‘ಹಿಂದಿ ಚಿತ್ರರಂಗದವರಿಗೆ ಎಥಿಕ್ಸ್​ನ ಕೊರತೆ ಇದೆ’; ಚರ್ಚೆ ಹುಟ್ಟುಹಾಕಿದ ಕಾಜಲ್ ಅಗರ್​ವಾಲ್ ಹೇಳಿಕೆ

ಸಿಂಗಮ್​’ ಮೊದಲಾದ ಹಿಂದಿ ಚಿತ್ರಗಳಲ್ಲಿ ಕಾಜಲ್ ನಟಿಸಿದ್ದಾರೆ. ಸದ್ಯ ‘ಉಮಾ’ ಹೆಸರಿನ ಹಿಂದಿ ಚಿತ್ರ ಅವರ ಕೈಯಲ್ಲಿದೆ. ಆದಾಗ್ಯೂ ಅವರು ಬೋಲ್ಡ್ ಹೇಳಿಕೆ ನೀಡಿದ್ದಾರೆ.

‘ಹಿಂದಿ ಚಿತ್ರರಂಗದವರಿಗೆ ಎಥಿಕ್ಸ್​ನ ಕೊರತೆ ಇದೆ’; ಚರ್ಚೆ ಹುಟ್ಟುಹಾಕಿದ ಕಾಜಲ್ ಅಗರ್​ವಾಲ್ ಹೇಳಿಕೆ
ಕಾಜಲ್
Follow us
|

Updated on: Apr 01, 2023 | 8:02 AM

ನಟಿ ಕಾಜಲ್ ಅಗರ್​ವಾಲ್ (Kajal Aggarwal) ಅವರು ಸದಾ ವಿವಾದದಿಂದ ದೂರ ಉಳಿಯೋಕೆ ಪ್ರಯತ್ನಿಸುತ್ತಾರೆ. ಟ್ರೋಲ್​ಗಳ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಕಾಜಲ್ ಅಗರ್​ವಾಲ್ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆಹುಟ್ಟು ಹಾಕಿದೆ. ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಾಜಲ್ ಗುರುತಿಸಿಕೊಂಡಿದ್ದಾರೆ. ಹೀಗಿದ್ದರೂ ಅಲ್ಲಿನವರಿಗೆ ಎಥಿಕ್ಸ್​ನ ಕೊರತೆ ಇದೆ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಇದಕ್ಕೆ ಬಾಲಿವುಡ್​ನ ಕೆಲವರು ಅಪಸ್ವರ ತೆಗೆದಿದ್ದಾರೆ. ಈ ಹೇಳಿಕೆಯಿಂದ ಕಾಜಲ್ ಅಗರ್​ವಾಲ್​ಗೆ ಹಿಂದಿಯಿಂದ ಬರುವ ಆಫರ್​ಗಳು ಕೈತಪ್ಪಿದರೂ ಅಚ್ಚರಿ ಏನಿಲ್ಲ.

ಕಾಜಲ್ ಅಗರ್​ವಾಲ್ ಅವರು ಮೊದಲ ಬಾರಿಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಹಿಂದಿ ಚಿತ್ರರಂಗದ ಮೂಲಕ. ‘ಕ್ಯೂ ಹೋ ಗಯಾ ನಾ’ ಅವರ ಮೊದಲ ಚಿತ್ರ. ಈ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರ ಸಹೋದರಿಯ ಪಾತ್ರವನ್ನು ಮಾಡಿದ್ದರು ಕಾಜಲ್. ಈ ಚಿತ್ರದಲ್ಲಿ ಅವರದ್ದು ಅತಿಥಿ ಪಾತ್ರ ಆಗಿತ್ತು. ಬಳಿಕ ‘ಸಿಂಗಮ್​’ ಮೊದಲಾದ ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಸದ್ಯ ‘ಉಮಾ’ ಹೆಸರಿನ ಹಿಂದಿ ಚಿತ್ರ ಅವರ ಕೈಯಲ್ಲಿದೆ. ಆದಾಗ್ಯೂ ಅವರು ಬೋಲ್ಡ್ ಹೇಳಿಕೆ ನೀಡಿದ್ದಾರೆ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ನ್ಯೂಸ್​18 ಇಂಗ್ಲಿಷ್ ನಡೆಸಿದ ‘ರೈಸಿಂಗ್ ಇಂಡಿಯಾ ರಿಯಲ್ ಹೀರೋಸ್’ ವೇದಿಕೆ ಮೇಲೆ ಕಾಜಲ್ ಮಾತನಾಡಿದ್ದಾರೆ. ‘ದಕ್ಷಿಣ ಸಿನಿಮಾ ಇಂಡಸ್ಟ್ರಿಯ ನೈತಿಕತೆ, ಶಿಸ್ತು ನನಗೆ ಇಷ್ಟವಾಗುತ್ತದೆ. ಹಿಂದಿ ಚಿತ್ರರಂಗದಲ್ಲಿ ಅದರ ಕೊರತೆಯಿದೆ ಎಂದು ನನಗೆ ಅನಿಸುತ್ತದೆ’ ಎಂದಿದ್ದಾರೆ ಕಾಜಲ್ ಅಗರ್​ವಾಲ್. ಬಾಲಿವುಡ್​-ದಕ್ಷಿಣ ಭಾರತ ಎಂಬ ಚರ್ಚೆ ಜೋರಾಗಿರುವಾಗಲೇ ಕಾಜಲ್ ನೀಡಿದ ಈ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

‘ಕಾಜಲ್ ಅಗರ್​ವಾಲ್​ ನಿಜವಾದ ಕ್ವೀನ್. ಇದನ್ನು ವೇದಿಕೆ ಮೇಲೆ ಹೇಳೋಕೆ ಧೈರ್ಯ ಬೇಕು’ ಎಂದು ಅನೇಕರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಕಾಜಲ್ ಅಗರ್​ವಾಲ್ ಅವರ ವಿರುದ್ಧ ಕ್ಯಾತೆ ತೆಗೆದಿದ್ದಾರೆ. ‘ಬಾಲಿವುಡ್​ನಲ್ಲಿ ನಟಿಸಿ ಈ ರೀತಿ ಹೇಳೋದು ಸರಿ ಅಲ್ಲ’ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಜಲ್ ಅಗರ್​ವಾಲ್​ ಅವರು ಸದ್ಯ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ಹೀರೋ. ಈ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?