‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ…’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್​ ಅವರು ಈ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದರು. ಈಗ ಶಾರುಖ್​ ಖಾನ್​ ಮಾತನಾಡಿರುವುದು ಕೂಡ ಪರೋಕ್ಷವಾಗಿ ‘ಅನಿಮಲ್​’ ಚಿತ್ರಕ್ಕೆ ಸಂಬಂಧಿಸಿದೆ ಎಂದು ನೆಟ್ಟಿಗರು ಊಹಿಸಿದ್ದಾರೆ.

‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ...’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?
ಶಾರುಖ್​ ಖಾನ್​
Follow us
|

Updated on: Jan 11, 2024 | 5:00 PM

ಇತ್ತೀಚೆಗೆ ಅತಿ ಹೆಚ್ಚು ಟೀಕೆಗೆ ಒಳಗಾದ ಸಿನಿಮಾ ಎಂದರೆ ಅದು ‘ಅನಿಮಲ್​’. ರಣಬೀರ್​ ಕಪೂರ್​ ನಟನೆಯ ಈ ಚಿತ್ರದಲ್ಲಿ ನೆಗೆಟಿವ್​ ಗುಣಗಳು ಇರುವ ವ್ಯಕ್ತಿಯನ್ನು ಹೀರೋ ಪಾತ್ರದಲ್ಲಿ ವೈಭವೀಕರಿಸಲಾಗಿದೆ. ಕೊಲೆ ಮಾಡುವುದು ಎಂದರೆ ಈ ಚಿತ್ರದ ಕಥಾನಾಯಕನಿಗೆ ನೀರು ಕುಡಿದಷ್ಟೇ ಸಲೀಸು. ಮಹಿಳೆಯರನ್ನು ಅವಹೇಳನ ಮಾಡುವುದು, ಅವರ ಮೇಲೆ ಕೈ ಎತ್ತುವುದು ಕೂಡ ಈ ಹೀರೋಗೆ ಭಾರಿ ಸುಲಭ. ಇದನ್ನೆಲ್ಲ ಮಾಡಿದ್ದಕ್ಕೆ ಆತನಿಗೆ ಪಶ್ಚಾತ್ತಾಪ ಕೂಡ ಇರುವುದಿಲ್ಲ. ‘ಅನಿಮಲ್​’ (Animal) ಸಿನಿಮಾವನ್ನು ಅನೇಕ ಸೆಲೆಬ್ರಿಟಿಗಳು ಟೀಕಿಸಿದ್ದಾರೆ. ಈಗ ಶಾರುಖ್​ ಖಾನ್​ (Shah Rukh Khan) ಕೂಡ ಖಂಡನೆ ವ್ಯಕ್ತಪಡಿಸಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಖಾಸಗಿ ಸಮಾರಂಭವೊಂದರಲ್ಲಿ ಶಾರುಖ್​ ಖಾನ್​ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅವುಗಳನ್ನು ಗಮನಿಸಿದರೆ ‘ಅನಿಮಲ್​’ ಸಿನಿಮಾದ ಕುರಿತಾಗಿಯೇ ಹೇಳಿದ್ದು ಎಂದು ಅನಿಸುತ್ತಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ತಮ್ಮ ಸಿನಿಮಾಗಳಲ್ಲಿನ ನೆಗೆಟಿವ್​ ಪಾತ್ರಗಳ ಕುರಿತು ಶಾರುಖ್​ ಖಾನ್​ ಮಾತನಾಡಿದ್ದಾರೆ.

‘ನಾನು ಖುಷಿಯ ಕಥೆಗಳನ್ನು ಹೇಳುವ ಆಶಾವಾದಿ ವ್ಯಕ್ತಿ. ನಾನು ನಿಭಾಯಿಸುವ ಹೀರೋ ಪಾತ್ರಗಳು ಒಳ್ಳೆಯ ಕೆಲಸ ಮಾಡುತ್ತವೆ. ಒಂದು ವೇಳೆ ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ ಆ ಪಾತ್ರ ತುಂಬ ಕಷ್ಟ ಎದುರಿಸುತ್ತದೆ. ನಾಯಿ ರೀತಿ ಆ ಪಾತ್ರ ಸಾಯುತ್ತದೆ. ಯಾಕೆಂದರೆ, ಒಳ್ಳೆಯದಕ್ಕೆ ಒಳ್ಳೆಯದೇ ಆಗುತ್ತದೆ ಎಂಬುದನ್ನು ನಂಬಿರುವವನು ನಾನು. ಕೆಟ್ಟತನವನ್ನು ಒದ್ದು ಓಡಿಸಬೇಕು’ ಎಂದು ಶಾರುಖ್​ ಖಾನ್ ಹೇಳಿದ್ದಾರೆ.

ಇದನ್ನೂ ಓದಿ: ‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ

ತಮ್ಮ ಭಾಷಣದಲ್ಲಿ ಶಾರುಖ್​ ಖಾನ್​ ಅವರು ಒಮ್ಮೆಯೂ ‘ಅನಿಮಲ್​’ ಸಿನಿಮಾದ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೂ ಕೂಡ ಅವರು ಆ ಚಿತ್ರದ ಕುರಿತಾಗಿಯೇ ಇಷ್ಟೆಲ್ಲ ಹೇಳಿರಬಹುದು ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್​ ಕೂಡ ಈ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದರು. ಇಂಥ ಸಿನಿಮಾಗಳ ಯಶಸ್ಸು ತುಂಬ ಅಪಾಯಕಾರಿ ಎಂದು ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ