AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್​ ಮುಂದೆ ಹೃತಿಕ್​ ರೋಷನ್​ ಏನೇನೂ ಅಲ್ಲ’: ವೈರಲ್​ ವಿಡಿಯೋದಲ್ಲಿ ಅಲ್ಲು ಅರ್ಜುನ್​ ಹೇಳಿಕೆ

ಪ್ರಭಾಸ್​ ಅವರು ‘ಕಲ್ಕಿ 2898 ಎಡಿ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಆದರೆ ಅದನ್ನು ಬಾಲಿವುಡ್​ನ ಕೆಲವರು ಸಹಿಸಿಕೊಂಡಂತಿಲ್ಲ. ಈಗ ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ ನಡುವೆ ಯಾವುದು ಗ್ರೇಟ್​ ಎಂಬ ಕುರಿತು ಸಿನಿಪ್ರಿಯರು ಚರ್ಚೆ ನಡೆಸಿದ್ದಾರೆ. ಕೆಲವು ಹಳೇ ವಿಡಿಯೋವನ್ನು ಎಳೆದು ತಂದು ವೈರಲ್​ ಮಾಡಲಾಗಿದೆ.

‘ಪ್ರಭಾಸ್​ ಮುಂದೆ ಹೃತಿಕ್​ ರೋಷನ್​ ಏನೇನೂ ಅಲ್ಲ’: ವೈರಲ್​ ವಿಡಿಯೋದಲ್ಲಿ ಅಲ್ಲು ಅರ್ಜುನ್​ ಹೇಳಿಕೆ
ಹೃತಿಕ್​ ರೋಷನ್​, ಅಲ್ಲು ಅರ್ಜುನ್​, ಪ್ರಭಾಸ್​
ಮದನ್​ ಕುಮಾರ್​
|

Updated on: Aug 23, 2024 | 4:00 PM

Share

‘ಬಾಲಿವುಡ್​ ವರ್ಸಸ್​ ದಕ್ಷಿಣ ಭಾರತ ಚಿತ್ರರಂಗ’ ಎಂಬ ಚರ್ಚೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಕಾರಣ ಆಗಿದ್ದು ಬಾಲಿವುಡ್​ ನಟ ಅರ್ಷದ್​ ವಾರ್ಸಿ ಇತ್ತೀಚೆಗೆ ನೀಡಿದ ಹೇಳಿಕೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​ ಜೋಕರ್​ ರೀತಿ ಕಾಣ್ತಾರೆ ಎಂದು ಅರ್ಷದ್ ವಾರ್ಸಿ ಹೇಳಿದ್ದನ್ನು ಸೌತ್​ ಫಿಲ್ಮ್​ ಇಂಡಸ್ಟ್ರಿಯ ಅನೇಕರು ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್​ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಯಾವುದು ಮೇಲೆ ಎಂಬ ಬಿಸಿಬಿಸಿ ಚರ್ಚೆ ಜೋರಾಗಿದೆ. ಈ ನಡುವೆ ಅಲ್ಲು ಅರ್ಜುನ್​ ಅವರು ಹೃತಿಕ್​ ರೋಷನ್​ ಬಗ್ಗೆ ಮಾತನಾಡಿದ್ದ ಒಂದು ವಿಡಿಯೋ ವೈರಲ್​ ಆಗುತ್ತಿದೆ.

ವೇದಿಕೆ ಕಾರ್ಯಕ್ರಮವೊಂದರಲ್ಲಿ ಅಲ್ಲು ಅರ್ಜುನ್​ ಅವರು ಪ್ರಭಾಸ್​ ಅವರನ್ನು ಹೊಗಳುತ್ತಿದ್ದರು. ಈ ವೇಳೆ ರಾಜಮೌಳಿಯ ಹೇಳಿಕೆಯನ್ನು ಅಲ್ಲು ಅರ್ಜುನ್​ ಪುನರುಚ್ಚರಿಸಿದರು. ‘ರಾಜಮೌಳಿ ಹೇಳಿದಂತೆ ಪ್ರಭಾಸ್​ ಮುಂದೆ ಹೃತಿಕ್ ರೋಷನ್​ ಏನೇನೂ ಅಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು. ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಲಾಗುತ್ತಿದೆ.

old video of Allu Arjun’s comments on Hrithik Roshan resurfacing byu/KramerDwight inBollyBlindsNGossip

ಈ ಮೊದಲು ‘ಕೆಜಿಎಫ್​ 2’, ‘ಪುಷ್ಪ’, ‘ಬಾಹುಬಲಿ’ ಮುಂತಾದ ಸಿನಿಮಾಗಳು ಅಬ್ಬರಿಸಿದಾಗಲೂ ಹಿಂದಿ ಚಿತ್ರರಂಗ ವರ್ಸಸ್ ಸೌತ್​ ಸಿನಿಮಾ ಇಂಡಸ್ಟ್ರಿ ಎಂಬ ಟಾಕ್​ ಶುರುವಾಗಿತ್ತು. ಇವೆರಡರಲ್ಲಿ ಯಾವುದು ಗ್ರೇಟ್​ ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಹಲವು ಬಗೆಯ ಅಭಿಪ್ರಾಯ ತಿಳಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಹಲವು ಸಿನಿಮಾಗಳು ಸೋತಾಗ ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ನಾವು ದಕ್ಷಿಣದ ಮಂದಿಯನ್ನು ನೋಡಿ ಕಲಿಯಬೇಕು’ ಅಂತ ಹೇಳಿದ್ದುಂಟು.

ಇದನ್ನೂ ಓದಿ: ‘ಕಲ್ಕಿ ಚಿತ್ರದಲ್ಲಿ ಪ್ರಭಾಸ್​ನ ಜೋಕರ್ ರೀತಿ ತೋರಿಸಲಾಗಿದೆ’; ಬಾಲಿವುಡ್ ನಟನ ಬೇಸರ

ಅಲ್ಲು ಅರ್ಜುನ್​ ಅವರ ಹಳೇ ವಿಡಿಯೋ ಈಗ ಮತ್ತೆ ವೈರಲ್​ ಆಗಿದ್ದು, ಅದನ್ನು ಇಟ್ಟುಕೊಂಡು ಜನರು ತಮ್ಮ ವಾದ ಮಂಡಿಸುತ್ತಿದ್ದಾರೆ. ಪ್ರಭಾಸ್​ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿ ಹಬ್ಬ ಮಾಡುತ್ತಿದ್ದಾರೆ. ಆದರೆ ಹೃತಿಕ್​ ರೋಷನ್​ ಅಭಿಮಾನಿಗಳು ಅಲ್ಲು ಅರ್ಜನ್​ ಹೇಳಿದ ಮಾತನ್ನು ಒಪ್ಪಿಕೊಂಡಿಲ್ಲ. ಈಗಂತೂ ಚಿತ್ರರಂಗದಲ್ಲಿ ಭಾಷೆಯ ಗಡಿ ಇಲ್ಲದಂತಾಗಿದೆ. ಟಾಲಿವುಡ್​ನ ಸೆಲೆಬ್ರಿಟಿಗಳು ಬಾಲಿವುಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಬಾಲಿವುಡ್​ ಮಂದಿ ಕೂಡ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ‘ವಾರ್​ 2’ ಸಿನಿಮಾದಲ್ಲಿ ಹೃತಿಕ್​ ರೋಷನ್​ ಮತ್ತು ಟಾಲಿವುಡ್​ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್