AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬಾಲಿವುಡ್ ಹೀರೋ, ನಾನು ಎಂದಿಗೂ ರೀಜನಲ್​ ಸಿನಿಮಾ ಮಾಡಲ್ಲ ಎಂದ ಜಾನ್​ ಅಬ್ರಾಹಂ

ಜಾನ್​ ಅಬ್ರಾಹಂ ನಟನೆಯ ‘ಅಟ್ಯಾಕ್​’ ಸಿನಿಮಾ ತೆರೆಗೆ ಬರೋಕೆ ರೆಡಿ ಇದೆ. ಈ ಚಿತ್ರ ಆ್ಯಕ್ಷನ್​ನಿಂದ ಕೂಡಿದೆ ಎಂಬುದಕ್ಕೆ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಸಾಕ್ಷ್ಯ ಒದಗಿಸಿತ್ತು. ಸದ್ಯ, ಸಿನಿಮಾ ಪ್ರಚಾರ ಕಾರ್ಯದಲ್ಲಿ ಜಾನ್ ಬ್ಯುಸಿ ಆಗಿದ್ದಾರೆ.

ನಾನು ಬಾಲಿವುಡ್ ಹೀರೋ, ನಾನು ಎಂದಿಗೂ ರೀಜನಲ್​ ಸಿನಿಮಾ ಮಾಡಲ್ಲ ಎಂದ ಜಾನ್​ ಅಬ್ರಾಹಂ
ಜಾನ್ ಅಬ್ರಾಹಂ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 31, 2022 | 6:00 AM

Share

ದಕ್ಷಿಣ ಭಾರತದ ಚಿತ್ರಗಳು ಬಾಲಿವುಡ್​ನಲ್ಲಿ (Bollywood) ಸದ್ದು ಮಾಡುತ್ತಿವೆ, ಬಾಲಿವುಡ್​ ಮಂಕಾಗಿದೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಕೆಲ ಬಾಲಿವುಡ್​ ಹೀರೋಗಳಿಗೆ ಅಭದ್ರತೆ ಕಾಡುತ್ತಿದೆ ಎನ್ನುವ ಮಾತೂ ಕೇಳಿ ಬಂದಿದೆ. ಈ ಮಧ್ಯೆ ಸಲ್ಮಾನ್​ ಖಾನ್ (Salman Khan)​ ಸೇರಿ ಕೆಲವು ಬಾಲಿವುಡ್​ ಹೀರೋಗಳು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ನಟ ಜಾನ್​ ಅಬ್ರಾಹಂ (John Abraham) ಮಾತನಾಡಿದ್ದಾರೆ. ಅವರಿಗೆ ತಾವು ಬಾಲಿವುಡ್​ ಹೀರೋ ಎನ್ನುವ ಹೆಮ್ಮೆ ಇದೆ. ಅಲ್ಲದೆ, ಅವರು ಎಂದಿಗೂ ತೆಲುಗು ಸಿನಿಮಾ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಜಾನ್​ ಅಬ್ರಾಹಂ ನಟನೆಯ ‘ಅಟ್ಯಾಕ್​’ ಸಿನಿಮಾ ತೆರೆಗೆ ಬರೋಕೆ ರೆಡಿ ಇದೆ. ಏಪ್ರಿಲ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರ ಆ್ಯಕ್ಷನ್​ನಿಂದ ಕೂಡಿದೆ ಎಂಬುದಕ್ಕೆ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಸಾಕ್ಷ್ಯ ಒದಗಿಸಿತ್ತು. ಸದ್ಯ, ಸಿನಿಮಾ ಪ್ರಚಾರ ಕಾರ್ಯದಲ್ಲಿ ಜಾನ್ ಬ್ಯುಸಿ ಆಗಿದ್ದಾರೆ. ಈ ವೇಳೆ ಅವರು ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.

‘ನನಗೆ ರಾಜಮೌಳಿ ಬಗ್ಗೆ ಗೌರವ ಇದೆ. ಅದೇ ರೀತಿ ನಾವು ಏನು ಮಾಡಿದ್ದೇವೆ ಎನ್ನುವ ಬಗ್ಗೆ ಎಲ್ಲಕ್ಕಿಂತ ಹೆಚ್ಚಿನ ಗೌರವ ಇದೆ. ಖಂಡಿತವಾಗಿಯೂ ನಾವು ಎರಡನೇ ಸ್ಥಾನದಲ್ಲಿ ಇಲ್ಲ. ನಾನು ಎಂದಿಗೂ ಪ್ರಾದೇಶಿಕ ಸಿನಿಮಾ ಮಾಡುವುದಿಲ್ಲ. ನಾನು ಬಾಲಿವುಡ್​ ಹೀರೋ. ನಾನು ಅಲ್ಲಿ ನಟಿಸಬೇಕು ಎನ್ನುವ ಕಾರಣಕ್ಕೆ ಸೆಕೆಂಡ್ ಹೀರೋ ಆಗಿ ಹೋಗುವುದಿಲ್ಲ. ಇತರ ನಟರಂತೆ ತೆಲುಗು ಅಥವಾ ಯಾವುದೇ ರೀಜನಲ್​ ಸಿನಿಮಾ ಮಾಡೋಕೇ ಹೋಗಲ್ಲ’ ಎಂದಿದ್ದಾರೆ ಅವರು. ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸುವಾಗ ಈ ಮಾತನ್ನು ಹೇಳಿದ್ದಾರೆ.

‘ದಿ ಕಾಶ್ಮೀರ್​ ಫಿಲ್ಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಹಿಟ್ ಆಗಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರವನ್ನು ಕೆಲವರು ವಿರೋಧಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಜಾನ್​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರಿಸೋಕೆ ಅವರು ನಿರಾಕರಿಸಿದ್ದಾರೆ. ‘ನಾನು ಸಿನಿಮಾ ನೋಡಿಲ್ಲ. ನಾನು ನನ್ನ ಸಿನಿಮಾ ಬಗ್ಗೆ ಮಾತ್ರ ಉತ್ತರಿಸುತ್ತೇನೆ. ನಿಮ್ಮ ಎಡಿಟರ್​ ಕಾಂಟ್ರವರ್ಸಿ ತರೋಕೆ ಹೇಳಿರುತ್ತಾರೆ. ಅದಕ್ಕಾಗಿ ನೀವು ಇಲ್ಲಿ ಬಂದು ಕಾಶ್ಮೀರ್​ ಫೈಲ್ಸ್​ ಬಗ್ಗೆ ಕೇಳುತ್ತಿದ್ದೀರಿ. ನಾನು ಅದಕ್ಕೆ ಏಕೆ ಉತ್ತರಿಸಲಿ’ ಎಂದು ಮರುಪ್ರಶ್ನೆ ಹಾಕಿದ್ದಾರೆ ಅವರು.

ಇದನ್ನೂ ಓದಿ: ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?

ಸ್ವೀಟ್​ ಕಂಡರೆ ಅತ್ತ ತಿರುಗಿಯೂ ನೋಡಲ್ಲ ಜಾನ್​ ಅಬ್ರಾಹಂ; ಅವರಿಗೆ ಇರೋ ಸಮಸ್ಯೆ ಏನು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!