AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಿರ್ದೇಶಕರ ಬಗ್ಗೆ ಹೃತಿಕ್ ರೋಷನ್ ಬೇಸರ; ವಿಲನ್ ಪಾತ್ರ ಕೇಳಿದ ನಟ

ಹೃತಿಕ್ ರೋಷನ್ ಬಾಲಿವುಡ್ ನಿರ್ದೇಶಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೀರೋ ಪಾತ್ರಗಳೇ ಸಿಗುತ್ತಿರುವುದರಿಂದ ಬೇಸರಗೊಂಡಿರುವ ಅವರು, 'ಲಕ್ ಬೈ ಚಾನ್ಸ್' ಚಿತ್ರದ 'ಜಫರ್' ರೀತಿಯ ನೆಗೆಟಿವ್ ಶೇಡ್ ಪಾತ್ರಗಳಿಗೆ ಒಲವು ತೋರಿದ್ದಾರೆ. ಸ್ಟಾರ್ ನಟರಿಗೆ ಒಂದೇ ರೀತಿಯ ಪಾತ್ರಗಳನ್ನು ನೀಡುವ ನಿರ್ದೇಶಕರ ಧೋರಣೆಯು ಸಿನಿಮಾಗಳ ಸಂಖ್ಯೆ ಕಡಿಮೆಯಾಗಲು ಕಾರಣ ಎಂದು ಹೃತಿಕ್ ಹೇಳಿದ್ದಾರೆ.

ಬಾಲಿವುಡ್ ನಿರ್ದೇಶಕರ ಬಗ್ಗೆ ಹೃತಿಕ್ ರೋಷನ್ ಬೇಸರ; ವಿಲನ್ ಪಾತ್ರ ಕೇಳಿದ ನಟ
ಹೃತಿಕ್
ರಾಜೇಶ್ ದುಗ್ಗುಮನೆ
|

Updated on: Jun 05, 2026 | 10:45 AM

Share

ಬಾಲಿವುಡ್‌ ನಟ ಹೃತಿಕ್ ರೋಷನ್ (Hrithik Roshan) ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಆದರೆ, ಅವರು ವರ್ಷಕ್ಕೆ ಕೇವಲ ಒಂದೊಂದೇ ಸಿನಿಮಾ ಮಾಡುತ್ತಾ ಇದ್ದು, ಈ ಬಗ್ಗೆ ಅಭಿಮಾನಿಗಳಿಗೆ ಬೇಸರವಿದೆ. ಇದೀಗ ಹೃತಿಕ್ ರೋಷನ್ ತಾವೇಕೆ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಅಸಲಿ ರಹಸ್ಯವನ್ನು ಬಿಚ್ಚಿಟ್ಟಿದ್ದು, ಬಾಲಿವುಡ್ ನಿರ್ದೇಶಕರ ಧೋರಣೆಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಇತ್ತೀಚೆಗೆ ಪ್ಯಾರಿಸ್‌ನ ಐಫೆಲ್ ಟವರ್ ಮುಂದೆ ನಿಂತು ಸೆಲ್ಫಿ ಹಂಚಿಕೊಂಡಿರುವ ಹೃತಿಕ್, ‘ನನಗೆ ಯಾವ ರೀತಿಯ ಪಾತ್ರ ಬೇಕು ಎಂದು ಯಾರೋ ಕೇಳಿದರು. ಆಗ ನನಗೇ ಅಚ್ಚರಿಯಾಯಿತು. ‘ಲಕ್ ಬೈ ಚಾನ್ಸ್’ ಸಿನಿಮಾದ ಜಫರ್ ಪಾತ್ರ ನೆನಪಿದೆಯೇ? ಆ ತರಹದ ನೆಗೆಟಿವ್ ಶೇಡ್ ಇರೋ ಪಾತ್ರ ಸಿಕ್ಕರೆ ನಾನು ತಕ್ಷಣ ಒಪ್ಪಿಕೊಳ್ಳುತ್ತೇನೆ. ಆದರೆ ಬಾಲಿವುಡ್ ನಿರ್ದೇಶಕರಿಗೆ ನಾನು ಯಾವಾಗಲೂ ಕೇವಲ ಒಳ್ಳೆಯವನಾಗಿ (ಹೀರೋ) ನಟಿಸುವುದು ಮಾತ್ರ ಇಷ್ಟ. ಇದು ನಿಜಕ್ಕೂ ಬೇಸರದ ಸಂಗತಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ದೇಶಕಿ ಜೋಯಾ ಅಖ್ತರ್, ‘ಬನ್ನಿ, ಕಾಫಿ ಕುಡಿಯುತ್ತಾ ಚರ್ಚಿಸೋಣ’ ಎಂದು ಕಮೆಂಟ್ ಮಾಡಿದ್ದಾರೆ.

ಏನಿದು ‘ಜಫರ್’ ಪಾತ್ರ?

2009ರಲ್ಲಿ ತೆರೆಕಂಡ ‘ಲಕ್ ಬೈ ಚಾನ್ಸ್’ ಚಿತ್ರದಲ್ಲಿ ಹೃತಿಕ್ ರೋಷನ್ ಜಫರ್ ಖಾನ್’ ಎಂಬ ಸೂಪರ್‌ಸ್ಟಾರ್ ಪಾತ್ರದಲ್ಲಿ ಅತಿಥಿ ನಟನಾಗಿ ಕಾಣಿಸಿಕೊಂಡಿದ್ದರು. ಮೇಲ್ನೋಟಕ್ಕೆ ಅದ್ಭುತ ವ್ಯಕ್ತಿಯಾಗಿ, ಒಳಗಡೆ ಅತ್ಯಂತ ಸ್ವಾರ್ಥ ಹಾಗೂ ಅವಕಾಶವಾದಿ ಬುದ್ಧಿ ಹೊಂದಿರುವ ವಿಭಿನ್ನ ನೆಗೆಟಿವ್ ಪಾತ್ರ ಅದಾಗಿತ್ತು. ಅಭಿಮಾನಿಗಳು ಇಂದಿಗೂ ಆ ನಟನೆಯನ್ನು ಮೆಚ್ಚಿಕೊಳ್ಳುತ್ತಾರೆ.

ಇದನ್ನೂ ಓದಿ: ಹೃತಿಕ್ ವಿಚ್ಛೇದನದ ಬಗ್ಗೆ ಮಾತನಾಡಿದ ಸುಸ್ಸಾನೆ ಖಾನ್ ಸಹೋದರ 

ಬಾಲಿವುಡ್‌ನ ಸ್ಟಾರ್ ಸಿಸ್ಟಮ್‌ನಲ್ಲಿ ಒಮ್ಮೆ ನಟನಿಗೆ ದೊಡ್ಡ ಕಮರ್ಷಿಯಲ್ ಇಮೇಜ್ ಬಂದರೆ, ನಿರ್ದೇಶಕರು ಅದೇ ಮಾದರಿಯ ಕಥೆ ಮಾಡಿಕೊಂಡು ಬರುತ್ತಾರೆ ಎಂಬ ನಂಬಿಕೆ ಹೃತಿಕ್ ಅವರದ್ದು. ಅವರಿಗೆ ಒಂದೇ ರೀತಿಯ ಹೀರೋ ಪಾತ್ರಗಳು ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹೃತಿಕ್ ರೋಷನ್ ಇತ್ತೀಚೆಗೆ ಜೂನಿಯರ್ ಎನ್‌ಟಿಆರ್ ಜೊತೆ ‘ವಾರ್ 2’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಫ್ಲಾಪ್ ಆಯಿತು. ಸದ್ಯ ಅವರು ‘ಕ್ರಿಶ್ 4’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ