AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷುಕರಿಗೆ 1 ರೂಪಾಯಿಯೂ ಕೊಡದೇ ಮುಂದೆ ಸಾಗಿದ ಸೈಫ್​ ಮಗ ಇಬ್ರಾಹಿಂ ಅಲಿ ಖಾನ್; ವಿಡಿಯೋ ವೈರಲ್​

Ibrahim Ali Khan: ಬಡ ಮಹಿಳೆಯರು ಬಂದು ಸಹಾಯಕ್ಕಾಗಿ ಅಂಗಲಾಚಿದಾಗ ಇಬ್ರಾಹಿಂ ಅಲಿ ಖಾನ್ ಒಂದು ರೂಪಾಯಿಯನ್ನೂ ನೀಡಲಿಲ್ಲ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಭಿಕ್ಷುಕರಿಗೆ 1 ರೂಪಾಯಿಯೂ ಕೊಡದೇ ಮುಂದೆ ಸಾಗಿದ ಸೈಫ್​ ಮಗ ಇಬ್ರಾಹಿಂ ಅಲಿ ಖಾನ್; ವಿಡಿಯೋ ವೈರಲ್​
ಇಬ್ರಾಹಿಂ ಅಲಿ ಖಾನ್
TV9 Web
| Updated By: ಮದನ್​ ಕುಮಾರ್​|

Updated on:May 09, 2022 | 10:18 AM

Share

ಖ್ಯಾತ ನಟ ಸೈಫ್​ ಅಲಿ ಖಾನ್​ (Sai Ali Khan) ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ತೊಡಗಿಕೊಂಡಿದೆ. ಸೈಫ್​ ಪುತ್ರ ಇಬ್ರಾಹಿಂ ಅಲಿ ಖಾನ್​ ಇನ್ನೂ ನಟನೆಗೆ ಎಂಟ್ರಿ ನೀಡಿಲ್ಲ. ಹಾಗಿದ್ದರೂ ಕೂಡ ಅವರು ಸಖತ್​ ಫೇಮಸ್​ ಆಗಿದ್ದಾರೆ. ಅವರು ಹೋದಲ್ಲಿ ಬಂದಲ್ಲಿ ಪಾಪರಾಜಿ ಕ್ಯಾಮೆರಾಗಳು ಮುತ್ತಿಕೊಳ್ಳುತ್ತವೆ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರು ಆಗಾಗ ಸುದ್ದಿ ಆಗುತ್ತಾರೆ. ಇಬ್ರಾಹಿಂ ಅಲಿ ಖಾನ್​ (Ibrahim Ali Khan) ಅವರ ಖಾಸಗಿ ಜೀವನದ ವಿಷಯಗಳು ಕೂಡ ಹೆಚ್ಚು ಹೈಲೈಟ್​ ಆಗುತ್ತಿವೆ. ಇತ್ತೀಚೆಗೆ ಅವರು ಮುಂಬೈನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಜಾಸ್ತಿ ಆಗಿದೆ. ನಟಿ ಪಲಕ್​ ತಿವಾರಿ (Palak Tiwari) ಜೊತೆ ಅವರ ಸುತ್ತಾಟ ಹೆಚ್ಚಾಗಿದೆ. ಅವರ ಕೆಲವು ವಿಡಿಯೋಗಳು ಕೂಡ ವೈರಲ್​ ಆಗುತ್ತಿವೆ. ಈ ಜೋಡಿಯ ಮಧ್ಯೆ ಏನೋ ನಡೆಯುತ್ತಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಇಬ್ರಾಹಿಂ ಅಲಿ ಖಾನ್​ ಅವರ ಒಂದು ವರ್ತನೆಗೆ ನೆಟ್ಟಿಗರಿಂದ ಸಖತ್​ ಟೀಕೆ ವ್ಯಕ್ತವಾಗುತ್ತಿದೆ. ಭಿಕ್ಷುಕರು ಹಣ ಕೇಳಿದಾಗ ಇಬ್ರಾಹಿಂ ಒಂದು ರೂಪಾಯಿಯನ್ನೂ ನೀಡಿದೇ ಮುಂದೆ ಸಾಗಿರುವ ವಿಡಿಯೋ ಈಗ ವೈರಲ್​ ಆಗಿದೆ.

ಇಬ್ರಾಹಿಂ ಅಲಿ ಖಾನ್​ ಹಾಗೂ ಅವರ ಗೆಳತಿ ಪಲಕ್​ ತಿವಾರಿ ಅವರು ಇನ್ನಿತರ ಸ್ನೇಹಿತರ ಜೊತೆ ಸೇರಿ ವೀಕೆಂಡ್​ನಲ್ಲಿ​ ಎಂಜಾಯ್​ ಮಾಡಿದ್ದಾರೆ. ಮುಂಬೈನ ಒಂದು ರೆಸ್ಟೊರೆಂಟ್​​ಗೆ ತೆರಳಿ ಎಲ್ಲರೂ ಪಾರ್ಟಿ ಮಾಡಿದ್ದಾರೆ. ಊಟ ಸವಿದ ಬಳಿಕ ರೆಸ್ಟೊರೆಂಟ್​ನಿಂದ ಹೊರಬರುವಾಗ ಅವರ ಫೋಟೋ ಮತ್ತು ವಿಡಿಯೋ ಸೆರೆಹಿಡಿಯಲು ಪಾಪರಾಜಿಗಳು ಸುತ್ತುವರಿದರು. ಅದೇ ಸಂದರ್ಭದಲ್ಲಿ ಕೆಲವು ಭಿಕ್ಷುಕರು ಕೂಡ ಅಲ್ಲಿದ್ದರು. ಅವರು ಹಣ ನೀಡುವಂತೆ ಅಂಗಲಾಚಿದಾಗ ಸ್ಟಾರ್​ ಕಿಡ್​ಗಳು ಒಂದು ರೂಪಾಯಿಯನ್ನೂ ನೀಡಲಿಲ್ಲ.

ಇದನ್ನೂ ಓದಿ
Image
ಸೈಫ್ ಮಗನನ್ನು ಕಂಡು ​ಶಾರುಖ್ ಪುತ್ರ ಅಂತ ಕರೆದ ಫ್ಯಾನ್ಸ್​​; ಇಬ್ರಾಹಿಂ ಅಲಿ ಖಾನ್​ ಪ್ರತಿಕ್ರಿಯೆ ಹೇಗಿತ್ತು?
Image
ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋಗ್ತಾರೆ ಅಂತ ಭಾವಿಸಿದ್ದ ನಟಿ
Image
ಸೈಫ್​ ಅಲಿ ಖಾನ್​ ಪುತ್ರ ಇಬ್ರಾಹಿಂ ಜತೆ ಪಲಕ್​ ತಿವಾರಿ ಡೇಟಿಂಗ್​; ಕ್ಯಾಮೆರಾ ಕಂಡ ತಕ್ಷಣ ಮುಖ ಮುಚ್ಚಿಕೊಂಡ ನಟಿ
Image
ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಾರಾ ಅಲಿ ಖಾನ್​; ಸೈಫ್​ ಪುತ್ರಿಯ ಫೋಟೋ ವೈರಲ್​

ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮಗುವನ್ನು ಎತ್ತಿಕೊಂಡು ಬಂದ ಮಹಿಳೆಯರು ‘ದಯವಿಟ್ಟು ನಮಗೆ ಹಣ ನೀಡಿ. ನಾವು ಕೂಡ ಊಟ ಮಾಡುತ್ತೇವೆ’ ಎಂದು ಬೇಡುತ್ತಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಇಬ್ರಾಹಿಂ ಅಲಿ ಖಾನ್​ ಅವರು ಕುಳಿತ ಕಾರಿನ ಕಿಟಿಕಿ ಪಕ್ಕದಲ್ಲೇ ನಿಂತು ಆ ಮಹಿಳೆಯರು ಭಿಕ್ಷೆ ಬೇಡಿದರು. ಅವರಿಗೆ ಇಬ್ರಾಹಿಂ ಸಹಾಯ ಮಾಡಲಿಲ್ಲ. ಮಹಿಳೆಯ ಮುಖ ನೋಡಿ, ನಗುನಗುತ್ತ ಅವರು ಹೊರಟು ಹೋದರು. ಈ ವಿಡಿಯೋ ನೋಡಿದ ನೆಟ್ಟಿಗರು ಇಬ್ರಾಹಿಂ ಅಲಿ ಖಾನ್​ ವರ್ತನೆಗೆ ಛೀಮಾರಿ ಹಾಕಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಸೆಲೆಬ್ರಿಟಿಗಳು ಹಸಿದ ಆ ಮಹಿಳೆಯರಿಗೆ ಕನಿಷ್ಠ ನೂರು ರೂಪಾಯಿಯನ್ನಾದರೂ ಕೊಡಬಹುದಿತ್ತು ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇಬ್ರಾಹಿಂ ಅಲಿ ಖಾನ್​ ಮತ್ತು ಪಲಕ್​ ತಿವಾರಿ ಅವರು ಹೀಗೆ ಜೊತೆಯಾಗಿ ಸುತ್ತಾಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಕೂಡ ಅವರು ಪಾಪರಾಜಿ ಕ್ಯಾಮೆರಾಗಳ ಕಣ್ಣಿಗೆ ಬಿದ್ದಿದ್ದುಂಟು. ಆ ಸಂದರ್ಭದಲ್ಲಿ ಪಲಕ್​ ತಿವಾರಿ ಅವರು ಮುಖ ಮುಚ್ಚಿಕೊಂಡಿದ್ದರು. ಆದರೆ ಈಗ ಅವರ ಆತ್ಮವಿಶ್ವಾಸ ಹೆಚ್ಚಿದಂತಿದೆ. ಈ ಬಾರಿ ಅವರು ಮುಖ ಮುಚ್ಚಿಕೊಂಡಿಲ್ಲ. ಧೈರ್ಯವಾಗಿ ಕ್ಯಾಮೆರಾಗಳ ಕಡೆಗೆ ನೋಡಿ, ಎಲ್ಲರಿಗೂ ವಿಶ್​ ಮಾಡುತ್ತ ಅವರು ಮುಂದೆ ಸಾಗಿದ್ದಾರೆ.

ಇಬ್ರಾಹಿಂ ಅಲಿ ಖಾನ್​ ಅವರು ಇಂಗ್ಲೆಂಡ್​ನಲ್ಲಿ ಉನ್ನತ ಶಿಕ್ಷಣ ಮುಗಿಸಿ ಬಂದಿದ್ದಾರೆ. ಚಿತ್ರರಂಗದ ಬಗ್ಗೆ ಅವರಿಗೆ ಆಸಕ್ತಿ ಇದೆ. ಕರಣ್​ ಜೋಹರ್​ ನಿರ್ದೇಶನದ, ಆಲಿಯಾ ಭಟ್​ ಹಾಗೂ ರಣವೀರ್​ ಸಿಂಗ್​ ನಟನೆಯ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಇಬ್ರಾಹಿಂ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಡೈರೆಕ್ಟರ್​ ಆಗಿ ಮುಂದುವರಿಯುತ್ತಾರೋ ಅಥವಾ ಹೀರೋ ಆಗಿ ಬಾಲಿವುಡ್​ಗೆ ಎಂಟ್ರಿ ಕೊಡುತ್ತಾರೋ ಎಂಬ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:18 am, Mon, 9 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!