Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಆಗಲೂ ಗೋ ಮಾಂಸ ತಿನ್ನುತ್ತಿದ್ದೆ, ಈಗಲೂ ತಿನ್ನುತ್ತೇನೆ’; ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕನ ವಿಡಿಯೋ ವೈರಲ್ 

‘ನಾನು ಗೋ ಮಾಂಸ ತಿನ್ನುತ್ತೇನೆ’ ಎಂದು ರಣಬೀರ್ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಇಟ್ಟುಕೊಂಡು ಅವರಿಗೆ ದೇವಸ್ಥಾನದ ಒಳಗೆ ತೆರಳಲು ಅವಕಾಶ ನೀಡಿರಲಿಲ್ಲ. ಈ ಘಟನೆ ಬಳಿಕ ವಿವೇಕ್ ಅಗ್ನಿಹೋತ್ರಿ ವಿಡಿಯೋವನ್ನು ವೈರಲ್ ಮಾಡಲಾಗಿದೆ.

‘ನಾನು ಆಗಲೂ ಗೋ ಮಾಂಸ ತಿನ್ನುತ್ತಿದ್ದೆ, ಈಗಲೂ ತಿನ್ನುತ್ತೇನೆ’; ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕನ ವಿಡಿಯೋ ವೈರಲ್ 
ವಿವೇಕ್ ಅಗ್ನಿಹೋತ್ರಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 08, 2022 | 5:16 PM

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಸಾಕಷ್ಟು ಚರ್ಚೆಯಲ್ಲಿದ್ದಾರೆ. ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ (The Kashmir Files Movie) ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುವುದರ ಜತೆಗೆ ಒಂದು ವರ್ಗದ ಜನರಿಂದ ಮೆಚ್ಚುಗೆ ಪಡೆದುಕೊಂಡಿತು. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ವಿವೇಕ್ ಅವರು ಅನೇಕ ಚರ್ಚೆಗಳಲ್ಲಿ ಭಾಗಿಯಾಗಿದ್ದಾರೆ. ತಮ್ಮ ಸಿದ್ಧಾಂತಗಳನ್ನು ಮುಂದಿಡುವ ಮೂಲಕ ಕೆಲವೊಮ್ಮೆ ಟೀಕೆಗೆ ಗುರಿಯಾಗಿದ್ದೂ ಇದೆ. ಈಗ ವಿವೇಕ್ ಅಗ್ನಿಹೋತ್ರಿ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ತಾವು ಗೋಮಾಂಸ ತಿನ್ನುವ ವಿಚಾರವನ್ನು ಅವರು ಒಪ್ಪಿಕೊಂಡಿದ್ದರು. ಈ ವಿಚಾರ ಇಟ್ಟುಕೊಂಡು ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್ 9ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ರಣಬೀರ್ ಹಾಗೂ ಆಲಿಯಾ ಭಟ್ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ‘ನಾನು ಗೋ ಮಾಂಸ ತಿನ್ನುತ್ತೇನೆ’ ಎಂದು ರಣಬೀರ್ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಇಟ್ಟುಕೊಂಡು ಅವರಿಗೆ ದೇವಸ್ಥಾನದ ಒಳಗೆ ತೆರಳಲು ಅವಕಾಶ ನೀಡಿರಲಿಲ್ಲ. ದೇವಸ್ಥಾನದ ಹೊರ ಭಾಗದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಕೂಡ ನಡೆದಿತ್ತು. ಈ ಘಟನೆ ಬಳಿಕ ವಿವೇಕ್ ಅಗ್ನಿಹೋತ್ರಿ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಇದನ್ನೂ ಓದಿ
Image
Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

ವಿವೇಕ್​ ಅಗ್ನಿಹೋತ್ರಿ ಅವರು ಈ ಮೊದಲು ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಬಂದಿದ್ದರು. ‘ವಿವೇಕ್ ಅಗ್ನಿಹೋತ್ರಿ ಗೋ ಮಾಂಸ ತಿಂದಿದ್ದಾರೆ. ಅವರಿಗೆ ಏಕೆ ಅವಕಾಶ ನೀಡಿದಿರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ನಾನು ಈ ಮೊದಲು ಗೋ ಮಾಂಸ ತಿಂದಿದ್ದೆ. ಈಗಲೂ ತಿನ್ನುತ್ತೇನೆ’ ಎಂದು ವಿವೇಕ್ ಅಗ್ನಿಹೋತ್ರಿ ವಿಡಿಯೋದಲ್ಲಿ ಹೇಳಿದ್ದರು.

‘ಬ್ರಹ್ಮಾಸ್ತ್ರ’ ಸಿನಿಮಾಗೆ ಬೈಕಾಟ್ ಬಿಸಿ ತಟ್ಟುವ ಲಕ್ಷಣ ಗೋಚರವಾಗಿದೆ. ಅನೇಕರು ಚಿತ್ರವನ್ನು ನೋಡದಂತೆ ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯಿಸುತ್ತಿದ್ದಾರೆ. ಆದಾಗ್ಯೂ ಅಡ್ವಾನ್ಸ್ ಬುಕಿಂಗ್​ನಲ್ಲಿ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡಿದೆ. 21 ಕೋಟಿ ರೂಪಾಯಿ ಹಣವನ್ನು ಚಿತ್ರ ಅಡ್ವಾನ್ಸ್​ ಬುಕಿಂಗ್​ನಿಂದ ಮಾಡಿದೆ.

ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ