AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಸಂಸಾರ ಹಾಳಾಗಲು ಪ್ರೀತಿ ಜಿಂಟಾ ಕಾರಣ’; ನೇರವಾಗಿ ಆರೋಪ ಮಾಡಿದ ನಟಿ

ಸುಚಿತ್ರಾ ಮದುವೆಯ ನಂತರ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ವಿಚ್ಛೇದನ ಆಗಿ ಎರಡು ದಶಕ ಕಳೆಯುತ್ತಾ ಬಂದರೂ ಆ ಘಟನೆಯನ್ನು ಸುಚಿತ್ರಾ ಮರೆತಿಲ್ಲ.

‘ನಮ್ಮ ಸಂಸಾರ ಹಾಳಾಗಲು ಪ್ರೀತಿ ಜಿಂಟಾ ಕಾರಣ’; ನೇರವಾಗಿ ಆರೋಪ ಮಾಡಿದ ನಟಿ
ಪ್ರೀತಿ ಜಿಂಟಾ-ಸುಚಿತ್ರಾ-ಶೇಖರ್
Follow us
ರಾಜೇಶ್ ದುಗ್ಗುಮನೆ
|

Updated on:Jul 12, 2023 | 12:48 PM

ಗಾಯಕಿ, ನಟಿ ಸುಚಿತ್ರಾ ಕೃಷ್ಣಮೂರ್ತಿ ಹಾಗೂ ಬಾಲಿವುಡ್ ನಿರ್ದೇಶಕ ಶೇಖರ್ ಕಪೂರ್ (Shekhar Kapur) ಮದುವೆ ಆಗಿದ್ದರು. ಕೆಲವೇ ವರ್ಷ ಇದ್ದ ಇವರ ಸಂಬಂಧ ಆ ಬಳಿಕ ಮುರಿದು ಬಿತ್ತು. ಇದಕ್ಕೆ ನಟಿ ಪ್ರೀತಿ ಜಿಂಟಾ ಕಾರಣ ಅನ್ನೋದು ಸುಚಿತ್ರಾ  (Suchitra Krishnamoorthi) ಅವರ ಆರೋಪ. ಈ ಕಾರಣಕ್ಕೆ ಪ್ರೀತಿಯನ್ನು ಅವರು ಎಂದಿಗೂ ಕ್ಷಮಿಸುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಸಂದರ್ಶನ ಒಂದರಲ್ಲಿ ಈ ಮಾತನ್ನು ಸುಚಿತ್ರಾ ಹೇಳಿಕೊಂಡಿದ್ದಾರೆ. ಈ ಮೊದಲು ಕೂಡ ಸುಚಿತ್ರಾ ಇದೇ ರೀತಿಯ ಹೇಳಿಕೆ ನೀಡಿದ್ದರು.

ಸುಚಿತ್ರಾ ವಯಸ್ಸಿನಲ್ಲಿ ತಮಗಿಂತ 30 ವರ್ಷ ದೊಡ್ಡವರಾದ ಶೇಖರ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದರು. 1997ರಲ್ಲಿ ಇವರ ಮದುವೆ ಜರುಗಿತು. ಈ ದಂಪತಿಗೆ ಹೆಣ್ಣು ಮಗು ಜನಿಸಿತು. ಇಬ್ಬರೂ 2006ರಲ್ಲಿ ವಿಚ್ಛೇದನ ಪಡೆದರು. ಮದುವೆಗೂ ಮುನ್ನ ಸಾಕಷ್ಟು ಬೇಡಿಕೆ ಹೊಂದಿದ್ದ ಸುಚಿತ್ರಾ ಮದುವೆಯ ನಂತರ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ವಿಚ್ಛೇದನ ಆಗಿ ಎರಡು ದಶಕ ಕಳೆಯುತ್ತಾ ಬಂದರೂ ಆ ಘಟನೆಯನ್ನು ಸುಚಿತ್ರಾ ಮರೆತಿಲ್ಲ.

ಇತ್ತೀಚಿನ ಸಂದರ್ಶನವೊಂದರಲ್ಲಿ ಸುಚಿತ್ರಾ ಮಾತನಾಡಿದ್ದಾರೆ. ‘ಶೇಖರ್ ಕಪೂರ್ ಪ್ರೀತಿಯಲ್ಲಿ ಪ್ರಾಮಾಣಿಕತೆ ಇರಲಿಲ್ಲ. ನಟಿ ಪ್ರೀತಿ ಜಿಂಟಾ ಅವರೊಂದಿಗೆ ಶೇಖರ್ ಕ್ಲೋಸ್ ಆಗಿದ್ದರು. ನಾನು ಪ್ರೀತಿಯನ್ನು ಎಂದಿಗೂ ಕ್ಷಮಿಸುವುದಿಲ್ಲ’ ಎಂದಿದ್ದಾರೆ. ಈ ಮೂಲಕ ಪ್ರೀತಿ ಜಿಂಟಾ ಅವರೇ ವಿಚ್ಛೇದನಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಈ ಮೊದಲು ಕೂಡ ಸುಚಿತ್ರಾ ಇದೇ ರೀತಿಯ ಆರೋಪ ಮಾಡಿದ್ದರು. ಆದರೆ, ಪ್ರೀತಿ ಜಿಂಟಾ ಈ ಆರೋಪಗಳನ್ನು ನಿರಾಕರಿಸಿದ್ದರು. ‘ಸುಚಿತ್ರಾ ಅವರೇ ನನ್ನ ಜೊತೆ ಹಾಗೆ ಮಾತಾಡಬೇಡಿ. ನಿಮ್ಮ ಮನಸ್ಥಿತಿ ಸರಿಯಿಲ್ಲ. ನೀವು ಮನೋವೈದ್ಯರನ್ನು ಭೇಟಿ ಮಾಡುವುದು ಉತ್ತಮ’ ಎಂದು ಪ್ರೀತಿ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆಯೂ ಸುಚಿತ್ರಾಗೆ ಕೇಳಲಾಯಿತು.

ಇದನ್ನೂ ಓದಿ: ಒಂದೇ ವಾರದಲ್ಲಿ ನಡೆದ ಎರಡು ಶಾಕಿಂಗ್ ಘಟನೆ ಹಂಚಿಕೊಂಡ ನಟಿ ಪ್ರೀತಿ ಜಿಂಟಾ

‘ನನಗೆ ಅವರ ಪ್ರತಿಕ್ರಿಯೆ ಬೇಕಿಲ್ಲ. ಇದು ಮುಕ್ತ ಜಗತ್ತು. ಅವರಿಗೆ ಏನು ಅನ್ನಿಸಿತೋ ಅದನ್ನು ಅವರು ಹೇಳಬಹುದು. ನಾನು ಗೃಹಿಣಿ ಆಗಿರುವುದಕ್ಕೆ ಖುಷಿ ಇದೆ. ಕಳೆದ 20 ವರ್ಷದಿಂದ ತಾಯಿ ಆಗಿದ್ದೇನೆ. ಆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಸುಚಿತ್ರಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Wed, 12 July 23

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ