AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ವಿವಾದಾತ್ಮಕ ಫೋಟೋ ಅಪ್​ಲೋಡ್ ಮಾಡಿಲ್ಲ’; ಪೊಲೀಸರ ಎದುರು ರಣವೀರ್ ಸಿಂಗ್ ಹೇಳಿಕೆ

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

‘ನಾನು ವಿವಾದಾತ್ಮಕ ಫೋಟೋ ಅಪ್​ಲೋಡ್ ಮಾಡಿಲ್ಲ’; ಪೊಲೀಸರ ಎದುರು ರಣವೀರ್ ಸಿಂಗ್ ಹೇಳಿಕೆ
ರಣವೀರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 30, 2022 | 2:33 PM

Share

ರಣವೀರ್ ಸಿಂಗ್ (Ranveer Singh) ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್​ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ (Mumbai Police) ಎದುರು ಹೇಳಿಕೆ ನೀಡಿದ್ದಾರೆ. ಆ ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ ಎಂಬ ಮಾತನ್ನು ರಣವೀರ್ ಸಿಂಗ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪ್ರತಿಷ್ಠಿತ ಪೇಪರ್ ಮ್ಯಾಗಜಿನ್​ಗಾಗಿ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಒಂದು ವರ್ಗದ ಜನರು ರಣವೀರ್ ಸಿಂಗ್ ಅವರನ್ನು ಹೊಗಳಿದರೆ ಮತ್ತೊಂದು ವರ್ಗದವರು ರಣವೀರ್ ಸಿಂಗ್ ಅವರನ್ನು ತೆಗಳಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಆ ಬಳಿಕ ರಣವೀರ್ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಲಾಯಿತು.

ಆಗಸ್ಟ್​ 22ರಂದು ರಣವೀರ್ ಸಿಂಗ್ ಅವರು ವಿಚಾರಣೆಗೆ ಹಾಜರಿ ಹಾಕಬೇಕಿತ್ತು. ಆದರೆ, ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇರುವುದರಿಂದ 10 ದಿನಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದರು. ಸೋಮವಾರ (ಆಗಸ್ಟ್ 29) ರಣವೀರ್ ಸಿಂಗ್ ಅವರು ವಿಚಾರಣೆ ಎದುರಿಸಿದ್ದಾರೆ.

ಇದನ್ನೂ ಓದಿ
Image
Ranveer Singh: ಮತ್ತೆ ಬೆತ್ತಲಾಗುವಂತೆ ರಣವೀರ್​ ಸಿಂಗ್​ಗೆ ಬೇಡಿಕೆ; ಈ ಬಾರಿ ಆಹ್ವಾನ ಬಂದಿರೋದು ಪ್ರಾಣಿಗಳಿಗೋಸ್ಕರ
Image
Ranveer Singh: ಬೆತ್ತಲೆ ಫೋಟೋ ಹಂಚಿಕೊಂಡ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಿಸಿದ ಮುಂಬೈ ಪೊಲೀಸರು
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ‘ನಾನು ವಿವಾದಾತ್ಮಕ ಫೋಟೋಗಳನ್ನು ಅಪ್​ಲೋಡ್ ಮಾಡಿಲ್ಲ. ಆ ಫೋಟೋಗಳು ಆ ರೀತಿಯ ಸಮಸ್ಯೆ ತರುತ್ತದೆ ಎಂದು ನಾನು ಯೋಚಿಸಿರಲಿಲ್ಲ’ ಎಂದು ರಣವೀರ್ ಸಿಂಗ್ ಅವರು ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಣವೀರ್​ಗೆ  ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ನಗ್ನ ಫೋಟೋ ಕೇಸ್; ಪೊಲೀಸರ ಮುಂದೆ ವಿಚಾರಣೆಗೆ ಬರಲಾಗದೆ ಹೊಸ ವರಸೆ ತೋರಿದ ರಣವೀರ್​ ಸಿಂಗ್​

ರಣವೀರ್ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ‘ಸರ್ಕಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರಕ್ಕೆ ನಾಯಕಿಯರು. ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ