AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಮಿರ್​ ಖಾನ್​ ಬೋಗಸ್​ ಮತ್ತು ಫ್ರಾಡ್​’; ನೇರ ಟೀಕೆ ಮಾಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​

Vivek Agnihotri: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಪ್ರಾಮಾಣಿಕತೆಯೇ ಇಲ್ಲ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ. ಆಮಿರ್ ಖಾನ್​ ಬಗ್ಗೆ ಅವರು ಕಟು ಟೀಕೆ ಮಾಡಿದ್ದಾರೆ.

‘ಆಮಿರ್​ ಖಾನ್​ ಬೋಗಸ್​ ಮತ್ತು ಫ್ರಾಡ್​’; ನೇರ ಟೀಕೆ ಮಾಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​
ವಿವೇಕ್ ಅಗ್ನಿಹೋತ್ರಿ, ಆಮಿರ್ ಖಾನ್
TV9 Web
| Edited By: |

Updated on: Sep 05, 2022 | 3:41 PM

Share

ಸದ್ಯಕ್ಕೆ ನಟ ಆಮಿರ್ ಖಾನ್​ (Aamir Khan) ಅವರ ಟೈಮ್​ ಚೆನ್ನಾಗಿಲ್ಲ ಎನಿಸುತ್ತಿದೆ. ಅವರು ಮಾಡಿದ ಎಲ್ಲ ಪ್ರಯತ್ನಗಳು ಕೈ ಹಿಡಿಯುತ್ತಿಲ್ಲ. ಈ ಹಿಂದೆ ‘ಥಗ್ಸ್​ ಆಫ್​ ಹಿಂದೂಸ್ತಾನ್​’ ಸಿನಿಮಾ ಸೋಲುಂಡಿತು. ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾ ಈ ವರ್ಷ ತೆರೆಕಂಡಿತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಹೀನಾಯವಾಗಿ ಸೋತಿದೆ. ಆ ಬಳಿಕ ಅವರನ್ನು ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಕೂಡ ಮುಲಾಜಿಲ್ಲದೇ ಕೆಲವೊಂದು ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ಆಮಿರ್​ ಖಾನ್​ 100-150 ಕೋಟಿ ರೂಪಾಯಿ ಸಂಭಾವನೆ ಪಡೆಯುವುದು ಒಂದು ಬೋಗಸ್​ ಮತ್ತು ಫ್ರಾಡ್​ ಒಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಸಿಕ್ಕಿತು. ಬಾಲಿವುಡ್​ನ ಅನೇಕರ ಬಗ್ಗೆ ಅವರು ನಿಷ್ಠುರವಾಗಿ ಮಾನಾಡಿದ್ದಾರೆ. ಈಗ ಆಮಿರ್​ ಖಾನ್​ ಅವರನ್ನು ವಿವೇಕ್​ ಅಗ್ನಿಹೋತ್ರಿ ಟಾರ್ಗೆಟ್​ ಮಾಡಿದ್ದಾರೆ.

ಜನರು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾವನ್ನು ಬಹಿಷ್ಕಾರ ಮಾಡಿದ್ದರಿಂದ ಈ ಚಿತ್ರ ಸೋತಿಲ್ಲ ಎಂಬುದು ವಿವೇಕ್​ ಅಗ್ನಿಹೋತ್ರಿ ಅವರ ವಾದ. ‘ಆಮಿರ್​ ಖಾನ್​ ಅವರಿಗೆ ನಿಷ್ಠಾವಂತ ಅಭಿಮಾನಿಗಳು ಇಲ್ಲ. ಹಾಗಿದ್ದ ಮೇಲೆ ಎಲ್ಲವೂ ಬೋಗಸ್​ ಮತ್ತು ಫ್ರಾಡ್​. ನೀವು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದೀರಿ. ನೀವು ಯಾಕೆ 100-150 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತೀರಿ?’ ಎಂದು ವಿವೇಕ್​ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಪ್ರಾಮಾಣಿಕತೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

‘ಈ ಹಿಂದೆ ‘ದಂಗಲ್​’ ಚಿತ್ರ ರಿಲೀಸ್​ ಆದಾಗಲೂ ಜನರು ಬಹಿಷ್ಕಾರದ ಮಾತುಗಳನ್ನು ಆಡಿದ್ದರು. ಆದರೂ ಕೂಡ ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಯಾಕೆಂದರೆ ಅದರಲ್ಲಿ ಪ್ರಾಮಾಣಿಕತೆ ಇತ್ತು. ತಂದೆಯ ಪಾತ್ರಕ್ಕಾಗಿ ಅವರು ತೂಕ ಹೆಚ್ಚಿಸಿಕೊಂಡಿದ್ದರು. ನಂತರ ತೂಕ ಕಡಿಮೆ ಮಾಡಿಕೊಂಡಿದ್ದರು’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

‘ಭಕ್ತರಿಂದಾಗಿ ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಸೋತಿತು ಎಂದು ಕೆಲವರು ಹೇಳ್ತಾರೆ. ನರೇಂದ್ರ ಮೋದಿಗೆ ಎಷ್ಟು ಜನ ವೂಟ್​ ಮಾಡಬಹುದು. ಶೇಕಡ 40ರಿಂದ ಶೇಕಡ 50ರಷ್ಟು ಇರಬಹುದಾ? ಇನ್ನುಳಿದವರು ಯಾಕೆ ಸಿನಿಮಾವನ್ನು ಗೆಲ್ಲಿಸಲಿಲ್ಲ’ ಎಂದು ವಿವೇಕ್​ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್