Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಕ್ಷಿಣ ಹಾಗೂ ಬಾಲಿವುಡ್ ಒಂದಾದರೆ ಪ್ರತಿ ಸಿನಿಮಾ 4000 ಕೋಟಿ ಬಿಸ್ನೆಸ್​ ಮಾಡುತ್ತೆ’- ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ತೆಲುಗಿನ ‘ಗಾಡ್​ಫಾದರ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

‘ದಕ್ಷಿಣ ಹಾಗೂ ಬಾಲಿವುಡ್ ಒಂದಾದರೆ ಪ್ರತಿ ಸಿನಿಮಾ 4000 ಕೋಟಿ ಬಿಸ್ನೆಸ್​ ಮಾಡುತ್ತೆ’- ಸಲ್ಮಾನ್ ಖಾನ್
ಸಲ್ಮಾನ್​-ಚಿರಂಜೀವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 04, 2022 | 4:14 PM

ದಕ್ಷಿಣ ಭಾರತ ಚಿತ್ರರಂಗ ಹಾಗೂ ಬಾಲಿವುಡ್ (Bollywood) ಎಂಬ ಚರ್ಚೆ ಈ ಮೊದಲಿನಿಂದಲೂ ಇದೆ. ಬಹುತೇಕ ಸ್ಟಾರ್ಸ್​ಗಳು ಈ ಬಗ್ಗೆ ತಮ್ಮತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಿದೆ. ಬಾಲಿವುಡ್​ನ ಅನೇಕರು ಈ ಚರ್ಚೆ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದು ಕರೆ ನೀಡಿದ್ದಿದೆ. ಈಗ ಸಲ್ಮಾನ್ ಖಾನ್ (Salman Khan) ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ದಕ್ಷಿಣ ಭಾರತದ ಹೀರೋಗಳು ಹಾಗೂ ಬಾಲಿವುಡ್​ ಮಂದಿ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ. ಹೀಗೆ ಮಾಡಿದರೆ ಸಿನಿಮಾ ಸಾವಿರಾರು ಕೋಟಿ ಕಲೆಕ್ಷನ್ ಮಾಡಲಿದೆ ಅನ್ನೋದು ಅವರ ಅಭಿಪ್ರಾಯ.

ಸಲ್ಮಾನ್ ಖಾನ್ ಅವರು ತೆಲುಗಿನ ‘ಗಾಡ್​ಫಾದರ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಚಿತ್ರದ ಹಿಂದಿ ಟೀಸರ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆದಿದೆ. ಈ ವೇಳೆ ಅವರಿಗೆ ದಕ್ಷಿಣ ಭಾರತದಲ್ಲಿ ಕೆಲಸ ಮಾಡಿದ ಅನುಭವ ಹೇಗಿತ್ತು ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.

ಅನೇಕ ಸ್ಟಾರ್​​ಗಳು ಹಾಲಿವುಡ್​ಗೆ ಹೋಗುವ ಇಚ್ಛೆ ವ್ಯಕ್ತಪಡಿಸಿದ್ದಿದೆ. ಆದರೆ, ಸಲ್ಮಾನ್ ಖಾನ್​ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಕೆಲಸ ಮಾಡಬೇಕು, ಇಲ್ಲಿ ಕೆಲಸ ಮಾಡಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ. ‘ಎಲ್ಲರಿಗೂ ಹಾಲಿವುಡ್​​ಗೆ ಹೋಗಬೇಕೆಂದಿರುತ್ತದೆ. ಆದರೆ ನನಗೆ ದಕ್ಷಿಣ ಭಾರತದಲ್ಲಿ ಕೆಲಸ ಮಾಡಬೇಕು ಎಂದಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಸಿನಿಮಾ ಮಾಡುವ ಬಿಸ್ನೆಸ್​ ಎಷ್ಟಿರಬಹುದು ಅಂದಾಜಿಸಿ. ಸಿನಿಮಾಗಳು ಸಾಮಾನ್ಯವಾಗಿ 300-400 ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತವೆ. ಆದರೆ, ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸ್ಟಾರ್​ಗಳು ಒಂದಾದರೆ 3000-4000 ಕೋಟಿ ರೂಪಾಯಿ ಕಲೆಕ್ಷನ್ ಆಗಬಹುದು. ಜನರು ಹಿಂದಿಯಲ್ಲೂ ಸಿನಿಮಾ ವೀಕ್ಷಿಸುತ್ತಾರೆ, ದಕ್ಷಿಣದಲ್ಲೂ ಸಿನಿಮಾ ನೋಡುತ್ತಾರೆ’ ಎಂದು ಸಲ್ಮಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಅವರ (ಚಿರಂಜೀವಿ) ಅಭಿಮಾನಿಗಳು ನನ್ನನ್ನೂ ನೋಡುತ್ತಾರೆ. ನನ್ನ ಅಭಿಮಾನಿಗಳು ಅವರನ್ನು ನೋಡುತ್ತಾರೆ. ಅವರ ಅಭಿಮಾನಿಗಳು ನನ್ನ ಅಭಿಮಾನಿಗಳಾಗುತ್ತಾರೆ, ನನ್ನ ಫ್ಯಾನ್ಸ್​ ಅವರ ಅಭಿಮಾನಿಗಳಾಗುತ್ತಾರೆ. ಎಲ್ಲರೂ ಬೆಳೆಯುತ್ತಾರೆ. ಗುಂಪು ದೊಡ್ಡದಾಗುತ್ತದೆ’ ಎಂದಿದ್ದಾರೆ ಸಲ್ಮಾನ್ ಖಾನ್. ಇದರಿಂದ ಸಿನಿಮಾ ಬಿಸ್ನೆಸ್​ ಹೆಚ್ಚುತ್ತದೆ ಎಂಬುದು ಅವರ ಅಭಿಪ್ರಾಯ.

ಮಲಯಾಳಂನ ‘ಲೂಸಿಫರ್​’ ಚಿತ್ರದ ರಿಮೇಕ್​ ‘ಗಾಡ್​ಫಾದರ್​’. ಚಿರಂಜೀವಿ, ಸಲ್ಮಾನ್ ಖಾನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಕ್ಟೋಬರ್ 5ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ