AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್​ ಮುಂದೆ ಹೃತಿಕ್​ ರೋಷನ್​ ಏನೇನೂ ಅಲ್ಲ’: ವೈರಲ್​ ವಿಡಿಯೋದಲ್ಲಿ ಅಲ್ಲು ಅರ್ಜುನ್​ ಹೇಳಿಕೆ

ಪ್ರಭಾಸ್​ ಅವರು ‘ಕಲ್ಕಿ 2898 ಎಡಿ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಆದರೆ ಅದನ್ನು ಬಾಲಿವುಡ್​ನ ಕೆಲವರು ಸಹಿಸಿಕೊಂಡಂತಿಲ್ಲ. ಈಗ ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ ನಡುವೆ ಯಾವುದು ಗ್ರೇಟ್​ ಎಂಬ ಕುರಿತು ಸಿನಿಪ್ರಿಯರು ಚರ್ಚೆ ನಡೆಸಿದ್ದಾರೆ. ಕೆಲವು ಹಳೇ ವಿಡಿಯೋವನ್ನು ಎಳೆದು ತಂದು ವೈರಲ್​ ಮಾಡಲಾಗಿದೆ.

‘ಪ್ರಭಾಸ್​ ಮುಂದೆ ಹೃತಿಕ್​ ರೋಷನ್​ ಏನೇನೂ ಅಲ್ಲ’: ವೈರಲ್​ ವಿಡಿಯೋದಲ್ಲಿ ಅಲ್ಲು ಅರ್ಜುನ್​ ಹೇಳಿಕೆ
ಹೃತಿಕ್​ ರೋಷನ್​, ಅಲ್ಲು ಅರ್ಜುನ್​, ಪ್ರಭಾಸ್​
ಮದನ್​ ಕುಮಾರ್​
|

Updated on: Aug 23, 2024 | 4:00 PM

Share

‘ಬಾಲಿವುಡ್​ ವರ್ಸಸ್​ ದಕ್ಷಿಣ ಭಾರತ ಚಿತ್ರರಂಗ’ ಎಂಬ ಚರ್ಚೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಕಾರಣ ಆಗಿದ್ದು ಬಾಲಿವುಡ್​ ನಟ ಅರ್ಷದ್​ ವಾರ್ಸಿ ಇತ್ತೀಚೆಗೆ ನೀಡಿದ ಹೇಳಿಕೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​ ಜೋಕರ್​ ರೀತಿ ಕಾಣ್ತಾರೆ ಎಂದು ಅರ್ಷದ್ ವಾರ್ಸಿ ಹೇಳಿದ್ದನ್ನು ಸೌತ್​ ಫಿಲ್ಮ್​ ಇಂಡಸ್ಟ್ರಿಯ ಅನೇಕರು ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್​ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಯಾವುದು ಮೇಲೆ ಎಂಬ ಬಿಸಿಬಿಸಿ ಚರ್ಚೆ ಜೋರಾಗಿದೆ. ಈ ನಡುವೆ ಅಲ್ಲು ಅರ್ಜುನ್​ ಅವರು ಹೃತಿಕ್​ ರೋಷನ್​ ಬಗ್ಗೆ ಮಾತನಾಡಿದ್ದ ಒಂದು ವಿಡಿಯೋ ವೈರಲ್​ ಆಗುತ್ತಿದೆ.

ವೇದಿಕೆ ಕಾರ್ಯಕ್ರಮವೊಂದರಲ್ಲಿ ಅಲ್ಲು ಅರ್ಜುನ್​ ಅವರು ಪ್ರಭಾಸ್​ ಅವರನ್ನು ಹೊಗಳುತ್ತಿದ್ದರು. ಈ ವೇಳೆ ರಾಜಮೌಳಿಯ ಹೇಳಿಕೆಯನ್ನು ಅಲ್ಲು ಅರ್ಜುನ್​ ಪುನರುಚ್ಚರಿಸಿದರು. ‘ರಾಜಮೌಳಿ ಹೇಳಿದಂತೆ ಪ್ರಭಾಸ್​ ಮುಂದೆ ಹೃತಿಕ್ ರೋಷನ್​ ಏನೇನೂ ಅಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು. ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಲಾಗುತ್ತಿದೆ.

old video of Allu Arjun’s comments on Hrithik Roshan resurfacing byu/KramerDwight inBollyBlindsNGossip

ಈ ಮೊದಲು ‘ಕೆಜಿಎಫ್​ 2’, ‘ಪುಷ್ಪ’, ‘ಬಾಹುಬಲಿ’ ಮುಂತಾದ ಸಿನಿಮಾಗಳು ಅಬ್ಬರಿಸಿದಾಗಲೂ ಹಿಂದಿ ಚಿತ್ರರಂಗ ವರ್ಸಸ್ ಸೌತ್​ ಸಿನಿಮಾ ಇಂಡಸ್ಟ್ರಿ ಎಂಬ ಟಾಕ್​ ಶುರುವಾಗಿತ್ತು. ಇವೆರಡರಲ್ಲಿ ಯಾವುದು ಗ್ರೇಟ್​ ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಹಲವು ಬಗೆಯ ಅಭಿಪ್ರಾಯ ತಿಳಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಹಲವು ಸಿನಿಮಾಗಳು ಸೋತಾಗ ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ನಾವು ದಕ್ಷಿಣದ ಮಂದಿಯನ್ನು ನೋಡಿ ಕಲಿಯಬೇಕು’ ಅಂತ ಹೇಳಿದ್ದುಂಟು.

ಇದನ್ನೂ ಓದಿ: ‘ಕಲ್ಕಿ ಚಿತ್ರದಲ್ಲಿ ಪ್ರಭಾಸ್​ನ ಜೋಕರ್ ರೀತಿ ತೋರಿಸಲಾಗಿದೆ’; ಬಾಲಿವುಡ್ ನಟನ ಬೇಸರ

ಅಲ್ಲು ಅರ್ಜುನ್​ ಅವರ ಹಳೇ ವಿಡಿಯೋ ಈಗ ಮತ್ತೆ ವೈರಲ್​ ಆಗಿದ್ದು, ಅದನ್ನು ಇಟ್ಟುಕೊಂಡು ಜನರು ತಮ್ಮ ವಾದ ಮಂಡಿಸುತ್ತಿದ್ದಾರೆ. ಪ್ರಭಾಸ್​ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿ ಹಬ್ಬ ಮಾಡುತ್ತಿದ್ದಾರೆ. ಆದರೆ ಹೃತಿಕ್​ ರೋಷನ್​ ಅಭಿಮಾನಿಗಳು ಅಲ್ಲು ಅರ್ಜನ್​ ಹೇಳಿದ ಮಾತನ್ನು ಒಪ್ಪಿಕೊಂಡಿಲ್ಲ. ಈಗಂತೂ ಚಿತ್ರರಂಗದಲ್ಲಿ ಭಾಷೆಯ ಗಡಿ ಇಲ್ಲದಂತಾಗಿದೆ. ಟಾಲಿವುಡ್​ನ ಸೆಲೆಬ್ರಿಟಿಗಳು ಬಾಲಿವುಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಬಾಲಿವುಡ್​ ಮಂದಿ ಕೂಡ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ‘ವಾರ್​ 2’ ಸಿನಿಮಾದಲ್ಲಿ ಹೃತಿಕ್​ ರೋಷನ್​ ಮತ್ತು ಟಾಲಿವುಡ್​ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್