Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ದೊಡ್ಡ ಸ್ಟಾರ್ ಅಲ್ಲ’; ‘ಆದಿಪುರುಷ್’ ಸೋಲಿನ ಬಳಿಕ ಮೊದಲ ಬಾರಿಗೆ ಮೌನ ಮುರಿದ ಸೈಫ್  

‘ಆದಿಪುರುಷ್’ ಸಿನಿಮಾ ಬಳಿಕ ನಟ ಸೈಫ್ ಅಲಿ ಖಾನ್​ಗೆ ದಕ್ಷಿಣ ಭಾರತದಿಂದ ಹೆಚ್ಚು ಆಫರ್​ಗಳು ಬರುತ್ತಿವೆ. ಅವರು ಜೂನಿಯರ್ ಎನ್​ಟಿಆರ್ ಅಭಿನಯದ ‘ದೇವರ’ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಇನ್ನೂ ಹಲವು ಸಿನಿಮಾಗಳಲ್ಲಿ ನೆಗೆಟಿವ್ ರೋಲ್​ ಬಂದಿದೆ. ಸೈಫ್ ವೆಬ್​ ಸೀರಿಸ್​ಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ.

‘ನಾನು ದೊಡ್ಡ ಸ್ಟಾರ್ ಅಲ್ಲ’; ‘ಆದಿಪುರುಷ್’ ಸೋಲಿನ ಬಳಿಕ ಮೊದಲ ಬಾರಿಗೆ ಮೌನ ಮುರಿದ ಸೈಫ್  
ಸೈಫ್ ಅಲಿ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Feb 08, 2024 | 11:44 AM

ನಟ ಸೈಫ್ ಅಲಿ ಖಾನ್ (Saif Ali Khan) ಅವರು ಹೀರೋ ಆಗಿ ಗಮನ ಸೆಳೆದ ಸಿನಿಮಾಗಳು ಕಡಿಮೆ. ಅವರು ಪೋಷಕ ಪಾತ್ರಗಳ ಮೂಲಕ ಮಿಂಚಿದ್ದೇ ಹೆಚ್ಚು. ಅವರನ್ನು ಸ್ಟಾರ್ ಎಂದು ಒಪ್ಪಿಕೊಳ್ಳೋಕೆ ಅನೇಕರಿಗೆ ಸಾಧ್ಯವಿಲ್ಲ. ಅಚ್ಚರಿ ಎಂದರೆ ಸೈಫ್ ಅಲಿ ಖಾನ್​ಗೂ ಈ ವಿಚಾರ ಮನವರಿಕೆ ಆಗಿದೆ. ತಾವು ಸ್ಟಾರ್ ಅಲ್ಲ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ‘ಆದಿಪುರುಷ್’ ಸೋಲಿನ ಬಳಿಕ ಮೊದಲ ಬಾರಿಗೆ ಅವರು ಈ ಚಿತ್ರದ ಬಗ್ಗೆ ಹಾಗೂ ತಮ್ಮ ಸ್ಟಾರ್​ಡಂ ಬಗ್ಗೆ ಮಾತನಾಡಿದ್ದಾರೆ.

ಫಿಲ್ಮ್ ಕಂಪಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ಹಂಚಿಕೊಂಡಿದ್ದಾರೆ. ಸೈಫ್ ಅಲಿ ಖಾನ್ ಅವರು ‘ಲಾಲ್ ಕಪ್ತಾನ್’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ದೊಡ್ಡ ಗಳಿಕೆ ಮಾಡುವಲ್ಲಿ ವಿಫಲವಾಗಿತ್ತು. ಇದನ್ನು ಸೈಫ್ ಅಲಿ ಖಾನ್ ನೆನಪಿಸಿಕೊಂಡಿದ್ದಾರೆ. ‘ನಾನು ಏಕಾಂಗಿಯಾಗಿ ಯಾವ ಚಿತ್ರವನ್ನೂ ಹಿಟ್ ಮಾಡುವ ಶಕ್ತಿ ಹೊಂದಿಲ್ಲ’ ಎಂದಿದ್ದಾರೆ ಅವರು.

‘ವಾಸ್ತವವನ್ನು ಒಪ್ಪಿಕೊಳ್ಳೋದು ಖುಷಿ ನೀಡುತ್ತದೆ. ನಾನು ಎಂದಿಗೂ ನನ್ನನ್ನು ಸ್ಟಾರ್ ಎಂದು ಭಾವಿಸಿಲ್ಲ. ನಾನು ಸ್ಟಾರ್ ಆಗಲು ಇಷ್ಟಪಡುತ್ತೇನೆ. ಆದರೆ ಭ್ರಮೆಯನ್ನು ಹೊಂದಲು ಇಷ್ಟಪಡುವುದಿಲ್ಲ. ನನ್ನ ಪಾಲಕರು ದೊಡ್ಡ ಸ್ಟಾರ್​ಗಳಾಗಿದ್ದರು. ತುಂಬಾ ಸಾಮಾನ್ಯವಾಗಿ ಇರುತ್ತಿದ್ದರು’ ಎಂದಿದ್ದಾರೆ ಅವರು.

‘ಆದಿಪುರುಷ್ ಉದಾಹರಣೆ ತೆಗೆದುಕೊಂಡರೆ ಜನರು ರಿಸ್ಕ್ ಬಗ್ಗೆ ಮಾತನಾಡುತ್ತಾರೆ. ಯಾವುದೇ ಸಿನಿಮಾ ಸೋತಾಗ ನಮಗೆ ನಾವೇ ಒಂದು ಮಾತನ್ನು ಹೇಳಿಕೊಳ್ಳಬೇಕು. ಉತ್ತಮ ಪ್ರಯತ್ನ. ಆದರೆ, ಅದೃಷ್ಟ ಇರಲಿಲ್ಲ ಎಂದು ಮುಂದೆ ಸಾಗಬೇಕು’ ಎಂದಿದ್ದಾರೆ ಸೈಫ್. ‘ಆದಿಪುರುಷ್’ ಸಿನಿಮಾದಲ್ಲಿ ಸೈಫ್ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿದ್ದರು. ಅವರ ಗೆಟಪ್ ಬಗ್ಗೆ, ಅವರು ಸಾಕಿದ್ದ ಬಾವಲಿ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು.

ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಸೈಫ್ ಅಲಿ ಖಾನ್, ‘ದೇವರ’ ಸಿನಿಮಾದಲ್ಲಿ ಆಯ್ತಾ ಅಪಘಾತ?

ಸೈಫ್ ಅಲಿ ಖಾನ್ ಅವರಿಗೆ ‘ಆದಿಪುರುಷ್’ ಬಳಿಕ ದಕ್ಷಿಣ ಭಾರತದಿಂದ ಹೆಚ್ಚು ಆಫರ್​ಗಳು ಬರುತ್ತಿವೆ. ಅವರು ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಇನ್ನೂ ಹಲವು ಸಿನಿಮಾಗಳಲ್ಲಿ ನೆಗೆಟಿವ್ ರೋಲ್​ ಬಂದಿದೆ. ಸೈಫ್ ಅಲಿ ಖಾನ್ ಅವರು ವೆಬ್​ ಸೀರಿಸ್​ಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ