AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ…’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್​ ಅವರು ಈ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದರು. ಈಗ ಶಾರುಖ್​ ಖಾನ್​ ಮಾತನಾಡಿರುವುದು ಕೂಡ ಪರೋಕ್ಷವಾಗಿ ‘ಅನಿಮಲ್​’ ಚಿತ್ರಕ್ಕೆ ಸಂಬಂಧಿಸಿದೆ ಎಂದು ನೆಟ್ಟಿಗರು ಊಹಿಸಿದ್ದಾರೆ.

‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ...’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jan 11, 2024 | 5:00 PM

Share

ಇತ್ತೀಚೆಗೆ ಅತಿ ಹೆಚ್ಚು ಟೀಕೆಗೆ ಒಳಗಾದ ಸಿನಿಮಾ ಎಂದರೆ ಅದು ‘ಅನಿಮಲ್​’. ರಣಬೀರ್​ ಕಪೂರ್​ ನಟನೆಯ ಈ ಚಿತ್ರದಲ್ಲಿ ನೆಗೆಟಿವ್​ ಗುಣಗಳು ಇರುವ ವ್ಯಕ್ತಿಯನ್ನು ಹೀರೋ ಪಾತ್ರದಲ್ಲಿ ವೈಭವೀಕರಿಸಲಾಗಿದೆ. ಕೊಲೆ ಮಾಡುವುದು ಎಂದರೆ ಈ ಚಿತ್ರದ ಕಥಾನಾಯಕನಿಗೆ ನೀರು ಕುಡಿದಷ್ಟೇ ಸಲೀಸು. ಮಹಿಳೆಯರನ್ನು ಅವಹೇಳನ ಮಾಡುವುದು, ಅವರ ಮೇಲೆ ಕೈ ಎತ್ತುವುದು ಕೂಡ ಈ ಹೀರೋಗೆ ಭಾರಿ ಸುಲಭ. ಇದನ್ನೆಲ್ಲ ಮಾಡಿದ್ದಕ್ಕೆ ಆತನಿಗೆ ಪಶ್ಚಾತ್ತಾಪ ಕೂಡ ಇರುವುದಿಲ್ಲ. ‘ಅನಿಮಲ್​’ (Animal) ಸಿನಿಮಾವನ್ನು ಅನೇಕ ಸೆಲೆಬ್ರಿಟಿಗಳು ಟೀಕಿಸಿದ್ದಾರೆ. ಈಗ ಶಾರುಖ್​ ಖಾನ್​ (Shah Rukh Khan) ಕೂಡ ಖಂಡನೆ ವ್ಯಕ್ತಪಡಿಸಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಖಾಸಗಿ ಸಮಾರಂಭವೊಂದರಲ್ಲಿ ಶಾರುಖ್​ ಖಾನ್​ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅವುಗಳನ್ನು ಗಮನಿಸಿದರೆ ‘ಅನಿಮಲ್​’ ಸಿನಿಮಾದ ಕುರಿತಾಗಿಯೇ ಹೇಳಿದ್ದು ಎಂದು ಅನಿಸುತ್ತಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ತಮ್ಮ ಸಿನಿಮಾಗಳಲ್ಲಿನ ನೆಗೆಟಿವ್​ ಪಾತ್ರಗಳ ಕುರಿತು ಶಾರುಖ್​ ಖಾನ್​ ಮಾತನಾಡಿದ್ದಾರೆ.

‘ನಾನು ಖುಷಿಯ ಕಥೆಗಳನ್ನು ಹೇಳುವ ಆಶಾವಾದಿ ವ್ಯಕ್ತಿ. ನಾನು ನಿಭಾಯಿಸುವ ಹೀರೋ ಪಾತ್ರಗಳು ಒಳ್ಳೆಯ ಕೆಲಸ ಮಾಡುತ್ತವೆ. ಒಂದು ವೇಳೆ ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ ಆ ಪಾತ್ರ ತುಂಬ ಕಷ್ಟ ಎದುರಿಸುತ್ತದೆ. ನಾಯಿ ರೀತಿ ಆ ಪಾತ್ರ ಸಾಯುತ್ತದೆ. ಯಾಕೆಂದರೆ, ಒಳ್ಳೆಯದಕ್ಕೆ ಒಳ್ಳೆಯದೇ ಆಗುತ್ತದೆ ಎಂಬುದನ್ನು ನಂಬಿರುವವನು ನಾನು. ಕೆಟ್ಟತನವನ್ನು ಒದ್ದು ಓಡಿಸಬೇಕು’ ಎಂದು ಶಾರುಖ್​ ಖಾನ್ ಹೇಳಿದ್ದಾರೆ.

ಇದನ್ನೂ ಓದಿ: ‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ

ತಮ್ಮ ಭಾಷಣದಲ್ಲಿ ಶಾರುಖ್​ ಖಾನ್​ ಅವರು ಒಮ್ಮೆಯೂ ‘ಅನಿಮಲ್​’ ಸಿನಿಮಾದ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೂ ಕೂಡ ಅವರು ಆ ಚಿತ್ರದ ಕುರಿತಾಗಿಯೇ ಇಷ್ಟೆಲ್ಲ ಹೇಳಿರಬಹುದು ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಖ್ಯಾತ ಗೀತರಚನಾಕಾರ ಜಾವೇದ್​ ಅಖ್ತರ್​ ಕೂಡ ಈ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದರು. ಇಂಥ ಸಿನಿಮಾಗಳ ಯಶಸ್ಸು ತುಂಬ ಅಪಾಯಕಾರಿ ಎಂದು ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ