AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘15 ಲಕ್ಷ ಸಂಬಳ ಕೊಡಬೇಕು’; ಪ್ರವಾಹ ಸಂತ್ರಸ್ತರ ಬಳಿ ಕಷ್ಟ ಹೇಳಿಕೊಂಡ ಕಂಗನಾ

ಕುಲು-ಮನಾಲಿ ಪ್ರವಾಹದಿಂದಾಗಿ ಸಂತ್ರಸ್ತರಾದ ಜನರಿಗೆ ಕಂಗನಾ ರಣಾವತ್ ಅವರ ಪ್ರತಿಕ್ರಿಯೆ ತೀವ್ರ ಟೀಕೆಗೆ ಗುರಿಯಾಗಿದೆ. ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರು ತಮ್ಮ ವ್ಯಾಪಾರದಲ್ಲಿನ ನಷ್ಟದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ವಿವಾದ ಸೃಷ್ಟಿಸಿದೆ. ಜುಲೈನಲ್ಲಿಯೂ ಇದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

‘15 ಲಕ್ಷ ಸಂಬಳ ಕೊಡಬೇಕು’; ಪ್ರವಾಹ ಸಂತ್ರಸ್ತರ ಬಳಿ ಕಷ್ಟ ಹೇಳಿಕೊಂಡ ಕಂಗನಾ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Sep 20, 2025 | 8:40 AM

Share

ಕುಲು ಮನಾಲಿ ಭಾಗದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ನಡೆದಿವೆ. ಆ ಭಾಗದ ನದಿ ಉಕ್ಕಿ ಹರಿದಿದ್ದು, ನದಿ ತಟದ ಮನೆಗಳು ನಾಶವಾಗಿವೆ. ಜನರು ಮನೆ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹೀಗಿರುವಾಗಲೇ ಬಿಜೆಪಿ ಪಕ್ಷದ ಮಂಡಿ ಸಂಸದೆ ಕಂಗನಾ (Kangana Ranaut) ಅವರು ಜನರಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ. ಅವರು ಪ್ರವಾಹ ಪೀಡಿತ ಭಾಗ ಆಗಮಿಸುತ್ತಿದ್ದಂತೆ ‘ಹೊರಟು ಹೋಗಿ’ ಎಂಬ ಕೂಗನ್ನು ಕೇಳಬೇಕಾಯಿತು. ಈ ವೇಳೆ ತಮಗೂ ನಷ್ಟ ಆಗಿದೆ ಎಂಬುದನ್ನು ಕಂಗನಾ ವಿವರಿಸಿದರು.

ಕಂಗನಾ ಬಳಿ ಮಾಧ್ಯಮದವರು ಸ್ವಲ್ಪ ಏರು ಧ್ವನಿಯಲ್ಲೇ ಪ್ರಶ್ನೆ ಮಾಡಿದರು. ಇದರಿಂದ ಕಂಗನಾ ಭಯಗೊಂಡರು. ‘ನೀವು ನನ್ನ ಮೇಲೆ ಅಟ್ಯಾಕ್ ಮಾಡೋಕೆ ಬಂದಿದ್ದೀರಾ ಅಥವಾ ಪ್ರಶ್ನೆ ಮಾಡುತ್ತಿದ್ದೀರಾ’ ಎಂದು ಕಂಗನಾ ಅವರು ಕೇಳಿದರು. ಆ ಬಳಿಕ ಅವರು ತಮ್ಮ ಕಷ್ಟ ಹೇಳಿಕೊಂಡರು.

‘ನೀವು ನನ್ನ ನೋವನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಕೂಡ ಮನುಷ್ಯ. ನನಗೂ ಇಲ್ಲಿ ಮನೆ ಇದೆ, ರೆಸ್ಟೋರೆಂಟ್ ಇದೆ. ನಿನ್ನೆ ನನ್ನ ರೆಸ್ಟೋರೆಂಟ್ 50 ರೂಪಾಯಿ ಬಿಸ್ನೆಸ್ ಮಾಡಿದೆ. ನಾನು ತಿಂಗಳಿಗೆ ಸಿಬ್ಬಂದಿಗೆ 15 ಲಕ್ಷ ಸಂಬಳ ಕೊಡಬೇಕು. ನಾನು ಒಂಟಿ ಮಹಿಳೆ’ ಎಂದು ಕಂಗನಾ ಬೇಸರ ಮಾಡಿಕೊಂಡರು.

ಇದನ್ನೂ ಓದಿ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್
Image
‘ಕಲ್ಕಿ’ ಚಿತ್ರದಿಂದ ಹೊರಬಂದು ಶಾರುಖ್ ಹೇಳಿಕೊಟ್ಟ ಪಾಠ ನೆನೆದ ದೀಪಿಕಾ

‘ನಾನು ಇಂಗ್ಲೆಂಡ್​ನ ಕ್ವೀನ್, ಇಲ್ಲಿನ ಸಂತ್ರಸ್ತರಿಗೆ ಏನೂ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ನನ್ನ ಮೇಲೆ ಅಟ್ಯಾಕ್ ಮಾಡಬೇಡಿ. ನಾನು ಕೂಡ ನಿಮ್ಮಂತೆಯೇ’ ಎಂದು ಕಂಗನಾ ಅವರು ಹೇಳಿದರು. ಇದು ಅಲ್ಲಿನ ಜನರನ್ನು ಮತ್ತಷ್ಟು ಕೆರಳಿಸಿದೆ.

ಇದನ್ನೂ ಓದಿ: ಈಗ ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಪ್ರವಾಹ ಸಂತ್ರಸ್ತೆಯ ಪ್ರಶ್ನೆಗೆ ಮಳೆಯಲ್ಲೂ ಬೆವರಿದ ಕಂಗನಾ ರಣಾವತ್

ಜುಲೈ ತಿಂಗಳಲ್ಲೂ ಕಂಗನಾ ಅವರು ಇದೇ ರೀತಿಯ ಹೇಳಿಕೆ ನೀಡಿದ್ದರು. ಸಹಾಯಕ್ಕಾಗಿ ಜನರು ಇವರ ಬಳಿ ಬಂದಾಗ, ‘ನನಗೆ ಹಣ ಬಿಡುಗಡೆ ಮಾಡಲು ಮಂತ್ರಿ ಹುದ್ದೆ ಇಲ್ಲ ಎಂದು ಹೇಳಿದ್ದರು. ಅಲ್ಲದೆ, ತಾವು ರಾಜಕೀಯ ಅಂದರೆ ಅಂದುಕೊಂಡಿದ್ದೇ ಬೇರೆ ಮತ್ತು ಇಲ್ಲಾಗುತ್ತಿರುವುದೇ ಬೇರೆ ಎಂಬ ಪರಿಸ್ಥಿತಿ ಇದೆ ಎಂದು ಕಂಗನಾ ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ