Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಆರಂಭ ಆಗಲಿದೆ ‘ಕ್ರಿಶ್ 4’ ಶೂಟಿಂಗ್’; ಸ್ಟಾರ್ ನಿರ್ದೇಶಕನಿಗೆ ಅವಕಾಶ?

‘ಕ್ರಿಶ್ 4’ ಬಗ್ಗೆ 2021ರಲ್ಲೇ ಅಪ್​ಡೇಟ್ ಸಿಕ್ಕಿತ್ತು. ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂದು ಹೃತಿಕ್ ರೋಷನ್ ಅಪ್​​ಡೇಟ್ ಕೊಟ್ಟಿದ್ದರು. ಈ ಚಿತ್ರವನ್ನು ಹೃತಿಕ್ ತಂದೆ ರಾಕೇಶ್ ರೋಷನ್ ಅವರೇ ನಿರ್ದೇಶನ ಮಾಡಬೇಕಿತ್ತು. ಆದರೆ, ಈಗ ಅವರಿಗೆ ಸಿನಿಮಾ ನಿರ್ದೇಶನ ಮಾಡುವಷ್ಟು ಶಕ್ತಿ ಉಳಿದುಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ

ಶೀಘ್ರವೇ ಆರಂಭ ಆಗಲಿದೆ ‘ಕ್ರಿಶ್ 4’ ಶೂಟಿಂಗ್’; ಸ್ಟಾರ್ ನಿರ್ದೇಶಕನಿಗೆ ಅವಕಾಶ?
ಹೃತಿಕ್
Follow us
ರಾಜೇಶ್ ದುಗ್ಗುಮನೆ
|

Updated on: May 04, 2024 | 12:46 PM

ಬಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್ ಕೊಟ್ಟಿದ್ದು ‘ಕ್ರಿಶ್’ ಸರಣಿ. ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ಹಾಗೂ ‘ಕ್ರಿಶ್ 3’ (Krish 3) ಸಿನಿಮಾಗಳು ಗೆದ್ದು ಬೀಗಿದ್ದವು. ಸೂಪರ್ ಹೀರೋ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಸೈನ್ಸ್​ ಫಿಕ್ಷನ್ ಫ್ಯಾಂಟಸಿ ಕಥೆಯನ್ನು ಒಳಗೊಂಡಕ್ರಿಶ್ 4’ ಚಿತ್ರ ಬರೋಕೆ ರೆಡಿ ಆಗಿದೆ. ಈ ಬಗ್ಗೆ ಸಿದ್ದಾರ್ಥ್ ಆನಂದ್ ಅವರು ಅಪ್​​ಡೇಟ್​ ಕೊಟ್ಟಿದ್ದಾರೆ.

‘ಕ್ರಿಶ್ 4’ ಬಗ್ಗೆ 2021ರಲ್ಲೇ ಅಪ್​ಡೇಟ್ ಸಿಕ್ಕಿತ್ತು. ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂದು ಹೃತಿಕ್ ರೋಷನ್ ಅಪ್​​ಡೇಟ್ ಕೊಟ್ಟಿದ್ದರು. ಈ ಚಿತ್ರವನ್ನು ಹೃತಿಕ್ ತಂದೆ ರಾಕೇಶ್ ರೋಷನ್ ಅವರೇ ನಿರ್ದೇಶನ ಮಾಡಬೇಕಿತ್ತು. ಆದರೆ, ಈಗ ಅವರಿಗೆ ಸಿನಿಮಾ ನಿರ್ದೇಶನ ಮಾಡುವಷ್ಟು ಶಕ್ತಿ ಉಳಿದುಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಈ ಸಿನಿಮಾದ ನಿರ್ದೇಶನದ ಜವಾಬ್ದಾರಿ ಸಿದ್ದಾರ್ಥ್ ಆನಂದ್ ಅವರ ಕೈಗೆ ಹೋಗಿದೆ ಎಂದು ಹೇಳಲಾಗುತ್ತಿದೆ. ಅವರು ಸಿನಿಮಾ ಕುರಿತು ಮಾಹಿತಿ ನೀಡಿದ್ದಾರೆ.

ಇತ್ತೀಚೆಗದ ಸೋಶಿಯಲ್ ಮೀಡಿಯಾ ಪೇಜ್ ಒಂದರಲ್ಲಿ ಹೃತಿಕ್ ರೋಷನ್ ಅವರ ಫೋಟೋ ಅಪ್​ಲೋಡ್ ಮಾಡಲಾಗಿತ್ತು. ‘ಆತ ಬರುತ್ತಿದ್ದಾನೆ’ ಎಂದು ಕ್ಯಾಪ್ಶನ್ ನೀಡಿ, ಕ್ರಿಶ್ ಫೋಟೋ ಹಾಕಲಾಗಿತ್ತು. ಇದಕ್ಕೆ ಸಿದ್ದಾರ್ಥ್ ಆನಂದ್ ಉತ್ತರಿಸಿದ್ದು, ‘ಹೌದು ಆತ ಬರುತ್ತಿದ್ದಾನೆ’ ಎಂದಿದ್ದಾರೆ.

ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಸಿದ್ದಾರ್ಥ್ ಅವರಿಗೆ ಇದೆ. ಅವರು ಈಗ ‘ಕ್ರಿಶ್ 4’ ನಿರ್ದೇಶನದ ಜವಾಬ್ದಾರಿ ಪಡೆದರೇ ಎನ್ನುವ ಪ್ರಶ್ನೆ ಕಾಡಿದೆ. ಈ ಬಗ್ಗೆ ತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ವಾರ್​ 2’ ಸಿನಿಮಾ ಸೆಟ್​​ನಿಂದ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​​ ಫೋಟೋಸ್ ವೈರಲ್

ಸಿದ್ದಾರ್ಥ್ ಹಾಗೂ ಹೃತಿಕ್ ರೋಷನ್ ಈ ಮೊದಲು ‘ಬ್ಯಾಂಗ್ ಬ್ಯಾಂಗ್​’, ‘ವಾರ್​’ ಹಾಗೂ ‘ಫೈಟರ್’ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈ ಕಾರಣಕ್ಕೆ ಹೃತಿಕ್​ಗೆ ಸಿದ್ದಾರ್ಥ್ ಮೇಲೆ ಒಂದು ನಂಬಿಕೆ ಬಂದಿದೆ. ಸದ್ಯ ಹೃತಿಕ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನ ಜೂನಿಯರ್ ಎನ್​ಟಿಆರ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!