AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ

ಸಂದರ್ಶನದಲ್ಲಿ ನಿರ್ದೇಶಕ ಇಮ್ತಿಯಾಜ್ ಅಲಿ ಅವರು ದೀಪಿಕಾ ಪಡುಕೋಣೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದರು. ಆ ಹೇಳಿಕೆಯಿಂದ ವಿವಾದ ಶುರುವಾಗಿತ್ತು. ಅದರಿಂದ ಎಚ್ಚೆತ್ತುಕೊಂಡ ಇಮ್ತಿಯಾಜ್ ಅಲಿ ಅವರು, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದ್ದಿಯೊಂದರ ಸ್ಕ್ರೀನ್‌ಶಾಟ್ ಹಂಚಿಕೊಂಡು ದೀಪಿಕಾ ಪಡುಕೋಣೆ ಅವರಲ್ಲಿ ಕ್ಷಮೆ ಕೇಳಿದ್ದಾರೆ.

‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ
Deepika Padukone, Imtiaz Ali
ಮದನ್​ ಕುಮಾರ್​
|

Updated on: May 26, 2026 | 5:17 PM

Share

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ‘ಒಳ್ಳೆಯ ಹುಡುಗಿ ಇಮೇಜ್ ಕೇವಲ ಒಂದು ಮುಖವಾಡ ಆಗಿತ್ತು’ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ, ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ಹಾಗೂ ಕ್ಷಮೆಯಾಚನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ಅವರಿಗಾಗಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಇಮ್ತಿಯಾಜ್, ತಮ್ಮ ಹೇಳಿಕೆ ಕೇವಲ ತಮಾಷೆಗಾಗಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಇಮ್ತಿಯಾಜ್ ಅಲಿ (Imtiaz Ali) ಅವರು ದೀಪಿಕಾ ಪಡುಕೋಣೆ ಅವರ ಆಫ್-ಸ್ಕ್ರೀನ್ ಇಮೇಜ್ ಮತ್ತು 2012ರ ಸೂಪರ್ ಹಿಟ್ ಸಿನಿಮಾ ‘ಕಾಕ್‌ಟೇಲ್’ ಬಗ್ಗೆ ಮಾತನಾಡಿದ್ದರು.

‘ಆ ಸಮಯದಲ್ಲಿ ದೀಪಿಕಾ ಹೊಂದಿದ್ದ ಇಮೇಜ್‌ಗೂ ಕಾಕ್‌ಟೇಲ್ ಚಿತ್ರದ ವೆರೋನಿಕಾ ಪಾತ್ರಕ್ಕೂ ತೀರಾ ವ್ಯತ್ಯಾಸವಿತ್ತು. ನಾನು ಅವರೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರಿಂದ, ಅವರು ಎಷ್ಟರಮಟ್ಟಿಗೆ ಕ್ರೇಜಿ ಮತ್ತು ವೈಲ್ಡ್ ಆಗಿರಬಲ್ಲರು ಎಂಬುದು ನನಗೆ ಗೊತ್ತಿತ್ತು. ಹೊರಗಡೆ ಅವರು ತುಂಬಾ ಒಳ್ಳೆಯ ಹುಡುಗಿ ರೀತಿ ಇಮೇಜ್ ಪ್ರೊಜೆಕ್ಟ್ ಮಾಡುತ್ತಿದ್ದರೂ, ಅವರ ಅಸಲಿ ಮುಖ ಏನೆಂಬುದು ನನಗೆ ತಿಳಿದಿತ್ತು’ ಎಂದಿದ್ದರು ಇಮ್ತಿಯಾಜ್ ಅಲಿ.

‘ಈಗ ಜನರು ದೀಪಿಕಾ ಪಡುಕೋಣೆ ಅವರ ಆ ಮುಖವಾಡವನ್ನು ನೋಡಿದ್ದಾರೆ. ಹಾಗಾಗಿ ದೀಪಿಕಾಗೆ ಆ ಪಾತ್ರ ಹೊಸದಾಗಿರುತ್ತದೆ ಮತ್ತು ಅವರಲ್ಲಿನ ಎಮೋಷನಲ್ ಆಯಾಮವನ್ನು ಹೊರತರಬಹುದು ಎಂದು ನಾನು ಭಾವಿಸಿದ್ದೆ’ ಎಂದು ಇಮ್ತಿಯಾಜ್ ಹೇಳಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ಅತ್ಯಂತ ಪ್ರೀತಿಯ ದೀಪಿಕಾ, ನೀನು ನನ್ನ ಆತ್ಮೀಯ ಗೆಳತಿ. ನನ್ನ ಜೋಕ್‌ಗಳಿಗೆ ನೀನೇ ಸುರಕ್ಷಿತ ಆಯ್ಕೆ. ನಾನು ಕೇವಲ ತಮಾಷೆಗಾಗಿ ಮಾಡಿದ ಈ ಕಮೆಂಟ್‌ ಅನ್ನು ನೀನು ಖಂಡಿತವಾಗಿಯೂ ತಪ್ಪಾಗಿ ಅರ್ಥೈಸಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ. ಯಾಕೆಂದರೆ ನಾನು ನಿನ್ನನ್ನು ಎಷ್ಟು ಪ್ರೀತಿಸುತ್ತೇನೆ, ಗೌರವಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ ಎಂಬುದು ನಿನಗಿಂತ ಚೆನ್ನಾಗಿ ಬೇರೆ ಯಾರಿಗೂ ಗೊತ್ತಿಲ್ಲ. ಆದರೆ ಕೆಲವರು ನೀನು ಈ ಹೇಳಿಕೆಯಿಂದ ಬೇಸರ ಮಾಡಿಕೊಳ್ಳಬಹುದು ಎಂದು ನನಗೆ ಹೇಳಿದರು, ಹಾಗಾಗಿ ದಯವಿಟ್ಟು ಬೇಸರ ಮಾಡಿಕೊಳ್ಳಬೇಡ. ನಿನಗೆ ನೋವು ಉಂಟುಮಾಡುವುದು ಈ ಜನ್ಮದಲ್ಲಂತೂ ನನ್ನಿಂದ ಸಾಧ್ಯವಿಲ್ಲ ’ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, ‘ನಾನು ನಿನಗೆ ಇಂತಹದೊಂದು ಸ್ಪಷ್ಟನೆ ನೀಡಬೇಕಾಗುತ್ತದೆ ಅಂತ ಯಾವತ್ತೂ ಯೋಚಿಸಿರಲಿಲ್ಲ. ಆದರೆ ವಿಷಯಗಳನ್ನು ಹಾಗೇ ಬಿಟ್ಟು ರಿಸ್ಕ್ ತೆಗೆದುಕೊಳ್ಳಲು ನನಗೆ ಇಷ್ಟವಿರಲಿಲ್ಲ. ನಿನಗೆ ಯಾವಾಗಲೂ ನನ್ನ ಪ್ರೀತಿ ಇರಲಿದೆ’ ಎಂದು ಇಮ್ತಿಯಾಜ್ ತಿಳಿಸಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಇಮ್ತಿಯಾಜ್ ಅಲಿ ಕಾಂಬಿನೇಷನ್‌ನಲ್ಲಿ ಈ ಹಿಂದೆ 2009ರ ರೊಮ್ಯಾಂಟಿಕ್ ಸಿನಿಮಾ ‘ಲವ್ ಆಜ್ ಕಲ್’ ಮೂಡಿಬಂದಿತ್ತು. ಇದಾದ ಬಳಿಕ 2015ರಲ್ಲಿ ರಣಬೀರ್ ಕಪೂರ್ ನಟನೆಯ ‘ತಮಾಷಾ’ ಚಿತ್ರದಲ್ಲೂ ಇವರಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರಿಗೆ ಕೆಲಸಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ; ವಿಡಿಯೋ ಲೀಕ್

ಈಗ ದಿಲ್ಜಿತ್ ದೋಸಾಂಜ್, ಶರ್ವರಿ, ವೇದಾಂತ್ ರೈನಾ ಮತ್ತು ನಸೀರುದ್ದೀನ್ ಶಾ ನಟನೆಯ ‘ಮೈ ವಾಪಸ್ ಆವುಂಗಾ’ ಸಿನಿಮಾಗೆ ಇಮ್ತಿಯಾಜ್ ಅಲಿ ಅವರು ನಿರ್ದೇಶನ ಮಾಡಿದ್ದಾರೆ. ಜೂನ್ 12ರಂದು ಈ ಸಿನಿಮಾ ತೆರೆಕಾಣಲಿದೆ. ಇತ್ತ, ದೀಪಿಕಾ ಪಡುಕೋಣೆ ಅವರು ಶಾರುಖ್ ಖಾನ್ ಜೊತೆ ‘ಕಿಂಗ್’ ಹಾಗೂ ಅಲ್ಲು ಅರ್ಜುನ್ ಜೊತೆ ‘ರಾಕಾ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್