AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಮಿರ್​ ಖಾನ್​ ಬೋಗಸ್​ ಮತ್ತು ಫ್ರಾಡ್​’; ನೇರ ಟೀಕೆ ಮಾಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​

Vivek Agnihotri: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಪ್ರಾಮಾಣಿಕತೆಯೇ ಇಲ್ಲ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ. ಆಮಿರ್ ಖಾನ್​ ಬಗ್ಗೆ ಅವರು ಕಟು ಟೀಕೆ ಮಾಡಿದ್ದಾರೆ.

‘ಆಮಿರ್​ ಖಾನ್​ ಬೋಗಸ್​ ಮತ್ತು ಫ್ರಾಡ್​’; ನೇರ ಟೀಕೆ ಮಾಡಿದ ‘ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​
ವಿವೇಕ್ ಅಗ್ನಿಹೋತ್ರಿ, ಆಮಿರ್ ಖಾನ್
TV9 Web
| Edited By: |

Updated on: Sep 05, 2022 | 3:41 PM

Share

ಸದ್ಯಕ್ಕೆ ನಟ ಆಮಿರ್ ಖಾನ್​ (Aamir Khan) ಅವರ ಟೈಮ್​ ಚೆನ್ನಾಗಿಲ್ಲ ಎನಿಸುತ್ತಿದೆ. ಅವರು ಮಾಡಿದ ಎಲ್ಲ ಪ್ರಯತ್ನಗಳು ಕೈ ಹಿಡಿಯುತ್ತಿಲ್ಲ. ಈ ಹಿಂದೆ ‘ಥಗ್ಸ್​ ಆಫ್​ ಹಿಂದೂಸ್ತಾನ್​’ ಸಿನಿಮಾ ಸೋಲುಂಡಿತು. ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾ ಈ ವರ್ಷ ತೆರೆಕಂಡಿತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಹೀನಾಯವಾಗಿ ಸೋತಿದೆ. ಆ ಬಳಿಕ ಅವರನ್ನು ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಕೂಡ ಮುಲಾಜಿಲ್ಲದೇ ಕೆಲವೊಂದು ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ಆಮಿರ್​ ಖಾನ್​ 100-150 ಕೋಟಿ ರೂಪಾಯಿ ಸಂಭಾವನೆ ಪಡೆಯುವುದು ಒಂದು ಬೋಗಸ್​ ಮತ್ತು ಫ್ರಾಡ್​ ಒಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಸಿಕ್ಕಿತು. ಬಾಲಿವುಡ್​ನ ಅನೇಕರ ಬಗ್ಗೆ ಅವರು ನಿಷ್ಠುರವಾಗಿ ಮಾನಾಡಿದ್ದಾರೆ. ಈಗ ಆಮಿರ್​ ಖಾನ್​ ಅವರನ್ನು ವಿವೇಕ್​ ಅಗ್ನಿಹೋತ್ರಿ ಟಾರ್ಗೆಟ್​ ಮಾಡಿದ್ದಾರೆ.

ಜನರು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾವನ್ನು ಬಹಿಷ್ಕಾರ ಮಾಡಿದ್ದರಿಂದ ಈ ಚಿತ್ರ ಸೋತಿಲ್ಲ ಎಂಬುದು ವಿವೇಕ್​ ಅಗ್ನಿಹೋತ್ರಿ ಅವರ ವಾದ. ‘ಆಮಿರ್​ ಖಾನ್​ ಅವರಿಗೆ ನಿಷ್ಠಾವಂತ ಅಭಿಮಾನಿಗಳು ಇಲ್ಲ. ಹಾಗಿದ್ದ ಮೇಲೆ ಎಲ್ಲವೂ ಬೋಗಸ್​ ಮತ್ತು ಫ್ರಾಡ್​. ನೀವು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದೀರಿ. ನೀವು ಯಾಕೆ 100-150 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತೀರಿ?’ ಎಂದು ವಿವೇಕ್​ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಪ್ರಾಮಾಣಿಕತೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

‘ಈ ಹಿಂದೆ ‘ದಂಗಲ್​’ ಚಿತ್ರ ರಿಲೀಸ್​ ಆದಾಗಲೂ ಜನರು ಬಹಿಷ್ಕಾರದ ಮಾತುಗಳನ್ನು ಆಡಿದ್ದರು. ಆದರೂ ಕೂಡ ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಯಾಕೆಂದರೆ ಅದರಲ್ಲಿ ಪ್ರಾಮಾಣಿಕತೆ ಇತ್ತು. ತಂದೆಯ ಪಾತ್ರಕ್ಕಾಗಿ ಅವರು ತೂಕ ಹೆಚ್ಚಿಸಿಕೊಂಡಿದ್ದರು. ನಂತರ ತೂಕ ಕಡಿಮೆ ಮಾಡಿಕೊಂಡಿದ್ದರು’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

‘ಭಕ್ತರಿಂದಾಗಿ ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಸೋತಿತು ಎಂದು ಕೆಲವರು ಹೇಳ್ತಾರೆ. ನರೇಂದ್ರ ಮೋದಿಗೆ ಎಷ್ಟು ಜನ ವೂಟ್​ ಮಾಡಬಹುದು. ಶೇಕಡ 40ರಿಂದ ಶೇಕಡ 50ರಷ್ಟು ಇರಬಹುದಾ? ಇನ್ನುಳಿದವರು ಯಾಕೆ ಸಿನಿಮಾವನ್ನು ಗೆಲ್ಲಿಸಲಿಲ್ಲ’ ಎಂದು ವಿವೇಕ್​ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ