AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಸಂಸಾರ ಹಾಳಾಗಲು ಪ್ರೀತಿ ಜಿಂಟಾ ಕಾರಣ’; ನೇರವಾಗಿ ಆರೋಪ ಮಾಡಿದ ನಟಿ

ಸುಚಿತ್ರಾ ಮದುವೆಯ ನಂತರ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ವಿಚ್ಛೇದನ ಆಗಿ ಎರಡು ದಶಕ ಕಳೆಯುತ್ತಾ ಬಂದರೂ ಆ ಘಟನೆಯನ್ನು ಸುಚಿತ್ರಾ ಮರೆತಿಲ್ಲ.

‘ನಮ್ಮ ಸಂಸಾರ ಹಾಳಾಗಲು ಪ್ರೀತಿ ಜಿಂಟಾ ಕಾರಣ’; ನೇರವಾಗಿ ಆರೋಪ ಮಾಡಿದ ನಟಿ
ಪ್ರೀತಿ ಜಿಂಟಾ-ಸುಚಿತ್ರಾ-ಶೇಖರ್
ರಾಜೇಶ್ ದುಗ್ಗುಮನೆ
|

Updated on:Jul 12, 2023 | 12:48 PM

Share

ಗಾಯಕಿ, ನಟಿ ಸುಚಿತ್ರಾ ಕೃಷ್ಣಮೂರ್ತಿ ಹಾಗೂ ಬಾಲಿವುಡ್ ನಿರ್ದೇಶಕ ಶೇಖರ್ ಕಪೂರ್ (Shekhar Kapur) ಮದುವೆ ಆಗಿದ್ದರು. ಕೆಲವೇ ವರ್ಷ ಇದ್ದ ಇವರ ಸಂಬಂಧ ಆ ಬಳಿಕ ಮುರಿದು ಬಿತ್ತು. ಇದಕ್ಕೆ ನಟಿ ಪ್ರೀತಿ ಜಿಂಟಾ ಕಾರಣ ಅನ್ನೋದು ಸುಚಿತ್ರಾ  (Suchitra Krishnamoorthi) ಅವರ ಆರೋಪ. ಈ ಕಾರಣಕ್ಕೆ ಪ್ರೀತಿಯನ್ನು ಅವರು ಎಂದಿಗೂ ಕ್ಷಮಿಸುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಸಂದರ್ಶನ ಒಂದರಲ್ಲಿ ಈ ಮಾತನ್ನು ಸುಚಿತ್ರಾ ಹೇಳಿಕೊಂಡಿದ್ದಾರೆ. ಈ ಮೊದಲು ಕೂಡ ಸುಚಿತ್ರಾ ಇದೇ ರೀತಿಯ ಹೇಳಿಕೆ ನೀಡಿದ್ದರು.

ಸುಚಿತ್ರಾ ವಯಸ್ಸಿನಲ್ಲಿ ತಮಗಿಂತ 30 ವರ್ಷ ದೊಡ್ಡವರಾದ ಶೇಖರ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದರು. 1997ರಲ್ಲಿ ಇವರ ಮದುವೆ ಜರುಗಿತು. ಈ ದಂಪತಿಗೆ ಹೆಣ್ಣು ಮಗು ಜನಿಸಿತು. ಇಬ್ಬರೂ 2006ರಲ್ಲಿ ವಿಚ್ಛೇದನ ಪಡೆದರು. ಮದುವೆಗೂ ಮುನ್ನ ಸಾಕಷ್ಟು ಬೇಡಿಕೆ ಹೊಂದಿದ್ದ ಸುಚಿತ್ರಾ ಮದುವೆಯ ನಂತರ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ವಿಚ್ಛೇದನ ಆಗಿ ಎರಡು ದಶಕ ಕಳೆಯುತ್ತಾ ಬಂದರೂ ಆ ಘಟನೆಯನ್ನು ಸುಚಿತ್ರಾ ಮರೆತಿಲ್ಲ.

ಇತ್ತೀಚಿನ ಸಂದರ್ಶನವೊಂದರಲ್ಲಿ ಸುಚಿತ್ರಾ ಮಾತನಾಡಿದ್ದಾರೆ. ‘ಶೇಖರ್ ಕಪೂರ್ ಪ್ರೀತಿಯಲ್ಲಿ ಪ್ರಾಮಾಣಿಕತೆ ಇರಲಿಲ್ಲ. ನಟಿ ಪ್ರೀತಿ ಜಿಂಟಾ ಅವರೊಂದಿಗೆ ಶೇಖರ್ ಕ್ಲೋಸ್ ಆಗಿದ್ದರು. ನಾನು ಪ್ರೀತಿಯನ್ನು ಎಂದಿಗೂ ಕ್ಷಮಿಸುವುದಿಲ್ಲ’ ಎಂದಿದ್ದಾರೆ. ಈ ಮೂಲಕ ಪ್ರೀತಿ ಜಿಂಟಾ ಅವರೇ ವಿಚ್ಛೇದನಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಈ ಮೊದಲು ಕೂಡ ಸುಚಿತ್ರಾ ಇದೇ ರೀತಿಯ ಆರೋಪ ಮಾಡಿದ್ದರು. ಆದರೆ, ಪ್ರೀತಿ ಜಿಂಟಾ ಈ ಆರೋಪಗಳನ್ನು ನಿರಾಕರಿಸಿದ್ದರು. ‘ಸುಚಿತ್ರಾ ಅವರೇ ನನ್ನ ಜೊತೆ ಹಾಗೆ ಮಾತಾಡಬೇಡಿ. ನಿಮ್ಮ ಮನಸ್ಥಿತಿ ಸರಿಯಿಲ್ಲ. ನೀವು ಮನೋವೈದ್ಯರನ್ನು ಭೇಟಿ ಮಾಡುವುದು ಉತ್ತಮ’ ಎಂದು ಪ್ರೀತಿ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆಯೂ ಸುಚಿತ್ರಾಗೆ ಕೇಳಲಾಯಿತು.

ಇದನ್ನೂ ಓದಿ: ಒಂದೇ ವಾರದಲ್ಲಿ ನಡೆದ ಎರಡು ಶಾಕಿಂಗ್ ಘಟನೆ ಹಂಚಿಕೊಂಡ ನಟಿ ಪ್ರೀತಿ ಜಿಂಟಾ

‘ನನಗೆ ಅವರ ಪ್ರತಿಕ್ರಿಯೆ ಬೇಕಿಲ್ಲ. ಇದು ಮುಕ್ತ ಜಗತ್ತು. ಅವರಿಗೆ ಏನು ಅನ್ನಿಸಿತೋ ಅದನ್ನು ಅವರು ಹೇಳಬಹುದು. ನಾನು ಗೃಹಿಣಿ ಆಗಿರುವುದಕ್ಕೆ ಖುಷಿ ಇದೆ. ಕಳೆದ 20 ವರ್ಷದಿಂದ ತಾಯಿ ಆಗಿದ್ದೇನೆ. ಆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಸುಚಿತ್ರಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Wed, 12 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?