AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರ್ 2’ ಚಿತ್ರದ ಟ್ರೇಲರ್ ಬಗ್ಗೆ ದೊಡ್ಡ ಮಾಹಿತಿ ನೀಡಿದ ತಂಡ; ತಪ್ಪು ಈಗಲಾದರೂ ಸರಿ ಆಗುತ್ತಾ?

Hritik Roshan-Jr NTR: ಹೃತಿಕ್ ರೋಷನ್ ಮತ್ತು ಜೂ ಎನ್​ಟಿಆರ್ ನಟಿಸಿರುವ ಹಿಂದಿ ಸಿನಿಮಾ ‘ವಾರ್ 2’ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ ಒಂದು. ಇದು ಜೂ ಎನ್​ಟಿಆರ್ ಅವರ ಮೊದಲ ಹಿಂದಿ ಸಿನಿಮಾ ಆಗಿರಲಿದೆ. ಸಿನಿಮಾ ಆಗಸ್ಟ್ 15ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಜುಲೈ 25 ರಂದು ತೆರೆಗೆ ಬರಲಿದೆ. ಸಿನಿಮಾದ ಟೀಸರ್​ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಟ್ರೈಲರ್ ಹೇಗಿರಲಿದೆ ಕಾದು ನೋಡಬೇಕಿದೆ.

‘ವಾರ್ 2’ ಚಿತ್ರದ ಟ್ರೇಲರ್ ಬಗ್ಗೆ ದೊಡ್ಡ ಮಾಹಿತಿ ನೀಡಿದ ತಂಡ; ತಪ್ಪು ಈಗಲಾದರೂ ಸರಿ ಆಗುತ್ತಾ?
War 2
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 23, 2025 | 7:45 AM

Share

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಸ್ಪೈ ಯೂನಿವರ್ಸ್ ಭಾಗವಾದ ‘ವಾರ್ 2’ (War 2) ಸಿನಿಮಾ ಆಗಸ್ಟ್ 14ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಜೂನಿಯರ್ ಎನ್​ಟಿಆರ್ ಅವರು ನಟಿಸುತ್ತಿದ್ದಾರೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್ ಬಗ್ಗೆ ಈಗ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡಲಾಗುತ್ತಿದೆ. ಟ್ರೇಲರ್ ಲಾಂಚ್ ಸಿನಿಮಾದ ಒಂದು ಭಾಗವಾಗಿದೆ.

ಈ ಸಿನಿಮಾದಲ್ಲಿ ಒಂದು ವಿಶೇಷತೆ ಇದೆ. ಹೃತಿಕ್ ರೋಷನ್ ಹಾಗೂ ಜೂನಿಯರ್ ಎನ್​ಟಿಆರ್ ಚಿತ್ರರಂಗಕ್ಕೆ ಬಂದು 25 ವರ್ಷಗಳು ಕಳೆದಿದ್ದು, ಇವರಿಬ್ಬರೂ ಒಂದೇ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ಜುಲೈ 25ರಂದು ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹಿತಿಯನ್ನು ತಂಡದವರು ನೀಡಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಈ ಮೊದಲು ರಿಲೀಸ್ ಆದ ‘ವಾರ್ 2’ ಚಿತ್ರದ ಟೀಸರ್​ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು ಗೊತ್ತೇ ಇದೆ. ಈ ಟೀಸರ್ ರಿಲೀಸ್ ಆಗಿದ್ದು ಜೂನಿಯರ್ ಎನ್​ಟಿಆರ್ ಬರ್ತ್​ಡೇ ದಿನವಾಗಿತ್ತು. ಆದರೆ, ಚಿತ್ರತಂಡದವರು ಹೈಲೈಟ್ ಮಾಡಿದ್ದು ಹೃತಿಕ್ ರೋಷನ್ ಅವರನ್ನು. ಇದು ಜೂ.ಎನ್​ಟಿಆರ್ ಫ್ಯಾನ್ಸ್ ಬೇಸರಕ್ಕೆ ಕಾರಣ ಆಯಿತು. ಈಗ ಟ್ರೇಲರ್​ನಲ್ಲಿ ಆ ತಪ್ಪು ಸರಿ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.  ಈ ಚಿತ್ರದಲ್ಲಿ ಹೃತಿಕ್ ಅವರು ಕಬೀರ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರು ಈ ಮೊದಲು ವಾರ್ ಸಿನಿಮಾದಲ್ಲೂ ನಟಿಸಿದ್ದರು.

ಇದನ್ನೂ ಓದಿ:‘ವಾರ್ 2’ ಜೂ ಎನ್​ಟಿಆರ್​ಗೆ ನೋ ಹೇಳಿತಾ ಯಶ್ ರಾಜ್ ಫಿಲಮ್ಸ್

ಯಶ್ ರಾಜ್ ಫಿಲ್ಮ್ಸ್ ತಮ್ಮದೇ ಸ್ಪೈ ಯೂನಿವರ್ಸ್ ಮಾಡಿದ್ದಾರೆ. ಈ ಮೊದಲು ಬೇರೆ ಬೇರೆ ಸಿನಿಮಾಗಳಲ್ಲಿ ಬೇರೆ ಬೇರೆ ಹೀರೋಗಳು ಬಂದು ಅತಿಥಿ ಪಾತ್ರ ಮಾಡಿ ಹೋಗಿದ್ದರು. ‘ವಾರ್ 2’ ಚಿತ್ರದಲ್ಲಿ ಆ ರೀತಿ ಇರೋದಿಲ್ಲ ಎಂದು ತಂಡದವರು ಹೇಳಿದ್ದಾರೆ.

ಈ ಬಾರಿ ‘ವಾರ್ 2’ ಸಿನಿಮಾ ಬಗ್ಗೆ ನಿರ್ಮಾಪಕರಿಗೂ ದಕ್ಷಿಣದವರಿಗೂ ಸಾಕಷ್ಟು ನಿರೀಕ್ಷೆ ಇದೆ. ಇದಕ್ಕೆ ಕಾರಣ ಜೂನಿಯರ್ ಎನ್​ಟಿಆರ್​. ಇದೇ ಮೊದಲ ಬಾರಿಗೆ ಸ್ಪೈ ಯೂನಿವರ್ಸ್​ನಲ್ಲಿ ದಕ್ಷಿಣದ ಹೀರೋ ಒಬ್ಬರು ಕಾಣಿಸಿಕೊಂಡಿದ್ದಾರೆ. ಹೀಗಾಗಿ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಇದು ಜೂನಿಯರ್ ಎನ್​ಟಿಆರ್ ಅವರ ಮೊದಲ ಹಿಂದಿ ಸಿನಿಮಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Tue, 22 July 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು