AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ತೆರಳಿದ್ದ ಸಂಜಯ್ ದತ್​ಗೆ ಗಾಯ? ಅಭಿಮಾನಿಗಳಲ್ಲಿ ಮೂಡಿದೆ ಆತಂಕ

ಸಂಜಯ್ ದತ್ ಅವರು ತೆಲುಗಿನ ‘ಡಬಲ್ ಇಸ್ಮಾರ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಿಗ್ ಬುಲ್ ಹೆಸರಿನ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಥೈಲ್ಯಾಂಡ್​ನಲ್ಲಿ ನಡೆಯುತ್ತಿದೆ. ಈ ವೇಳೆ ಅವರಿಗೆ ಗಾಯ ಆಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿದೆ.

ವಿದೇಶಕ್ಕೆ ತೆರಳಿದ್ದ ಸಂಜಯ್ ದತ್​ಗೆ ಗಾಯ? ಅಭಿಮಾನಿಗಳಲ್ಲಿ ಮೂಡಿದೆ ಆತಂಕ
ಸಂಜಯ್ ದತ್
ರಾಜೇಶ್ ದುಗ್ಗುಮನೆ
|

Updated on:Aug 15, 2023 | 7:15 AM

Share

ನಟ ಸಂಜಯ್ ದತ್ (Sanjay Dutt) ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ವಿಲನ್ ಆಗಿ, ಹೀರೋ ಆಗಿ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ‘ಕೆಜಿಎಫ್ 2’ (KGF Chapter 2) ಚಿತ್ರದಲ್ಲಿ ಅಧೀರನ ಪಾತ್ರ ಮಾಡುವ ಮೂಲಕ ಅವರು ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾದರು. ಹೀಗಾಗಿ, ಅವರ ಬಗ್ಗೆ ಅಪ್​​ಡೇಟ್ ತಿಳಿದುಕೊಳ್ಳೋಕೆ ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ವಿದೇಶದಲ್ಲಿ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳಿ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅವರ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಸಂಜಯ್ ದತ್ ಅವರು ತೆಲುಗಿನ ‘ಡಬಲ್ ಇಸ್ಮಾರ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಿಗ್ ಬುಲ್ ಹೆಸರಿನ ವಿಲನ್ ಪಾತ್ರ ಮಾಡುತ್ತಿದ್ದಾರೆ. ಇತ್ತೀಚೆಗೆ ಸಂಜಯ್ ದತ್ ಬರ್ತ್​ಡೇ ಪ್ರಯುಕ್ತ ಸಿನಿಮಾದ ಪೋಸ್ಟರ್ ರಿಲೀಸ್ ಆಗಿತ್ತು. ಈ ಚಿತ್ರದ ಶೂಟಿಂಗ್ ಥೈಲ್ಯಾಂಡ್​ನಲ್ಲಿ ನಡೆಯುತ್ತಿದೆ. ಈ ವೇಳೆ ಅವರಿಗೆ ಗಾಯ ಆಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿದೆ.

ಖಡ್ಗದಲ್ಲಿ ಫೈಟ್ ಮಾಡುವ ದೃಶ್ಯವನ್ನು ಶೂಟ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಖಡ್ಗ ಅವರಿಗೆ ತಾಗಿ ಗಾಯ ಆಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಕ್ಕೆ ಹೊಲಿಗೆ ಹಾಕಿಸಿಕೊಂಡು ಅವರು ಮರಳಿ ಸೆಟ್​ಗೆ ಆಗಮಿಸಿದ್ದಾರೆ. ಬಳಿಕ ತಮ್ಮ ಭಾಗದ ಶೂಟಿಂಗ್​ನ ಅವರು ಪೂರ್ಣಗೊಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Sanjay Dutt: ಸಂಜಯ್ ದತ್ ಈಗ ಬಿಗ್ ಬುಲ್; ‘ಡಬಲ್ ಇಸ್ಮಾರ್ಟ್’ಗೆ ಖಡಕ್ ವಿಲನ್

ಸಂಜಯ್ ದತ್ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದ್ದು ಇದೇ ಮೊದಲೇನು ಅಲ್ಲ. ಇತ್ತೀಚೆಗೆ ಅವರು ‘ಕೆಡಿ’ ಸಿನಿಮಾದ ಶೂಟ್​ನಲ್ಲಿ ಪೆಟ್ಟು ಮಾಡಿಕೊಂಡರು ಎಂದು ಹೇಳಲಾಗಿತ್ತು. ಆಗಲೂ ಅಭಿಮಾನಿಗಳಿಗೆ ಆತಂಕ ಆಗಿತ್ತು. ಈ ಕಾರಣದಿಂದಲೇ ಸಂಜಯ್ ದತ್ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದರು. ‘ನನಗೆ ಗಾಯ ಆಗಿದೆ ಎಂಬ ಸುದ್ದಿ ಆಧಾರ ರಹಿತ’ ಎಂದು ಹೇಳಿದ್ದರು. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ಅವರಿ ತೆರೆ ಎಳೆದಿದ್ದರು. ಸದ್ಯ ಈಗ ಹಬ್ಬಿರುವ ವದಂತಿಗೆ ಅವರ ಕಡೆಯಿಂದಲೇ ಸ್ಪಷ್ಟನೆ ಬರಬೇಕಿದೆ.

‘ಸಂಜಯ್ ದತ್ ಬರ್ತ್​ಡೇ ದಿನ ಮಾಡಲಾದ ಪೋಸ್ಟ್’

‘ಡಬಲ್ ಇಸ್ಮಾರ್ಟ್​’ ಚಿತ್ರಕ್ಕೆ ರಾಮ್ ಪೋತಿನೇನಿ ಹೀರೋ. ಪೂರಿ ಜಗನ್ನಾಥ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Tue, 15 August 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ