‘ಆಮಂತ್ರಿಸಿದರೆ ಹೋಗಿ ಆಶೀರ್ವದಿಸುತ್ತೇವೆ’; ಝಹೀರ್-ಸೋನಾಕ್ಷಿ ಮದುವೆ ಬಗ್ಗೆ ಶತ್ರುಘ್ನ ಸಿನ್ಹಾ ಮಾತು

‘ಎಲ್ಲರೂ ನನಗೆ ಕರೆ ಮಾಡಿ ಮದುವೆ ಬಗ್ಗೆ ಕೇಳಿದರು. ಮಾಧ್ಯಮದವರಿಗೆ ಈ ಬಗ್ಗೆ ಗೊತ್ತು, ಆದರೆ ನನಗೆ ಈ ಬಗ್ಗೆ ಗೊತ್ತಿಲ್ಲ. ನಮಗೆ ಅವಳು ಮಾಹಿತಿ ನೀಡಲಿ ಎಂದು ಕಾಯುತ್ತಿದ್ದೇನೆ’ ಎಂದಿದ್ದಾರೆ ಶತ್ರುಘ್ನ. ಈ ಮೂಲಕ ಈ ವಿಚಾರದಲ್ಲಿ ಅಡ್ಡಗೋಡೇ ಮೇಲೆ ದೀಪ ಇಟ್ಟಿದ್ದಾರೆ.

‘ಆಮಂತ್ರಿಸಿದರೆ ಹೋಗಿ ಆಶೀರ್ವದಿಸುತ್ತೇವೆ’; ಝಹೀರ್-ಸೋನಾಕ್ಷಿ ಮದುವೆ ಬಗ್ಗೆ ಶತ್ರುಘ್ನ ಸಿನ್ಹಾ ಮಾತು
ಝಹೀರ್-ಸೋನಾಕ್ಷಿ ಮದುವೆ ಬಗ್ಗೆ ಶತ್ರುಘ್ನ ಸಿನ್ಹಾ ಮಾತು
Follow us
|

Updated on: Jun 11, 2024 | 8:53 AM

ಝಹೀರ್ ಇಖ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ (Sonakshi Sinha) ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಜೂನ್ 23ರಂದು ಮುಂಬೈನಲ್ಲಿ ಇವರ ವಿವಾಹ ಏರ್ಪಡುತ್ತಿದೆ ಎಂದು ವರದಿ ಆಗಿದೆ. ಈ ಮದುವೆ ಕುರಿತು ನಟ, ರಾಜಕಾರಣಿ ಹಾಗೂ ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಬಳಿ ಕೇಳಲಾಗಿದೆ. ಮದುವೆ ಬಗ್ಗೆ ಅಸಮಾಧಾನ ಇರುವಂತೆ ಉತ್ತರ ನೀಡಿದ್ದಾರೆ. ‘ಸೋನಾಕ್ಷಿ ನನ್ನ ಬಳಿ ಈ ಬಗ್ಗೆ ಏನನ್ನೂ ಹೇಳಿಲ್ಲ. ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ’ ಎಂದಿದ್ದಾರೆ ಶತ್ರುಘ್ನ ಸಿನ್ಹಾ.

‘ನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಹೆಂಡತಿ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ನಾವು ಬಯಸುತ್ತೇವೆ’ ಎಂದು ಶತ್ರುಘ್ನ ಸಿನ್ಹಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

‘ನಮ್ಮ ಮಗಳ ನಿರ್ಧಾರದ ಬಗ್ಗೆ ನಮಗೆ ನಂಬಿಕೆ ಇದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡೋಕೆ ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಝಹೀರ್ ಇಖ್ಬಾಲ್ ಜೊತೆ ಜೂನ್ 23ಕ್ಕೆ ಸೋನಾಕ್ಷಿ ಮದುವೆ; ಸಲ್ಲು ಗೆಳೆಯನ ಜೊತೆ ವಿವಾಹ

‘ಎಲ್ಲರೂ ನನಗೆ ಕರೆ ಮಾಡಿ ಮದುವೆ ಬಗ್ಗೆ ಕೇಳಿದರು. ಮಾಧ್ಯಮದವರಿಗೆ ಈ ಬಗ್ಗೆ ಗೊತ್ತು, ಆದರೆ ನನಗೆ ಈ ಬಗ್ಗೆ ಗೊತ್ತಿಲ್ಲ. ನಮಗೆ ಅವಳು ಮಾಹಿತಿ ನೀಡಲಿ ಎಂದು ಕಾಯುತ್ತಿದ್ದೇನೆ’ ಎಂದಿದ್ದಾರೆ ಶತ್ರುಘ್ನ. ಈ ಮೂಲಕ ಈ ವಿಚಾರದಲ್ಲಿ ಅಡ್ಡಗೋಡೇ ಮೇಲೆ ದೀಪ ಇಟ್ಟಿದ್ದಾರೆ. ಅವರಿಗೆ ನಿಜಕ್ಕೂ ಈ ಬಗ್ಗೆ ತಿಳಿದಿಲ್ಲವೇ ಅಥವಾ ಮದುವೆಗೆ ಸಮ್ಮತಿ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ