AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘15 ಲಕ್ಷ ಸಂಬಳ ಕೊಡಬೇಕು’; ಪ್ರವಾಹ ಸಂತ್ರಸ್ತರ ಬಳಿ ಕಷ್ಟ ಹೇಳಿಕೊಂಡ ಕಂಗನಾ

ಕುಲು-ಮನಾಲಿ ಪ್ರವಾಹದಿಂದಾಗಿ ಸಂತ್ರಸ್ತರಾದ ಜನರಿಗೆ ಕಂಗನಾ ರಣಾವತ್ ಅವರ ಪ್ರತಿಕ್ರಿಯೆ ತೀವ್ರ ಟೀಕೆಗೆ ಗುರಿಯಾಗಿದೆ. ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರು ತಮ್ಮ ವ್ಯಾಪಾರದಲ್ಲಿನ ನಷ್ಟದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ವಿವಾದ ಸೃಷ್ಟಿಸಿದೆ. ಜುಲೈನಲ್ಲಿಯೂ ಇದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

‘15 ಲಕ್ಷ ಸಂಬಳ ಕೊಡಬೇಕು’; ಪ್ರವಾಹ ಸಂತ್ರಸ್ತರ ಬಳಿ ಕಷ್ಟ ಹೇಳಿಕೊಂಡ ಕಂಗನಾ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Sep 20, 2025 | 8:40 AM

Share

ಕುಲು ಮನಾಲಿ ಭಾಗದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ನಡೆದಿವೆ. ಆ ಭಾಗದ ನದಿ ಉಕ್ಕಿ ಹರಿದಿದ್ದು, ನದಿ ತಟದ ಮನೆಗಳು ನಾಶವಾಗಿವೆ. ಜನರು ಮನೆ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹೀಗಿರುವಾಗಲೇ ಬಿಜೆಪಿ ಪಕ್ಷದ ಮಂಡಿ ಸಂಸದೆ ಕಂಗನಾ (Kangana Ranaut) ಅವರು ಜನರಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ. ಅವರು ಪ್ರವಾಹ ಪೀಡಿತ ಭಾಗ ಆಗಮಿಸುತ್ತಿದ್ದಂತೆ ‘ಹೊರಟು ಹೋಗಿ’ ಎಂಬ ಕೂಗನ್ನು ಕೇಳಬೇಕಾಯಿತು. ಈ ವೇಳೆ ತಮಗೂ ನಷ್ಟ ಆಗಿದೆ ಎಂಬುದನ್ನು ಕಂಗನಾ ವಿವರಿಸಿದರು.

ಕಂಗನಾ ಬಳಿ ಮಾಧ್ಯಮದವರು ಸ್ವಲ್ಪ ಏರು ಧ್ವನಿಯಲ್ಲೇ ಪ್ರಶ್ನೆ ಮಾಡಿದರು. ಇದರಿಂದ ಕಂಗನಾ ಭಯಗೊಂಡರು. ‘ನೀವು ನನ್ನ ಮೇಲೆ ಅಟ್ಯಾಕ್ ಮಾಡೋಕೆ ಬಂದಿದ್ದೀರಾ ಅಥವಾ ಪ್ರಶ್ನೆ ಮಾಡುತ್ತಿದ್ದೀರಾ’ ಎಂದು ಕಂಗನಾ ಅವರು ಕೇಳಿದರು. ಆ ಬಳಿಕ ಅವರು ತಮ್ಮ ಕಷ್ಟ ಹೇಳಿಕೊಂಡರು.

‘ನೀವು ನನ್ನ ನೋವನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಕೂಡ ಮನುಷ್ಯ. ನನಗೂ ಇಲ್ಲಿ ಮನೆ ಇದೆ, ರೆಸ್ಟೋರೆಂಟ್ ಇದೆ. ನಿನ್ನೆ ನನ್ನ ರೆಸ್ಟೋರೆಂಟ್ 50 ರೂಪಾಯಿ ಬಿಸ್ನೆಸ್ ಮಾಡಿದೆ. ನಾನು ತಿಂಗಳಿಗೆ ಸಿಬ್ಬಂದಿಗೆ 15 ಲಕ್ಷ ಸಂಬಳ ಕೊಡಬೇಕು. ನಾನು ಒಂಟಿ ಮಹಿಳೆ’ ಎಂದು ಕಂಗನಾ ಬೇಸರ ಮಾಡಿಕೊಂಡರು.

ಇದನ್ನೂ ಓದಿ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್
Image
‘ಕಲ್ಕಿ’ ಚಿತ್ರದಿಂದ ಹೊರಬಂದು ಶಾರುಖ್ ಹೇಳಿಕೊಟ್ಟ ಪಾಠ ನೆನೆದ ದೀಪಿಕಾ

‘ನಾನು ಇಂಗ್ಲೆಂಡ್​ನ ಕ್ವೀನ್, ಇಲ್ಲಿನ ಸಂತ್ರಸ್ತರಿಗೆ ಏನೂ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ನನ್ನ ಮೇಲೆ ಅಟ್ಯಾಕ್ ಮಾಡಬೇಡಿ. ನಾನು ಕೂಡ ನಿಮ್ಮಂತೆಯೇ’ ಎಂದು ಕಂಗನಾ ಅವರು ಹೇಳಿದರು. ಇದು ಅಲ್ಲಿನ ಜನರನ್ನು ಮತ್ತಷ್ಟು ಕೆರಳಿಸಿದೆ.

ಇದನ್ನೂ ಓದಿ: ಈಗ ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಪ್ರವಾಹ ಸಂತ್ರಸ್ತೆಯ ಪ್ರಶ್ನೆಗೆ ಮಳೆಯಲ್ಲೂ ಬೆವರಿದ ಕಂಗನಾ ರಣಾವತ್

ಜುಲೈ ತಿಂಗಳಲ್ಲೂ ಕಂಗನಾ ಅವರು ಇದೇ ರೀತಿಯ ಹೇಳಿಕೆ ನೀಡಿದ್ದರು. ಸಹಾಯಕ್ಕಾಗಿ ಜನರು ಇವರ ಬಳಿ ಬಂದಾಗ, ‘ನನಗೆ ಹಣ ಬಿಡುಗಡೆ ಮಾಡಲು ಮಂತ್ರಿ ಹುದ್ದೆ ಇಲ್ಲ ಎಂದು ಹೇಳಿದ್ದರು. ಅಲ್ಲದೆ, ತಾವು ರಾಜಕೀಯ ಅಂದರೆ ಅಂದುಕೊಂಡಿದ್ದೇ ಬೇರೆ ಮತ್ತು ಇಲ್ಲಾಗುತ್ತಿರುವುದೇ ಬೇರೆ ಎಂಬ ಪರಿಸ್ಥಿತಿ ಇದೆ ಎಂದು ಕಂಗನಾ ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ