AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರುಖ್ ಜೊತೆ ಮತ್ತೆ ಸಿನಿಮಾ ಮಾಡಬೇಕಿದೆ’; ‘ಜವಾನ್’ ಪ್ರಿವ್ಯೂ ನೋಡಿ ಹೇಳಿಕೆ ನೀಡಿದ ಸ್ಟಾರ್ ನಿರ್ದೇಶಕ

‘ಪಠಾಣ್’ ಚಿತ್ರದಿಂದ ಅವರು ಗೆದ್ದು ಬೀಗಿದ್ದಾರೆ. ಅವರಿಗೆ ವರ್ಷ ಕಳೆದಂತೆ ಮಾರುಕಟ್ಟೆ ಹಿರಿದಾಗುತ್ತಿದೆ. ಈಗ ‘ಜವಾನ್’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಅವರು ರೆಡಿ ಆಗಿದ್ದಾರೆ.

‘ಶಾರುಖ್ ಜೊತೆ ಮತ್ತೆ ಸಿನಿಮಾ ಮಾಡಬೇಕಿದೆ’; ‘ಜವಾನ್’ ಪ್ರಿವ್ಯೂ ನೋಡಿ ಹೇಳಿಕೆ ನೀಡಿದ ಸ್ಟಾರ್ ನಿರ್ದೇಶಕ
ಶಾರುಖ್​ ಖಾನ್​
ರಾಜೇಶ್ ದುಗ್ಗುಮನೆ
|

Updated on: Jul 15, 2023 | 10:58 AM

Share

ಸಾಲು ಸಾಲು ಸಿನಿಮಾಗಳು ಸೋಲು ಕಂಡಿದ್ದರಿಂದ ಶಾರುಖ್ ಖಾನ್ (Shah Rukh Khan) ಅವರಿಗೆ ಸ್ವಲ್ಪ ಹಿನ್ನಡೆ ಆಯಿತು. ಆದರೆ, ಈಗ ಅವರು ದೊಡ್ಡ ಮಟ್ಟದಲ್ಲಿ ಕಂಬ್ಯಾಕ್ ಮಾಡಿದ್ದಾರೆ. ‘ಪಠಾಣ್’ ಚಿತ್ರದಿಂದ ಅವರು ಗೆದ್ದು ಬೀಗಿದ್ದಾರೆ. ಅವರಿಗೆ ವರ್ಷ ಕಳೆದಂತೆ ಮಾರುಕಟ್ಟೆ ಹಿರಿದಾಗುತ್ತಿದೆ. ಈಗ ‘ಜವಾನ್’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಅವರು ರೆಡಿ ಆಗಿದ್ದಾರೆ. ಈಗ ಅವರ ಜೊತೆ ಮತ್ತೆ ಕೆಲಸ ಮಾಡಬೇಕು ಎಂದು ಬಾಲಿವುಡ್​​ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಹೇಳಿಕೊಂಡಿದ್ದಾರೆ.

ರೋಹಿತ್ ಶೆಟ್ಟಿ ಅವರು ‘ಗೋಲ್​ಮಾಲ್​’, ‘ಸಿಂಘಂ’, ‘ಸೂರ್ಯವಂಶಿ’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿ ಫೇಮಸ್ ಆಗಿದ್ದಾರೆ. ಅವರ ಸಿನಿಮಾದಲ್ಲಿ ಸಖತ್ ಆ್ಯಕ್ಷನ್ ಇರುತ್ತದೆ. ಶಾರುಖ್ ಖಾನ್ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’ ಹಾಗೂ ‘ದಿಲ್​ವಾಲೆ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ರೋಹಿತ್ ಅವರಿಗೆ ತಮಿಳು ನಿರ್ದೇಶಕ ಅಟ್ಲಿ ಅವರ ಕೆಲಸದ ಬಗ್ಗೆ ಖುಷಿ ಇದೆ. ‘ಜವಾನ್’ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ನ್ಯೂಸ್​18 ಇಂಗ್ಲಿಷ್​ಗೆ ನೀಡಿದ ಸಂದರ್ಶನದಲ್ಲಿ ರೋಹಿತ್ ಶೆಟ್ಟಿ ಮಾತನಾಡಿದ್ದಾರೆ. ‘ನನಗೆ ಜವಾನ್ ಪ್ರೋಮೋ ಇಷ್ಟವಾಗಿದೆ. ನನಗೆ ಅಟ್ಲಿ ಅವರ ಕೆಲಸ ಇಷ್ಟವಾಗಿದೆ. ಅಟ್ಲಿ ಅವರ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಜವಾನ್ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗಲಿದೆ’ ಎಂದು ರೋಹಿತ್ ಶೆಟ್ಟಿ ಹೇಳಿದ್ದಾರೆ.

ಶಾರುಖ್ ಖಾನ್ ಜೊತೆ ಮತ್ತೆ ಕೆಲಸ ಮಾಡುವ ಬಯಕೆಯನ್ನು ರೋಹಿತ್ ಶೆಟ್ಟಿ ಹೊಂದಿದ್ದಾರೆ. ‘ನಾನು ಅವರ ಜೊತೆ ಕೆಲಸ ಮಾಡೋಕೆ ಸಿದ್ಧನಿದ್ದೇನೆ. ಒಳ್ಳೆಯ ಸ್ಕ್ರಿಪ್ಟ್ ಬಂದರೆ ನಾನು ಅವರ ಜೊತೆ ಸಿನಿಮಾ ಮಾಡುತ್ತೇನೆ. ನನಗೆ ಜವಾನ್ ಪ್ರೋಮೋ ಇಷ್ಟವಾಗಿದೆ. ಅಟ್ಲಿ ಅವರ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದು ಅವರಿಗೂ ಗೊತ್ತಿದೆ’ ಎಂದು ಹೇಳಿದ್ದಾರೆ ರೋಹಿತ್ ಶೆಟ್ಟಿ.

ಇದನ್ನೂ ಓದಿ: ಸಿಂಗಂ ಅಗೇನ್; ಚಿತ್ರಕ್ಕೆ ಮತ್ತೆ ಒಂದಾಗಲಿದ್ದಾರೆ ನಟ ಅಜಯ್​ ದೇವಗನ್ ಮತ್ತು ರೋಹಿತ್ ಶೆಟ್ಟಿ 

ರೋಹಿತ್ ಶೆಟ್ಟಿ ಅವರು ಸದ್ಯ ಒಟಿಟಿ ಅಂಗಳಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ‘ಇಂಡಿಯನ್ ಪೊಲೀಸ್ ಫೋರ್ಸ್’ ಸೀರಿಸ್​ಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ