AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೂ ಅಂತೀಯಾ ಮಾವ..’ ಸಾಂಗ್ ಕೇಳಿದ್ರೆ ರಣವೀರ್ ಸಿಂಗ್ ಮಾಡೋದೇನು? ನಟ ಕೊಟ್ರು ಉತ್ತರ

ರಣವೀರ್ ಸಿಂಗ್ ಅವರು ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಸಂದರ್ಶನದಲ್ಲಿ ಅವರು ‘ಹೂ ಅಂತೀಯಾ ಮಾವ’ ಹಾಡಿನ ಬಗ್ಗೆ ಮಾತನಾಡಿದ್ದಾರೆ.

‘ಹೂ ಅಂತೀಯಾ ಮಾವ..’ ಸಾಂಗ್ ಕೇಳಿದ್ರೆ ರಣವೀರ್ ಸಿಂಗ್ ಮಾಡೋದೇನು? ನಟ ಕೊಟ್ರು ಉತ್ತರ
ರಣವೀರ್-ಸಮಂತಾ
TV9 Web
| Edited By: |

Updated on: May 11, 2022 | 10:00 PM

Share

2021ರ ಕೊನೆಯಲ್ಲಿ ಎರಡು ಘಟನೆ ನಡೆಯಿತು. ‘ಪುಷ್ಪ’ ಸಿನಿಮಾ (Pushpa Movie) ಒಳ್ಳೆಯ ಕಲೆಕ್ಷನ್ ಮಾಡಿತು. ಸಮಂತಾ ಹೆಜ್ಜೆ ಹಾಕಿದ ‘ಹೂ ಅಂತಿಯಾ ಮಾವ’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡಿನ ಕೀರ್ತಿ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ವಿದೇಶದ ಸೆಲೆಬ್ರಿಟಿಗಳು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟರ್ ಡೇವಿಡ್ ವಾರ್ನರ್​ (David Warner) ಸೇರಿ ಹಲವು ಮಂದಿ ಈ ಹಾಡನ್ನು ಮೆಚ್ಚಿಕೊಂಡಿದ್ದಾರೆ. ಬಾಲಿವುಡ್​ನ ಖ್ಯಾತ ನಟ ರಣವೀರ್ ಸಿಂಗ್ (Ranveer Singh) ಕೂಡ ಈ ಹಾಡಿನ ದೊಡ್ಡ ಫ್ಯಾನ್. ಅವರು ಈ ಬಗ್ಗೆ ಮಾತನಾಡಿದ್ದಾರೆ.

ರಣವೀರ್ ಸಿಂಗ್ ಅವರು ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಶಾಲಿನಿ ಪಾಂಡೆ ಈ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಮೇ 13ರಂದು ಸಿನಿಮಾ ತೆರೆಗೆ ಬರುತ್ತಿದೆ. ಇಂಡಿಯಾ ಟುಡೇ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಅವರು ‘ಹೂ ಅಂತೀಯಾ ಮಾವ’ ಹಾಡಿನ ಬಗ್ಗೆ ಮಾತನಾಡಿದ್ದಾರೆ.

‘ನನ್ನ ಫೇವರಿಟ್ ಹಾಡು ಊ ಅಂಟಾವ ಮಾವ. ಈ ಹಾಡನ್ನು ಕೇಳಿದರೆ ನಾನು ಕ್ರೇಜ್​​ಗೆ ಒಳಗಾಗುತ್ತೇನೆ. ನನಗೆ ಹಾಡು ಅರ್ಥವಾಗುವುದಿಲ್ಲ. ಆದರೆ ಮ್ಯೂಸಿಕ್ ನನಗೆ ಹತ್ತಿರವಾಗಿದೆ’ ಎಂದು ಹೇಳಿದ್ದಾರೆ ರಣವೀರ್ ಸಿಂಗ್. ಈ ಹಾಡಿನಲ್ಲಿ ನಟಿ ಸಮಂತಾ ಹೆಜ್ಜೆ ಹಾಕಿದ್ದರು. ಈ ಹಾಡಿನಿಂದ ಸಿನಿಮಾಗೆ ಒಳ್ಳೆಯ ಮೈಲೇಜ್ ಸಿಕ್ಕಿತ್ತು.

ಇದನ್ನೂ ಓದಿ
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
Dubai Expo 2020: ಜಾಗತಿಕ ಮಟ್ಟದಲ್ಲಿ ಭಾರತೀಯ ಮಾಧ್ಯಮ, ಮನೋರಂಜನಾ ಕ್ಷೇತ್ರ; ಅನುರಾಗ್ ಠಾಕೂರ್, ರಣವೀರ್ ಸಿಂಗ್ ಮಾತುಕತೆ
Image
‘ನಾನು ಪಾಕಿಸ್ತಾನದಲ್ಲೂ ಇಲ್ಲ, ಭಾರತದಲ್ಲೂ ಇಲ್ಲ’; ಕಬೀರ್ ಖಾನ್​ ಬೇಸರದ ಮಾತು
Image
‘ನನಗೆ ಎಲ್ಲವೂ ಗೊತ್ತಿದೆ’ ಎಂದು ಮೆರೆಯುತ್ತಿದ್ದ ರಣವೀರ್​ ಸಿಂಗ್​; ನಟನ ಸೊಕ್ಕು ಮುರಿದ ನಿರ್ದೇಶಕ

ಕಿಸ್ಸಿಂಗ್ ಸೀನ್ ಬಗ್ಗೆ ಮಾತನಾಡಿದ್ದ ರಣವೀರ್

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಅವರದ್ದು ಹಿಟ್ ಜೋಡಿ. ಮದುವೆಗೂ ಮೊದಲು ಮೂರು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ‘ಗೋಲಿಯೋಂಕಿ ರಾಸ್​ಲೀಲಾ ರಾಮ್​ ಲೀಲಾ’, ‘ಬಾಜಿರಾವ್ ಮಸ್ತಾನಿ’, ‘ಪದ್ಮಾವತ್’ ಸಿನಿಮಾಗಳಲ್ಲಿ ಈ ಜೋಡಿ ನಟಿಸಿದೆ. ಮೊದಲ ಸಿನಿಮಾ ‘ರಾಮ್​ ಲೀಲಾ’ ವೇಳೆ ಇವರಿಬ್ಬರ ನಡುವೆ ಪ್ರೀತಿ ಮೂಡಿತ್ತು. ಅದರ ತೀವ್ರತೆ ಶೂಟಿಂಗ್ ಸಂದರ್ಭದಲ್ಲಿ ಕಾಣಿಸಿತ್ತು. ಈ ವಿಚಾರವನ್ನು ರಣವೀರ್ ಈಗ ಬಿಚ್ಚಿಟ್ಟಿದ್ದಾರೆ.

‘ರಾಮ್​ ಲೀಲಾ’ ಸಿನಿಮಾದಲ್ಲಿ ಕಿಸ್ಸಿಂಗ್ ದೃಶ್ಯಗಳಿವೆ. ಬೆಡ್​ ಮೇಲೆ ಮಲಗಿ ರಣವೀರ್ ಹಾಗೂ ದೀಪಿಕಾ ಕಿಸ್ ಮಾಡುತ್ತಿರುವ ದೃಶ್ಯವನ್ನು ಸೆರೆ ಹಿಡಿಯಬೇಕಿತ್ತು. ಈ ದೃಶ್ಯವನ್ನು ರಣವೀರ್ ವಿವರಿಸಿದ್ದಾರೆ. ‘ನಾನು ದೀಪಿಕಾ ಕಿಸ್ ಮಾಡುತ್ತಾ ಇದ್ದೆವು. ಶಾಟ್ ಓಕೆ ಆಯಿತು. ಈ ವೇಳೆ ಕಿಟಕಿ ಗಾಜಿಗೆ ಯಾರೋ ಇಟ್ಟಿಗೆ ಎಸೆದಿದ್ದರು. ಕಿಟಕಿ ಒಡೆದು ಹೋಯಿತು. ಆದಾಗ್ಯೂ ನಾವು ಕಿಸ್ ಮಾಡುತ್ತಲೇ ಇದ್ದೆವು. ನನಗೆ ಕಿಸ್ ಮಾಡೋದನ್ನು ನಿಲ್ಲಿಸಲು ಆಗುತ್ತಿರಲಿಲ್ಲ’ ಎಂದಿದ್ದಾರೆ ರಣವೀರ್.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!