AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಕ್ಷಿಣ ಹಾಗೂ ಬಾಲಿವುಡ್ ಒಂದಾದರೆ ಪ್ರತಿ ಸಿನಿಮಾ 4000 ಕೋಟಿ ಬಿಸ್ನೆಸ್​ ಮಾಡುತ್ತೆ’- ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ತೆಲುಗಿನ ‘ಗಾಡ್​ಫಾದರ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

‘ದಕ್ಷಿಣ ಹಾಗೂ ಬಾಲಿವುಡ್ ಒಂದಾದರೆ ಪ್ರತಿ ಸಿನಿಮಾ 4000 ಕೋಟಿ ಬಿಸ್ನೆಸ್​ ಮಾಡುತ್ತೆ’- ಸಲ್ಮಾನ್ ಖಾನ್
ಸಲ್ಮಾನ್​-ಚಿರಂಜೀವಿ
TV9 Web
| Edited By: |

Updated on: Oct 04, 2022 | 4:14 PM

Share

ದಕ್ಷಿಣ ಭಾರತ ಚಿತ್ರರಂಗ ಹಾಗೂ ಬಾಲಿವುಡ್ (Bollywood) ಎಂಬ ಚರ್ಚೆ ಈ ಮೊದಲಿನಿಂದಲೂ ಇದೆ. ಬಹುತೇಕ ಸ್ಟಾರ್ಸ್​ಗಳು ಈ ಬಗ್ಗೆ ತಮ್ಮತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಿದೆ. ಬಾಲಿವುಡ್​ನ ಅನೇಕರು ಈ ಚರ್ಚೆ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದು ಕರೆ ನೀಡಿದ್ದಿದೆ. ಈಗ ಸಲ್ಮಾನ್ ಖಾನ್ (Salman Khan) ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ದಕ್ಷಿಣ ಭಾರತದ ಹೀರೋಗಳು ಹಾಗೂ ಬಾಲಿವುಡ್​ ಮಂದಿ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ. ಹೀಗೆ ಮಾಡಿದರೆ ಸಿನಿಮಾ ಸಾವಿರಾರು ಕೋಟಿ ಕಲೆಕ್ಷನ್ ಮಾಡಲಿದೆ ಅನ್ನೋದು ಅವರ ಅಭಿಪ್ರಾಯ.

ಸಲ್ಮಾನ್ ಖಾನ್ ಅವರು ತೆಲುಗಿನ ‘ಗಾಡ್​ಫಾದರ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಚಿತ್ರದ ಹಿಂದಿ ಟೀಸರ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆದಿದೆ. ಈ ವೇಳೆ ಅವರಿಗೆ ದಕ್ಷಿಣ ಭಾರತದಲ್ಲಿ ಕೆಲಸ ಮಾಡಿದ ಅನುಭವ ಹೇಗಿತ್ತು ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.

ಅನೇಕ ಸ್ಟಾರ್​​ಗಳು ಹಾಲಿವುಡ್​ಗೆ ಹೋಗುವ ಇಚ್ಛೆ ವ್ಯಕ್ತಪಡಿಸಿದ್ದಿದೆ. ಆದರೆ, ಸಲ್ಮಾನ್ ಖಾನ್​ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಕೆಲಸ ಮಾಡಬೇಕು, ಇಲ್ಲಿ ಕೆಲಸ ಮಾಡಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ. ‘ಎಲ್ಲರಿಗೂ ಹಾಲಿವುಡ್​​ಗೆ ಹೋಗಬೇಕೆಂದಿರುತ್ತದೆ. ಆದರೆ ನನಗೆ ದಕ್ಷಿಣ ಭಾರತದಲ್ಲಿ ಕೆಲಸ ಮಾಡಬೇಕು ಎಂದಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಸಿನಿಮಾ ಮಾಡುವ ಬಿಸ್ನೆಸ್​ ಎಷ್ಟಿರಬಹುದು ಅಂದಾಜಿಸಿ. ಸಿನಿಮಾಗಳು ಸಾಮಾನ್ಯವಾಗಿ 300-400 ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತವೆ. ಆದರೆ, ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸ್ಟಾರ್​ಗಳು ಒಂದಾದರೆ 3000-4000 ಕೋಟಿ ರೂಪಾಯಿ ಕಲೆಕ್ಷನ್ ಆಗಬಹುದು. ಜನರು ಹಿಂದಿಯಲ್ಲೂ ಸಿನಿಮಾ ವೀಕ್ಷಿಸುತ್ತಾರೆ, ದಕ್ಷಿಣದಲ್ಲೂ ಸಿನಿಮಾ ನೋಡುತ್ತಾರೆ’ ಎಂದು ಸಲ್ಮಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಅವರ (ಚಿರಂಜೀವಿ) ಅಭಿಮಾನಿಗಳು ನನ್ನನ್ನೂ ನೋಡುತ್ತಾರೆ. ನನ್ನ ಅಭಿಮಾನಿಗಳು ಅವರನ್ನು ನೋಡುತ್ತಾರೆ. ಅವರ ಅಭಿಮಾನಿಗಳು ನನ್ನ ಅಭಿಮಾನಿಗಳಾಗುತ್ತಾರೆ, ನನ್ನ ಫ್ಯಾನ್ಸ್​ ಅವರ ಅಭಿಮಾನಿಗಳಾಗುತ್ತಾರೆ. ಎಲ್ಲರೂ ಬೆಳೆಯುತ್ತಾರೆ. ಗುಂಪು ದೊಡ್ಡದಾಗುತ್ತದೆ’ ಎಂದಿದ್ದಾರೆ ಸಲ್ಮಾನ್ ಖಾನ್. ಇದರಿಂದ ಸಿನಿಮಾ ಬಿಸ್ನೆಸ್​ ಹೆಚ್ಚುತ್ತದೆ ಎಂಬುದು ಅವರ ಅಭಿಪ್ರಾಯ.

ಮಲಯಾಳಂನ ‘ಲೂಸಿಫರ್​’ ಚಿತ್ರದ ರಿಮೇಕ್​ ‘ಗಾಡ್​ಫಾದರ್​’. ಚಿರಂಜೀವಿ, ಸಲ್ಮಾನ್ ಖಾನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಕ್ಟೋಬರ್ 5ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು