AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪಲ್​ ಐಪ್ಯಾಡ್​ ವಿರುದ್ಧ ಹೃತಿಕ್​ ರೋಷನ್​ ಗರಂ; ಕಂಪನಿ ಮಾಡಿದ ತಪ್ಪು ಏನು?

ಆ್ಯಪಲ್​ ಕಂಪನಿಯು ಹೊಸ ‘ಐಪ್ಯಾಡ್​ ಪ್ರೋ’ ಪರಿಚಯಿಸಿದೆ. ಇದರ ಜಾಹೀರಾತು ನೋಡಿದ ಅನೇಕರು ಕಿಡಿಕಾರುತ್ತಿದ್ದಾರೆ. ನಟ ಹೃತಿಕ್​ ರೋಷನ್​ ಅವರು ಕೂಡ ಈ ಜಾಹೀರಾತನ್ನು ನೋಡಿ ಟೀಕೆ ಮಾಡಿದ್ದಾರೆ. ಕಲೆ, ಬರಹ, ಸಂಗೀತಕ್ಕೆ ಈ ಜಾಹೀರಾತಿನ ಮೂಲಕ ಆ್ಯಪಲ್​ ಕಂಪನಿಯು ಅವಮಾನ ಮಾಡಿದೆ ಎಂದು ಅನೇಕ ಸೆಲೆಬ್ರಿಟಿಗಳು ಅಸಮಾಧಾನ ಹೊರಹಾಕಿದ್ದಾರೆ.

ಆ್ಯಪಲ್​ ಐಪ್ಯಾಡ್​ ವಿರುದ್ಧ ಹೃತಿಕ್​ ರೋಷನ್​ ಗರಂ; ಕಂಪನಿ ಮಾಡಿದ ತಪ್ಪು ಏನು?
ಹೃತಿಕ್​ ರೋಷನ್​
ಮದನ್​ ಕುಮಾರ್​
|

Updated on: May 10, 2024 | 10:53 PM

Share

ಸೆಲೆಬ್ರಿಟಿಗಳಿಗೆ ಆ್ಯಪಲ್​ ಕಂಪನಿಯ ವಸ್ತುಗಳನ್ನು ಬಳಸುವುದು ಒಂದು ಹೆಮ್ಮೆ. ಬಹುತೇಕ ಎಲ್ಲ ಸೆಲೆಬ್ರಿಟಿಗಳು ಆ್ಯಪಲ್​ ಕಂಪನಿಯ ಐಫೋನ್​, ಐಪ್ಯಾಡ್​ (Apple iPad) ಬಳಸುತ್ತಾರೆ. ಅಮೆರಿಕದ ಈ ಶ್ರೀಮಂತ ಕಂಪನಿಯ ವಿರುದ್ಧ ಈಗ ಅನೇಕ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಾಲಿವುಡ್​ ನಟ ಹೃತಿಕ್​ ರೋಷನ್​ ಕೂಡ ಗರಂ ಆಗಿದ್ದಾರೆ. ಆ್ಯಪಲ್​ ಕಂಪನಿಯ ಒಂದು ಹೊಸ ಜಾಹೀರಾತನ್ನು (Apple iPad Advertisement) ಅವರು ಖಾರವಾಗಿ ಖಂಡಿಸಿದ್ದಾರೆ. ಅಷ್ಟಕ್ಕೂ ಈ ಜಾಹೀರಾತಿನಲ್ಲಿ ಏನಿದೆ? ಹೃತಿಕ್ ರೋಷನ್​ (Hrithik Roshan) ಅವರು ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ ಮಾಹಿತಿ..

ಕೆಲವೇ ದಿನಗಳ ಹಿಂದೆ ಆ್ಯಪಲ್​ ಕಂಪನಿಯು ತಮ್ಮ ಹೊಸ ಐಪ್ಯಾಡ್​ನ ಜಾಹೀರಾತನ್ನು ಬಿಡುಗಡೆ ಮಾಡಿದೆ. ‘ಐಪ್ಯಾಡ್​ ಪ್ರೋ’ ಎಷ್ಟು ಪವರ್​ಫುಲ್ ಆಗಿದೆ ಎಂಬುದನ್ನು ತಿಳಿಸುವ ಸಲುವಾಗಿ ಈ ಜಾಹೀರಾತನ್ನು ಸಿದ್ಧಪಡಿಸಲಾಗಿದೆ. ಪುಸ್ತಕಗಳು, ಸಂಗೀತ ಸಾಧನಗಳು, ಟಿವಿ, ಗ್ರಾಮೋಫೋನ್​, ಗೊಂಬೆ, ಪೇಂಟಿಂಗ್ಸ್​, ಕಲಾಕೃತಿಗಳು, ಸ್ಪೀಕರ್​, ಕ್ಯಾಮೆರಾ ಮುಂತಾದ ವಸ್ತುಗಳನ್ನು ದೊಡ್ಡ ಕ್ರಶರ್​ ಮೂಲಕ ನಾಶಪಡಿಸುವ ದೃಶ್ಯ ಇದರಲ್ಲಿ ಇದೆ. ಆ ಎಲ್ಲ ಸಾಧನಗಳ ಕೆಲಸವನ್ನು ಕೇವಲ ಒಂದು ಐಪ್ಯಾಡ್​ ಮಾಡುತ್ತದೆ ಎಂಬುದನ್ನು ಗ್ರಾಹಕರಿಗೆ ತಿಳಿಸುವುದು ಈ ಜಾಹೀರಾತಿನ ಉದ್ದೇಶ.

ಈ ಜಾಹೀರಾತನ್ನು ನೋಡಿದ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಜಾಹೀರಾತಿನಿಂದ ಸಿನಿಮಾ, ಸಂಗೀತ, ಚಿತ್ರಕಲೆ, ಬರವಣಿಗೆ ಮುಂತಾದ ವಿಷಯಗಳಿಗೆ ಅವಮಾನ ಮಾಡಲಾಗಿದೆ ಎಂದು ಹಾಲಿವುಡ್​ನ ಸೆಲೆಬ್ರಿಟಿಗಳು ಕೂಡ ಅಭಿಪ್ರಾಯ ತಿಳಿಸಿದ್ದಾರೆ. ನಟ ಹೃತಿಕ್​ ರೋಷನ್​ ಅವರಿಗೂ ಈ ಜಾಹೀರಾತು ಇಷ್ಟ ಆಗಿಲ್ಲ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೃತಿಕ್​ ರೋಷನ್​ ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಆ್ಯಪಲ್​ ಕಂಪನಿಯ ಈ ಹೊಸ ಜಾಹೀರಾತು ಎಷ್ಟು ಕಳಪೆಯಾಗಿದೆ ಮತ್ತು ಅಜ್ಞಾನದಿಂದ ಕೂಡಿದೆ’ ಎಂದು ಹೃತಿಕ್​ ರೋಷನ್​ ಅವರು ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಹಲವು ಕಲಾ ಪ್ರಕಾರಗಳಿಗೆ ಆ್ಯಪಲ್​ ಕಂಪನಿಯು ಈ ಜಾಹೀರಾತಿನ ಮೂಲಕ ಅವಮಾನ ಮಾಡಿದೆ ಎಂದು ನೆಟ್ಟಿಗರು ಕೂಡ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಹೃತಿಕ್​ ರೋಷನ್​, ಜಾನ್​ ಅಬ್ರಾಹಂ ಸಹಪಾಠಿಗಳು ಎಂಬುದು ನಿಮಗೆ ಗೊತ್ತಾ? ಫೋಟೋ ಸಾಕ್ಷಿ

ಸಿನಿಮಾ ವಿಚಾರಕ್ಕೆ ಬರುವುದಾದರೆ, ಹೃತಿಕ್​ ರೋಷನ್​ ಅವರು ‘ವಾರ್​ 2’ ಸಿನಿಮಾದ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್ ಕೂಡ ನಟಿಸುತ್ತಿದ್ದಾರೆ. ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್​ ನಡೆಯುತ್ತಿದೆ. ‘ಯಶ್​ ರಾಜ್​ ಫಿಲ್ಮ್ಸ್​’ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾಗೆ ಅಯಾನ್​ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ