾಲಿವುಡ್ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಗಾಯಕರಲ್ಲಿ ಒಬ್ಬರು. ಅರಿಜಿತ್ ಸಿಂಗ್ ಅವರು ಮದುವೆ ಅಥವಾ ಇನ್ನಿತರ ಕಾರ್ಯಕ್ರಮದಲ್ಲಿ ಭಾಗಿ ಆಗಲು 5 ಕೋಟಿ ರೂಪಾಯಿ ಪಡೆಯುತ್ತಾರೆ ಎನ್ನಲಾಗಿದೆ.

ಅರಿಜಿತ್ ಸಿಂಗ್ ಅವರು ರಿಯಾಲಿಟಿ ಶೋಗಳ ಮೂಲಕ ಎಲ್ಲರಿಗೂ ಪರಿಚಿತರಾದರು. ಆ ಬಳಿಕ ಅವರು ಖ್ಯಾತಿ ಹೆಚ್ಚಿಸಿಕೊಂಡರು. ನಂತರ ಅವರಿಗೆ ಸಿನಿಮಾ ಆಫರ್ಗಳು ಬರೋಕೆ ಆರಂಭ ಆದವು. ‘ಸೋಚ್ ನಾ ಸಕೆ’, ‘ಆಯತ್’, ‘ಲಾಲ್ ಇಷ್ಕ್’, ‘ಚನ್ನ ಮೆರೆಯಾ..’, ‘ತುಮ್ ಹಿ ಹೋ’, ಫಿರ್ ಲೇ ಆಯಾ ದಿಲ್’ ಸೇರಿ ಅನೇಕ ಹಿಂದಿ ಹಾಡುಗಳನ್ನು ಹಾಡಿದ್ದರು.

ಇದನ್ನೂ ಓದಿ:Arijit Singh: ಗುಂಪಿನಲ್ಲಿ ಅರಿಜಿತ್​ ಸಿಂಗ್​​ ಕೈ ಎಳೆದ ಮಹಿಳಾ ಅಭಿಮಾನಿ; ಗಾಯಗೊಂಡ ಗಾಯಕನ ವಿಡಿಯೋ ವೈರಲ್​

ಅರಿಜಿತ್ ಸಿಂಗ್ ಅವರು ಕನ್ನಡದಲ್ಲಿ ಕೇವಲ ಎರಡು ಹಾಡನ್ನು ಹಾಡಿದ್ದಾರೆ. 2014ರಲ್ಲಿ ರಿಲೀಸ್ ಆದ ‘ನಿನ್ನಿಂದಲೇ’ ಸಿನಿಮಾದ ‘ಮೌನ ತಾಳಿತೆ..’ ಹಾಡನ್ನು ಹಾಡಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದ ಕನ್ನಡ ವರ್ಷನ್ ‘ದೇವ ದೇವ..’ ಹಾಡನ್ನು ಹಾಡಿದ್ದರು.

ಅರಿಜಿತ್ ಸಿಂಗ್ ಅವರು ಇತ್ತೀಚೆಗೆ ಲಂಡನ್ಗೆ ತೆರಳಿದ್ದರು. ಈ ವೇಳೆ ಅವರೇ ಬರೆದ ‘ಪ್ರೊಟೆಸ್ಟ್’ ಹಾಡನ್ನು ಹಾಡಿ ಎಂದು ಕೆಲ ಅಭಿಮಾನಿಗಳು ಬೇಡಿಕೆ ಇಟ್ಟಿದ್ದರು. ಇದರಿಂದ ಸಿಟ್ಟಾದ ಅರಿಜಿತ್ ಸಿಂಗ್ ಅವರು, ‘ಇದು ಸಮಯವಲ್ಲ. ನಾನು ಇಲ್ಲಿ ಬಂದಿರೋದು ಮನರಂಜನೆ ಮಾಡಲು’ ಎಂದು ಹೇಳಿದ್ದರು. ಅವರು ಈ ರೀತಿ ಸಿಟ್ಟಾಗೋದು ತುಂಬಾನೇ ಕಡಿಮೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ