AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಸಂಬಂಧ ಹದಗೆಡಲು ಈ ನಿರ್ದೇಶಕಿಯೇ ಕಾರಣ? ರಿವೀಲ್ ಆಯ್ತು ವಿಚಾರ

ಆಮಿರ್ ಹಾಗೂ ರೀನಾ ದಂಪತಿ 2002ರಲ್ಲಿ ಸಂಬಂಧ ಕಡಿದುಕೊಂಡರು. ‘ಲಗಾನ್’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿತ್ತು. ಈ ಚಿತ್ರಕ್ಕೆ ಕಿರಣ್ ಅವರು ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು. ಇವರಿಬ್ಬರು ಸುತ್ತಾಟ ನಡೆಸಿದ್ದರಿಂದಲೇ ಆಮಿರ್-ರೀನಾ ಬೇರೆ ಆದರು ಎನ್ನುವ ಮಾತು ಮೊದಲಿನಿಂದಲೂ ಇದೆ. ಈ ವಿಚಾರದ ಬಗ್ಗೆ ಕಿರಣ್ ರಾವ್ ಅವರು ಮಾತನಾಡಿದ್ದಾರೆ.

ಆಮಿರ್ ಖಾನ್ ಸಂಬಂಧ ಹದಗೆಡಲು ಈ ನಿರ್ದೇಶಕಿಯೇ ಕಾರಣ? ರಿವೀಲ್ ಆಯ್ತು ವಿಚಾರ
ಆಮಿರ್ ಖಾನ್ ಕುಟುಂಬ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 13, 2024 | 7:55 AM

Share

ಆಮಿರ್ ಖಾನ್ (Aamir Khan) ಅವರು ವೈಯಕ್ತಿಕ ವಿಚಾರದಲ್ಲಿ ಮೊದಲಿನಿಂದಲೂ ಸುದ್ದಿಯಲ್ಲಿದ್ದಾರೆ. ಸಂಬಂಧಗಳನ್ನು ಹ್ಯಾಂಡಲ್ ಮಾಡಲು ಅವರ ಬಳಿ ಸಾಧ್ಯವಾಗಿಲ್ಲ. ಈ ಮೊದಲು ರೀನಾ ದತ್ತ ಜೊತೆ ಸಂಬಂಧ ಕಡಿದುಕೊಂಡಿದ್ದರು. ಆ ಬಳಿಕ ಕಿರಣ್ ರಾವ್​ನ ಮದುವೆ ಆದರು. ಕಿರಣ್ ರಾವ್ ಜೊತೆಗಿನ ಸಂಬಂಧವೂ ಕೊನೆ ಆಗಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ. ಈ ಮಧ್ಯೆ ಹಳೆಯ ಘಟನೆ ಕುರಿತು ಅವರ ಮಾಜಿ ಪತ್ನಿ ಕಿರಣ್ ರಾವ್ ಮಾತನಾಡಿದ್ದಾರೆ.

ಆಮಿರ್ ಹಾಗೂ ರೀನಾ ದತ್ ದಂಪತಿ 2002ರಲ್ಲಿ ಸಂಬಂಧ ಕಡಿದುಕೊಂಡರು. ‘ಲಗಾನ್’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿತ್ತು. ಈ ಚಿತ್ರಕ್ಕೆ ಕಿರಣ್ ಅವರು ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು. ಇವರಿಬ್ಬರು ಸುತ್ತಾಟ ನಡೆಸಿದ್ದರಿಂದಲೇ ಆಮಿರ್ ಹಾಗೂ ರೀನಾ ಬೇರೆ ಆದರು ಎನ್ನುವ ಮಾತು ಮೊದಲಿನಿಂದಲೂ ಇದೆ. ಈ ವಿಚಾರದ ಬಗ್ಗೆ ಕಿರಣ್ ರಾವ್ ಅವರು ಮಾತನಾಡಿದ್ದಾರೆ. ‘ನಾವು ಡೇಟಿಂಗ್ ಆರಂಭಿಸಿದ್ದು 2004ರಲ್ಲಿ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ನಾನು ಹಾಗೂ ಆಮಿರ್ ಖಾನ್ ಲಗಾನ್ ಸಿನಿಮಾದಲ್ಲಿ ಕನೆಕ್ಟ್ ಆದೆವು ಎಂದು ಅನೇಕರು ಭಾವಿಸಿದ್ದಾರೆ. ಆದರೆ, ಅದರಲ್ಲಿ ನಿಜವಿಲ್ಲ. ನಮ್ಮಿಬ್ಬರ ಮಧ್ಯೆ ಆಪ್ತತೆ ಬೆಳೆದಿದ್ದು ಸ್ವದೇಶ್ ಸಿನಿಮಾ ಟೈಮ್​ನಲ್ಲಿ. ನಾವು ಆ ಸಂದರ್ಭದಲ್ಲಿ ಕೆಲವು ಕಮರ್ಷಿಯಲ್​ಗಳಲ್ಲಿ ಒಟ್ಟಾಗಿ ನಟಿಸಿದೆವು. ಇದು ನಡೆದಿದ್ದು ಲಗಾನ್ ರಿಲೀಸ್ ಆಗಿ ಮೂರು ವರ್ಷಗಳ ಬಳಿಕ. ಲಗಾನ್ ಬಳಿಕ ನಾನು ಆಮಿರ್​ ಜೊತೆ ಸಂಪರ್ಕದಲ್ಲಿ ಇರಲಿಲ್ಲ. ರೀನಾ ಹಾಗೂ ಆಮಿರ್ ವಿಚ್ಛೇದನ ಪಡೆಯಲು ನಾನು ಕಾರಣನಲ್ಲ’ ಎಂದಿದ್ದಾರೆ ಅವರು.

‘ಒಂದು ಸಂಬಂಧ ಕೊನೆಯಾಗಿ ಬಳಿಕ ಅವರನ್ನು ಮದುವೆಯಾದಾಗ ಅದು ಈಗಿನ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ. ಇಂಥ ಸಂದರ್ಭದಲ್ಲಿ ಕುಳಿತು ಮಾತನಾಡುವುದು ಅತ್ಯಗತ್ಯವಾಗಿರುತ್ತದೆ. ಆಮಿರ್ ಮತ್ತು ನಾನು ಕೌನ್ಸೆಲಿಂಗ್​ಗೆ ಒಳಗಾದೆವು. ನಾವಿಬ್ಬರೂ ಒಬ್ಬರಿಗೊಬ್ಬರು ಪ್ರಾಮಾಣಿಕವಾಗಿರಬೇಕು ಎಂದು ಇಬ್ಬರೂ ಒಪ್ಪಂದ ಮಾಡಿಕೊಂಡೆವು’ ಎಂದಿದ್ದಾರೆ ಕಿರಣ್ ರಾವ್

ಇದನ್ನೂ ಓದಿ: ‘ಕಿರಣ್​​ಗೆ ಸಿನಿಮಾ ಮಾಡೋಕೆ ಆಗುತ್ತಿರಲಿಲ್ಲ’; ಮಾಜಿ ಪತ್ನಿಯ ಒದ್ದಾಟ ತಿಳಿಸಿದ ಆಮಿರ್ ಖಾನ್

ಆಮಿರ್ ಖಾನ್ ಹಾಗೂ ಕಿರಣ್ ರಾವ್ ಅವರು 2005ರಲ್ಲಿ ಮದುವೆ ಆದರು. 2021ರಲ್ಲಿ ಇಬ್ಬರೂ ಬೇರೆ ಆದರು. ಸಾಮಾನ್ಯವಾಗಿ ವಿಚ್ಛೇದನ ಪಡೆದ ಬಳಿಕ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ, ಆಮಿರ್ ಹಾಗೂ ಕಿರಣ್ ರಾವ್ ವಿಚಾರದಲ್ಲಿ ಆ ರೀತಿ ಇಲ್ಲ. ಇಬ್ಬರೂ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡಿಸ್’ ಚಿತ್ರವನ್ನು ಆಮಿರ್ ಖಾನ್ ಅವರೇ ನಿರ್ಮಾಣ ಮಾಡಿದ್ದರು. ಈ ಸಿನಿಮಾ ಎಲ್ಲರ ಮೆಚ್ಚುಗೆ ಪಡೆದಿದೆ. ಈ ಚಿತ್ರವನ್ನು ವಿಮರ್ಶಕರು ಬಾಯ್ತುಂಬಾ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು