AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ

ಬಾಲಿವುಡ್ ನಟ ಇಮ್ರಾನ್ ಖಾನ್, 'KGF 2', 'ಅನಿಮಲ್' ಹಾಗೂ 'ಧುರಂಧರ್ 2' ನಂತಹ ಚಿತ್ರಗಳಲ್ಲಿನ 'ಮ್ಯಾಚೋ' ಪಾತ್ರಗಳನ್ನು ಟೀಕಿಸಿದ್ದಾರೆ. ಉದ್ದ ಕೂದಲು, ರಕ್ತಸಿಕ್ತ ಮುಖದ ಪಾತ್ರಗಳು ನನಗೆ ಇಷ್ಟವಿಲ್ಲ ಎಂದ ಇಮ್ರಾನ್, ವಿಷಕಾರಿ ಪುರುಷತ್ವ ಮತ್ತು ಸ್ತ್ರೀದ್ವೇಷದ ಪ್ರಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ
ಯಶ್​, ರಣಬೀರ್, ರಣವೀರ್
ರಾಜೇಶ್ ದುಗ್ಗುಮನೆ
|

Updated on: Mar 26, 2026 | 9:00 AM

Share

ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ ಬಗ್ಗೆ ಆತಂಕ ಹೊರಹಾಕಿದ್ದಾರೆ.

ಇಮ್ರಾನ್ ಖಾನ್ ಅವರು ‘ಆಸ್ಕ್​ ಮಿ ಎನಿಥಿಂಗ್’ ಸೆಷನ್ ನಡೆಸಿದ್ದಾರೆ. ಈ ವೇಳೆ ಅವರಿಗೆ ‘ಮ್ಯಾಚೋ   ಪಾತ್ರಗಳನ್ನು ಮಾಡಬೇಡಿ’ ಎಂದು ಕೋರಿದರು. ಇದಕ್ಕೆ ಉತ್ತರಿಸಿದ ಇಮ್ರಾನ್ ಖಾನ್, ‘ಉದ್ದ ಕೂದಲು ಬಿಟ್ಟುಕೊಂಡು, ಸಿಟ್ಟಾಗಿ ಕಾಣಿಸಿಕೊಳ್ಳುವುದು, ದೇಹವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರದ ಬಗ್ಗೆ ಆಸಕ್ತಿ ಇಲ್ಲ’ ಎಂದು ಅವರು ಹೇಳಿದ್ದಾರೆ.

ಆಲ್ಫಾ ಮೇಲ್ ಅಂದರೆ ಪುರುಷರೇ ಗ್ರೇಟ್ ಎಂಬ ರೀತಿಯ ಸಿನಿಮಾಗಳು ಕೆಲವು ಬರುತ್ತಿವೆ. ಈ ಸಂದರ್ಭದಲ್ಲಿ ಪುರುಷತ್ವವನ್ನು ಹೇಗೆ ವ್ಯಾಖ್ಯಾನಿಸುತ್ತೀರಿ ಎಂದು ಅವರಿಗೆ ಕೇಳಲಾಯಿತು. ‘ನಮ್ಮ ಚಲನಚಿತ್ರಗಳಲ್ಲಿ ಮತ್ತು ಒಟ್ಟಾರೆಯಾಗಿ ಪ್ರಪಂಚದಲ್ಲಿ ಸ್ತ್ರೀದ್ವೇಷ ಮತ್ತು ವಿಷಕಾರಿ ಪುರುಷತ್ವವನ್ನು ಹೇಗೆ ಪ್ರಚಾರ ಮಾಡಲಾಗುತ್ತದೆ ಎಂಬುದನ್ನು ನೋಡಿ ನಾನು ವಿಚಲಿತನಾಗಿದ್ದೇನೆ’ ಎಂದು ಅವರು ಹೇಳಿದರು.

ಅನೇಕರು ಇಮ್ರಾನ್ ಹೇಳಿಕೆಯನ್ನು ನಾನಾ ಸಿನಿಮಾಗಳಿಗೆ ಕನೆಕ್ಟ್ ಮಾಡುತ್ತಿದ್ದಾರೆ. ಕೆಲವರು ‘ಕೆಜಿಎಫ್ 2’ ಎಂದು ಹೇಳಿದ್ದಾರೆ. ಇದರಲ್ಲಿ ಯಶ್ ಉದ್ದ ಕೂದಲು ಬಿಟ್ಟಿದ್ದಾರೆ. ಅವರ ಮುಖ ರಕ್ತಸಿಕ್ತವಾಗಿದೆ. ‘ಅನಿಮಲ್’, ‘ಧುರಂಧರ್, ‘ಧುರಂಧರ್ 2’ ಸಿನಿಮಾಗಳು ಕೂಡ ಇದೇ ರೀತಿಯಲ್ಲಿ ಇವೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಷಯ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ