AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಯಾವುದದು?

Dhurandhar movie: ‘ಧುರಂಧರ್’ ಸಿನಿಮಾನಲ್ಲಿ ಎರಡು ಹೆಸರನ್ನು ತೆಗೆಯಲಾಗಿದ್ದು, ಒಂದು ಸಂಭಾಷಣೆಯನ್ನು ಬದಲಾಯಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದ ಸೂಚನೆಯಂತೆ ಸಿನಿಮಾ ತಂಡ ಈ ಬದಲಾವಣೆಯನ್ನು ಮಾಡಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಇಲಾಖೆ ಸೂಚನೆಯಂತೆ ಈ ಬದಲಾವಣೆ ಮಾಡಲಾಗಿದೆ.

‘ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಯಾವುದದು?
Ranveer Singh
ಮಂಜುನಾಥ ಸಿ.
|

Updated on: Jan 01, 2026 | 7:08 PM

Share

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾ 1000 ಕೋಟಿ ಗಳಿಕೆ ದಾಟಿದೆ. ಸಿನಿಮಾವನ್ನು ಮುಗಿಬಿದ್ದು ಜನ ವೀಕ್ಷಿಸುತ್ತಿದ್ದಾರೆ. ಭಾರತೀಯ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಂದ ಭಾರತೀಯ ಸೇನೆಗೆ ಮಾಹಿತಿ ರವಾನೆ ಮಾಡುವ ಕತೆಯನ್ನು ‘ಧುರಂಧರ್’ ಸಿನಿಮಾ ಒಳಗೊಂಡಿದೆ. ಕೆಲವು ನಿಜ ಘಟನೆಗಳಿಂದ ಸ್ಪೂರ್ತಿ ಪಡೆದು ಈ ಸಿನಿಮಾ ಮಾಡಲಾಗಿದೆ. ಸಿನಿಮಾನಲ್ಲಿ ಕೆಲ ನಿಜ ವ್ಯಕ್ತಿಗಳ ಪಾತ್ರಗಳು, ಸ್ಥಳಗಳು ಸಹ ಇವೆ. ಆದರೆ ಇದೀಗ ಭಾರತೀಯ ಸರ್ಕಾರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ‘ಧುರಂಧರ್’ ಸಿನಿಮಾದ ಎರಡು ಸಂಭಾಷಣೆ ಅಥವಾ ಹೆಸರನ್ನು ತೆಗೆಸಿದ್ದು, ಒಂದು ಸಂಭಾಷಣೆಯನ್ನು ಬದಲಾಯಿಸಲು ಸೂಚಿಸಿದೆ.

ಎಲ್ಲ ಚಿತ್ರಮಂದಿರಗಳಿಗೆ ವಿತರಕರು ಮತ್ತು ನಿರ್ಮಾಪಕರು ಮೇಲ್ ಮಾಡಿದ್ದು, ‘ಧುರಂಧರ್’ ಸಿನಿಮಾದ ಹೊಸ ಆವೃತ್ತಿಯನ್ನು ಕ್ಯೂಬ್ ಮೂಲಕ ಡೌನ್​​ಲೋಡ್ ಮಾಡಿಕೊಂಡು ಹೊಸ ಆವೃತ್ತಿಯನ್ನೇ ಪ್ರದರ್ಶನ ಮಾಡಬೇಕು ಎಂದು ಮನವಿ ಮಾಡಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸೂಚನೆಯ ಮೇರೆಗೆ ಸಿನಿಮಾದ ಸಂಭಾಷಣೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸಹ ಮೇಲ್​​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ದೈವಕ್ಕೆ ಅವಮಾನ: ಬಾಲಿವುಡ್ ನಟ ರಣ್ವೀರ್ ಸಿಂಗ್ ವಿರುದ್ಧ ದೂರು ದಾಖಲು

‘ಧುರಂಧರ್’ ಸಿನಿಮಾನಲ್ಲಿ ಎರಡು ಹೆಸರನ್ನು ತೆಗೆಯಲಾಗಿದ್ದು, ಒಂದು ಸಂಭಾಷಣೆಯನ್ನು ಬದಲಾಯಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದ ಸೂಚನೆಯಂತೆ ಸಿನಿಮಾ ತಂಡ ಈ ಬದಲಾವಣೆಯನ್ನು ಮಾಡಿದೆ. ಅಳಿಸಲಾಗಿರುವ ಎರಡು ಪದಗಳಲ್ಲಿ ‘ಬಲೂಚ್’ ಸಹ ಒಂದಾಗಿದೆ. ಪಾಕಿಸ್ತಾನದ ಬಲೂಚಿಸ್ಥಾನವನ್ನು ಸಿನಿಮಾನಲ್ಲಿ ಬಲೂಚ್ ಎಂದು ಕರೆಯಲಾಗಿದೆ. ಇದರ ಜೊತೆಗೆ ಮತ್ತೊಂದು ಹೆಸರನ್ನು ಸಹ ಅಳಿಸಲಾಗಿದೆ ಅಥವಾ ಬೀಪ್ ಮಾಡಲಾಗಿದೆ. ‘ಧುರಂಧರ್’ ಸಿನಿಮಾದ ಈ ಬದಲಾದ ಆವೃತ್ತಿಯು ಜನವರಿ 1 ರಿಂದಲೇ ಪ್ರಸಾರ ಆಗಲಿದೆ.

‘ಧುರಂಧರ್’ ಸಿನಿಮಾ ಈ ವರ್ಷ ಭಾರತದ ಭಾರಿ ದೊಡ್ಡ ಯಶಸ್ವಿ ಸಿನಿಮಾ ಎನಿಸಿಕೊಂಡಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಈಗಾಗಲೇ 1200 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾನಲ್ಲಿ ರಣ್​ವೀರ್ ಸಿಂಗ್, ಅಕ್ಷಯ್ ಖನ್ನ, ಆರ್ ಮಾಧವನ್, ಸಂಜಯ್ ದತ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾದ ನಾಯಕಿ ಪಾತ್ರದಲ್ಲಿ ಸಾರಾ ಅರ್ಜುನ್ ನಟಿಸಿದ್ದಾರೆ. ಸಿನಿಮಾವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ