Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

Karan Johar: ಒಂದು ವೇಳೆ ಬಾಲಿವುಡ್​ನವರು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ದರೆ ವಿಮರ್ಶಕರ ಕಟುವಾದ ಟೀಕೆಯಿಂದ ಚಿತ್ರ ಸೋಲುತ್ತಿತ್ತು. ಯಾಕೆಂದರೆ ಹಿಂದಿ ಚಿತ್ರರಂಗದವರಿಗೆ ವಿಮರ್ಶಕರು ಹೆಚ್ಚು ಸ್ವಾತಂತ್ರ್ಯ ನೀಡಿಲ್ಲ ಎಂಬುದು ಕರಣ್​ ಜೋಹರ್​ ಅಭಿಪ್ರಾಯ.

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
ಯಶ್​, ಕರಣ್​ ಜೋಹರ್​
Follow us
TV9 Web
| Updated By: ಮದನ್​ ಕುಮಾರ್​

Updated on:Jun 19, 2022 | 9:35 AM

ಹಲವು ದಶಕಗಳಿಂದಲೂ ಭಾರತೀಯ ಚಿತ್ರರಂಗದ ಬಾಕ್ಸ್​ ಆಫೀಸ್​ ಮೇಲೆ ಹಿಡಿತ ಸಾಧಿಸಿದ್ದ ಬಾಲಿವುಡ್​ (Bollywood) ಈಗ ಕೊಂಚ ಮಂಕಾಗಿದೆ. ಹಿಂದಿ ಸಿನಿಮಾಗಳಿಗಿಂತಲೂ ದಕ್ಷಿಣ ಭಾರತದ ಭಾಷೆಗಳ ಸಿನಿಮಾಗಳೇ ಹೆಚ್ಚು ಕಲೆಕ್ಷನ್​ ಮಾಡುತ್ತಿವೆ. ಇದರಿಂದ ಸೌತ್​ ಸಿನಿಮಾ ವರ್ಸಸ್​ ಬಾಲಿವುಡ್​ ಎಂಬ ಚರ್ಚೆ ಕೂಡ ಶುರುವಾಗಿದೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2), ‘ಆರ್​ಆರ್​ಆರ್​’, ‘ಪುಷ್ಪ’ ಸಿನಿಮಾಗಳು ಮಾಡಿದ ಸಾಧನೆಯನ್ನು ಉತ್ತರ ಭಾರತದ ಮಂದಿ ಕೂಡ ಹೊಗಳಿದ್ದಾರೆ. ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್​ (Karan Johar) ಕೂಡ ‘ಕೆಜಿಎಫ್​ 2’ ಸಿನಿಮಾವನ್ನು ಮೆಚ್ಚಿಕೊಂಡರು. ಆದರೆ ಈಗ ಅವರೊಂದು ಭಿನ್ನವಾದ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಬಾಲಿವುಡ್​ನವರು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ದರೆ ಕಟುವಾದ ಟೀಕೆ ವ್ಯಕ್ತವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

‘ಫಿಲ್ಮ್​ ಕಂಪ್ಯಾನಿಯನ್​’ಗೆ ನೀಡಿದ ಸಂದರ್ಶನದಲ್ಲಿ ಕರಣ್​ ಜೋಹರ್​ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೆಜಿಎಫ್​ ಚಿತ್ರದ ವಿಮರ್ಶೆ ಓದಿದಾಗ, ಒಂದು ವೇಳೆ ನಾವು ಇಂಥ ಸಿನಿಮಾ ಮಾಡಿದ್ದರೆ ನಮ್ಮ ಮೇಲೆ (ವಿಮರ್ಶಕರಿಂದ) ಹಲ್ಲೆ ಆಗುತ್ತಿತ್ತು ಎನಿಸಿತು. ಆದರೆ ಈಗ ಇದೊಂದು ಸೆಲೆಬ್ರೇಷನ್​ ಎಂಬ ರೀತಿ ಎಲ್ಲರೂ ಹೇಳಿದರು. ನನಗೂ ಸಿನಿಮಾ ಇಷ್ಟ ಆಯ್ತು. ಅದನ್ನೇ ನಾವು ಮಾಡಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆ ಮೂಡುತ್ತದೆ’ ಎಂದು ಕರಣ್​ ಜೋಹರ್​ ಹೇಳಿದ್ದಾರೆ.

ಇದನ್ನೂ ಓದಿ: Top 10 Indian Movies: 2022ರ ಟಾಪ್​ 10 ಭಾರತೀಯ ಚಿತ್ರಗಳಲ್ಲಿ ಸ್ಥಾನ ಪಡೆದ 7 ಸೌತ್​ ಸಿನಿಮಾಗಳು; ನಂಬರ್​ ಒನ್​ ಯಾವುದು?

ಇದನ್ನೂ ಓದಿ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
ಕರಣ್​ ಜೋಹರ್​ ಬರ್ತ್​ಡೇ ಪಾರ್ಟಿಗೆ ಬಂದ 55 ಮಂದಿಗೆ ಕೊರೊನಾ ಪಾಸಿಟಿವ್​? ಶಾಕಿಂಗ್​ ಸುದ್ದಿ ವೈರಲ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಒಂದು ವೇಳೆ ಬಾಲಿವುಡ್​ನವರು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ದರೆ ವಿಮರ್ಶಕರ ಕಟುವಾದ ಟೀಕೆಯಿಂದ ಸಿನಿಮಾ ಸೋಲುತ್ತಿತ್ತು. ಹಿಂದಿ ಚಿತ್ರರಂಗದವರಿಗೆ ವಿಮರ್ಶಕರು ಹೆಚ್ಚು ಸ್ವಾತಂತ್ರ್ಯ ನೀಡಿಲ್ಲ ಎಂಬುದು ಕರಣ್​ ಜೋಹರ್​ ಅವರ ಅಭಿಪ್ರಾಯ. ಅದನ್ನು ಅವರು ಈ ರೀತಿಯಾಗಿ ಹೇಳಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

‘ಕೆಜಿಎಫ್​: ಚಾಪ್ಟರ್​ 2’ ತಂಡದ ಜೊತೆ ಕರಣ್​ ಜೋಹರ್​ ಅವರು ತುಂಬ ಆತ್ಮೀಯತೆ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಈ ಸಿನಿಮಾದ ಟ್ರೇಲರ್​ ಲಾಂಚ್​ ಆದಾಗ ಕರಣ್​ ಜೋಹರ್​ ಅವರೇ ಬಂದು ನಿರೂಪಣೆ ಮಾಡಿದ್ದರು. ಸದ್ಯ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ 6 ವರ್ಷಗಳ ಬಳಿಕ ಕರಣ್​ ಜೋಹರ್​ ಅವರು ನಿರ್ದೇಶಕನ ಕ್ಯಾಪ್​ ಧರಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:35 am, Sun, 19 June 22

ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್