AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ ಹೃತಿಕ್ ರೋಷನ್

‘ವಾರ್’ ಚಿತ್ರದಲ್ಲಿ ಹೃತಿಕ್ ಅಭಿನಯಿಸಿದ್ದರು. ಇದಕ್ಕೆ ಸೀಕ್ವೆಲ್ ರೆಡಿ ಆಗುತ್ತಿದ್ದು ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ. ಅವರು ಸಿನಿಮಾ ಹೇಗಿರಲಿದೆ ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಜೂನಿಯರ್ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ. ‘ವಾರ್ ಸೀಕ್ವೆಲ್​ನಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಒಳ್ಳೆಯ ಸ್ಕ್ರಿಪ್ಟ್ ಕೂಡ ಇದೆ’ ಎಂದಿದ್ದಾರೆ ಹೃತಿಕ್.

ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ ಹೃತಿಕ್ ರೋಷನ್
ಜೂನಿಯರ್​ ಎನ್​ಟಿಆರ್-ಹೃತಿಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 02, 2024 | 10:24 AM

Share

ದಕ್ಷಿಣ ಭಾರತದ ಕಲಾವಿದರಿಗೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿ ಆಗುತ್ತಿದೆ. ನಟ ಯಶ್ (Yash) ಅವರಿಗೆ ‘ರಾಮಾಯಣ’ ಸಿನಿಮಾದಲ್ಲಿ ನಟಿಸೋ ಆಫರ್ ಬಂದಿದೆ. ಪ್ರಭಾಸ್ ಅವರು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಸಿನಿಮಾ ಮೂಲಕ ಬಾಲಿವುಡ್​​ನಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಾಲಿವುಡ್ (Bollywood) ಮಂದಿ ಕೂಡ ದಕ್ಷಿಣದವರನ್ನು ಪ್ರೀತಿಯಿಂದಲೇ ಸ್ವಾಗತಿಸುತ್ತಿದ್ದಾರೆ. ಜೂನಿಯರ್ ಎನ್​ಟಿಆರ್ ಅವರ ಜೊತೆ ಕೆಲಸ ಮಾಡೋಕೆ ಹೃತಿಕ್ ರೋಷನ್ ಸಾಕಷ್ಟು ಉತ್ಸುಕರಾಗಿದ್ದಾರೆ. ಸಂದರ್ಶನ ಒಂದರಲ್ಲಿ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಹೃತಿಕ್ ರೋಷನ್ ನಟನೆಯ ‘ಫೈಟರ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಗೆಲುವು ಕಂಡ ಬಳಿಕ ಅವರು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ‘ವಾರ್ 2’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ವಾರ್’ ಸಿನಿಮಾದಲ್ಲಿ ಹೃತಿಕ್ ನಟಿಸಿದ್ದರು. ಇದಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದ್ದು ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ. ಅವರು ಸಿನಿಮಾ ಹೇಗಿರಲಿದೆ ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಜೂನಿಯರ್ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ.

‘ವಾರ್ ಸೀಕ್ವೆಲ್​ನಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಒಳ್ಳೆಯ ಸ್ಕ್ರಿಪ್ಟ್ ಕೂಡ ಇದೆ. ಈ ಸಿನಿಮಾ ದೊಡ್ಡದಾಗಿರುತ್ತದೆ. ಸಾಕಷ್ಟು ಮನರಂಜನೆ ಇರಲಿದೆ. ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದು ಹೃತಿಕ್ ಹೇಳಿದ್ದಾರೆ. ಇವರ ಕಾಂಬಿನೇಷನ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ವಾರ್’ ಚಿತ್ರವನ್ನು ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ಹೃತಿಕ್ ರೋಷನ್, ಟೈಗರ್ ಶ್ರಾಫ್ ಮೊದಲಾದವರು ನಟಿಸಿದ್ದರು. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈ ಸಿನಿಮಾದ ಸೀಕ್ವೆಲ್​ನಲ್ಲಿ ಕೆಲವು ಪ್ರಮುಖ ಹೀರೋಗಳು ಅತಿಥಿ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಈ ಸಿನಿಮಾ ಯಶ್ ರಾಜ್ ಫಿಲ್ಮ್ಸ್ ಯೂನಿವರ್ಸ್ ಅಡಿಯಲ್ಲಿ ಸಿದ್ಧವಾಗುತ್ತಿದೆ.

‘ವಾರ್ 2’ ಚಿತ್ರವನ್ನು ಅಯಾನ್ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ’ದಂಥ ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಅವರಿಗೆ ಇದೆ. ಈ ಸಿನಿಮಾದ ಶೂಟಿಂಗ್ ಈ ತಿಂಗಳಿಂದ ಆರಂಭ ಆಗುವ ನಿರೀಕ್ಷೆ ಇದೆ. ಯಶ್ ರಾಜ್ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ಹೃತಿಕ್ ರೋಷನ್ ಆಸ್ತಿ ಎಷ್ಟು ಸಾವಿರ ಕೋಟಿ ರೂಪಾಯಿ? ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?

ಹೃತಿಕ್ ರೋಷನ್ ಅವರು ‘ಫೈಟರ್’ ಸಿನಿಮಾದಿಂದ ಗೆಲುವು ಕಂಡಿದ್ದಾರೆ. ಈ ಚಿತ್ರ 246 ಕೋಟಿ ರೂಪಾಯಿ ಬಾಚಿಕೊಂಡಿದೆ. ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಏಪ್ರಿಲ್​ನಲ್ಲಿ ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ‘ವಾರ್ 2’ ಬಳಿಕ ಪ್ರಶಾಂತ್ ನೀಲ್ ಸಿನಿಮಾದಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:03 am, Fri, 2 February 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ