ವಿದೇಶಕ್ಕೆ ತೆರಳಿದ್ದ ಸಂಜಯ್ ದತ್​ಗೆ ಗಾಯ? ಅಭಿಮಾನಿಗಳಲ್ಲಿ ಮೂಡಿದೆ ಆತಂಕ

ಸಂಜಯ್ ದತ್ ಅವರು ತೆಲುಗಿನ ‘ಡಬಲ್ ಇಸ್ಮಾರ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಿಗ್ ಬುಲ್ ಹೆಸರಿನ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಥೈಲ್ಯಾಂಡ್​ನಲ್ಲಿ ನಡೆಯುತ್ತಿದೆ. ಈ ವೇಳೆ ಅವರಿಗೆ ಗಾಯ ಆಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿದೆ.

ವಿದೇಶಕ್ಕೆ ತೆರಳಿದ್ದ ಸಂಜಯ್ ದತ್​ಗೆ ಗಾಯ? ಅಭಿಮಾನಿಗಳಲ್ಲಿ ಮೂಡಿದೆ ಆತಂಕ
ಸಂಜಯ್ ದತ್

Updated on: Aug 15, 2023 | 7:15 AM

ನಟ ಸಂಜಯ್ ದತ್ (Sanjay Dutt) ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ವಿಲನ್ ಆಗಿ, ಹೀರೋ ಆಗಿ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ‘ಕೆಜಿಎಫ್ 2’ (KGF Chapter 2) ಚಿತ್ರದಲ್ಲಿ ಅಧೀರನ ಪಾತ್ರ ಮಾಡುವ ಮೂಲಕ ಅವರು ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾದರು. ಹೀಗಾಗಿ, ಅವರ ಬಗ್ಗೆ ಅಪ್​​ಡೇಟ್ ತಿಳಿದುಕೊಳ್ಳೋಕೆ ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ವಿದೇಶದಲ್ಲಿ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳಿ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅವರ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಸಂಜಯ್ ದತ್ ಅವರು ತೆಲುಗಿನ ‘ಡಬಲ್ ಇಸ್ಮಾರ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಿಗ್ ಬುಲ್ ಹೆಸರಿನ ವಿಲನ್ ಪಾತ್ರ ಮಾಡುತ್ತಿದ್ದಾರೆ. ಇತ್ತೀಚೆಗೆ ಸಂಜಯ್ ದತ್ ಬರ್ತ್​ಡೇ ಪ್ರಯುಕ್ತ ಸಿನಿಮಾದ ಪೋಸ್ಟರ್ ರಿಲೀಸ್ ಆಗಿತ್ತು. ಈ ಚಿತ್ರದ ಶೂಟಿಂಗ್ ಥೈಲ್ಯಾಂಡ್​ನಲ್ಲಿ ನಡೆಯುತ್ತಿದೆ. ಈ ವೇಳೆ ಅವರಿಗೆ ಗಾಯ ಆಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿದೆ.

ಖಡ್ಗದಲ್ಲಿ ಫೈಟ್ ಮಾಡುವ ದೃಶ್ಯವನ್ನು ಶೂಟ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಖಡ್ಗ ಅವರಿಗೆ ತಾಗಿ ಗಾಯ ಆಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಕ್ಕೆ ಹೊಲಿಗೆ ಹಾಕಿಸಿಕೊಂಡು ಅವರು ಮರಳಿ ಸೆಟ್​ಗೆ ಆಗಮಿಸಿದ್ದಾರೆ. ಬಳಿಕ ತಮ್ಮ ಭಾಗದ ಶೂಟಿಂಗ್​ನ ಅವರು ಪೂರ್ಣಗೊಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Sanjay Dutt: ಸಂಜಯ್ ದತ್ ಈಗ ಬಿಗ್ ಬುಲ್; ‘ಡಬಲ್ ಇಸ್ಮಾರ್ಟ್’ಗೆ ಖಡಕ್ ವಿಲನ್

ಸಂಜಯ್ ದತ್ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದ್ದು ಇದೇ ಮೊದಲೇನು ಅಲ್ಲ. ಇತ್ತೀಚೆಗೆ ಅವರು ‘ಕೆಡಿ’ ಸಿನಿಮಾದ ಶೂಟ್​ನಲ್ಲಿ ಪೆಟ್ಟು ಮಾಡಿಕೊಂಡರು ಎಂದು ಹೇಳಲಾಗಿತ್ತು. ಆಗಲೂ ಅಭಿಮಾನಿಗಳಿಗೆ ಆತಂಕ ಆಗಿತ್ತು. ಈ ಕಾರಣದಿಂದಲೇ ಸಂಜಯ್ ದತ್ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದರು. ‘ನನಗೆ ಗಾಯ ಆಗಿದೆ ಎಂಬ ಸುದ್ದಿ ಆಧಾರ ರಹಿತ’ ಎಂದು ಹೇಳಿದ್ದರು. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ಅವರಿ ತೆರೆ ಎಳೆದಿದ್ದರು. ಸದ್ಯ ಈಗ ಹಬ್ಬಿರುವ ವದಂತಿಗೆ ಅವರ ಕಡೆಯಿಂದಲೇ ಸ್ಪಷ್ಟನೆ ಬರಬೇಕಿದೆ.

‘ಸಂಜಯ್ ದತ್ ಬರ್ತ್​ಡೇ ದಿನ ಮಾಡಲಾದ ಪೋಸ್ಟ್’


‘ಡಬಲ್ ಇಸ್ಮಾರ್ಟ್​’ ಚಿತ್ರಕ್ಕೆ ರಾಮ್ ಪೋತಿನೇನಿ ಹೀರೋ. ಪೂರಿ ಜಗನ್ನಾಥ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Tue, 15 August 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us