AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಐದು ಬಯೋಪಿಕ್​ನಲ್ಲಿ ನಟಿಸಲಿದ್ದಾರೆ ರಣವೀರ್​ ಸಿಂಗ್​? ‘83’ ಚಿತ್ರದಿಂದ ಬದಲಾಯ್ತು ಅದೃಷ್ಟ

ರಣವೀರ್ ಸಿಂಗ್​ ಅವರು ತಾವು ಅದ್ಭುತ ನಟ ಎಂಬುದನ್ನು ಅನೇಕ ಬಾರಿ ಸಾಬೀತು ಮಾಡಿದ್ದಾರೆ. ‘83’ ಚಿತ್ರದಿಂದ ರಣವೀರ್​ಗೆ ಇದ್ದ ಬೇಡಿಕೆ ಹೆಚ್ಚಿದೆ. ಇದನ್ನು ಅವರೇ ಒಪ್ಪಿಕೊಂಡಿದ್ದಾರೆ.

ಇನ್ನೂ ಐದು ಬಯೋಪಿಕ್​ನಲ್ಲಿ ನಟಿಸಲಿದ್ದಾರೆ ರಣವೀರ್​ ಸಿಂಗ್​? ‘83’ ಚಿತ್ರದಿಂದ ಬದಲಾಯ್ತು ಅದೃಷ್ಟ
ರಣವೀರ್​ ಸಿಂಗ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 01, 2022 | 9:49 AM

Share

ರಣವೀರ್​ ಸಿಂಗ್​ (Ranveer Singh) ಅವರು ‘83’ ಸಿನಿಮಾ(83 Movie) ಗೆಲುವಿನ ಖುಷಿಯಲ್ಲಿದ್ದಾರೆ. 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸಿದ್ದಾರೆ. ತೆರೆಯಮೇಲೆ ರಣವೀರ್​ ಸಿಂಗ್​ ಕಾಣಿಸುತ್ತಿಲ್ಲ, ಕೇವಲ ಕಪಿಲ್​ ದೇವ್​ ಮಾತ್ರ ಕಾಣುತ್ತಿದ್ದಾರೆ ಎಂಬಷ್ಟರ ಮಟ್ಟಿಗೆ ಅವರು ಅದ್ಭುತವಾಗಿ ನಟಿಸಿ ತೋರಿಸಿದ್ದರು. ಈ ಸಿನಿಮಾದಿಂದ ರಣವೀರ್​ ಸಿಂಗ್​ ಅದೃಷ್ಟ ಖುಲಾಯಿಸಿದೆ. ಇನ್ನೂ ಐದು ಬಯೋಪಿಕ್​ನಲ್ಲಿ ನಟಿಸೋಕೆ ರಣವೀರ್​ ಸಿಂಗ್​ಗೆ ಆಫರ್​ ಬಂದಿದೆ.

ರಣವೀರ್ ಸಿಂಗ್​ ಅವರು ತಾವು ಅದ್ಭುತ ನಟ ಎಂಬುದನ್ನು ಅನೇಕ ಬಾರಿ ಸಾಬೀತು ಮಾಡಿದ್ದಾರೆ. ‘83’ ಚಿತ್ರದಿಂದ ರಣವೀರ್​ಗೆ ಇದ್ದ ಬೇಡಿಕೆ ಹೆಚ್ಚಿದೆ. ಇದನ್ನು ಅವರೇ ಒಪ್ಪಿಕೊಂಡಿದ್ದಾರೆ. ಬಯೋಪಿಕ್ ಆಫರ್​ಗಳು ರಣವೀರ್​ ಸಿಂಗ್​ಗೆ ಹೆಚ್ಚುತ್ತಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ನಾನು ಐದು ನಿರ್ಮಾಪಕರ ಜತೆ ಚರ್ಚೆಯಲ್ಲಿದ್ದೇನೆ. ಇವೆಲ್ಲವೂ ಬಯೋಪಿಕ್​. ಇದರಲ್ಲಿ ಮೂರು ಕ್ರೀಡಾಪಟುಗಳ ಬಯೋಪಿಕ್​ ಹಾಗೂ ಉಳಿದ ಎರಡು ಇತರ ದೊಡ್ಡ ವ್ಯಕ್ತಿಗಳ ಬಯೋಪಿಕ್​. ಆ ಬಗ್ಗೆ ನಾನು ಈಗಲೇ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು. ‘ಎಲ್ಲಾ ಸ್ಕ್ರಿಪ್ಟ್​ಗಳು ಈಗತಾನೇ ಆರಂಭವಾಗಿದೆ. ಇದರಲ್ಲಿ ಒಂದು ಸ್ಕ್ರಿಪ್ಟ್ ಅದ್ಭುತವಾಗಿಗಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ’ ಎಂದು ರಣವೀರ್​ ಸಿಂಗ್​ ಹೇಳಿದ್ದಾರೆ. ಈ ಮೂಲಕ ಅವರು ಕೌತುಕ ಹೆಚ್ಚಿಸಿದ್ದಾರೆ.

ಅಂದುಕೊಂಡ ರೀತಿಯಲ್ಲಿ ‘83’ ಸಿನಿಮಾ ಕಲೆಕ್ಷನ್ ಮಾಡಿಲ್ಲ. ಹಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬಂದಿದೆ. ಮಹಾರಾಷ್ಟ್ರದಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾ ಅಂದುಕೊಂಡ ಮಟ್ಟಕ್ಕೆ ಕಲೆಕ್ಷನ್​ ಮಾಡಿಲ್ಲ ಎನ್ನಲಾಗುತ್ತಿದೆ. ಇನ್ನೂ ಕೆಲ ಕಾರಣಗಳು ಸಿನಿಮಾ ಮೇಲೆ ಪ್ರಭಾವ ಬೀರುತ್ತಿವೆ. ಕೊವಿಡ್​ ಹೆಚ್ಚುತ್ತಿರುವುದರಿಂದ ಕೆಲವರು ಚಿತ್ರಮಂದಿರದತ್ತ ಮುಖ ಮಾಡಲು ಹೆದರುತ್ತಿದ್ದಾರೆ. ಇನ್ನು, ಅಲ್ಲು ಅರ್ಜುನ್​ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಪ್ರಬಲ ಸ್ಪರ್ಧೆ ನೀಡುತ್ತಿದೆ.

ಇದನ್ನೂ ಓದಿ: ‘83’ ಚಿತ್ರಕ್ಕಾಗಿ 20 ಕೋಟಿ ಸಂಭಾವನೆ, ಬಂದ ಲಾಭದಲ್ಲೂ ಇದೆ ಪಾಲು 

ಏರಲೇ ಇಲ್ಲ ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ಕಲೆಕ್ಷನ್​; ಇದಕ್ಕೆ ಕಾರಣಗಳೇನು?

Published On - 9:48 am, Sat, 1 January 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!