AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ

Kangana Ranaut | Emergency: ರಾಮ್​ ಗೋಪಾಲ್​ ವರ್ಮಾ ಮಾಡಿದ ಈ ಪೋಸ್ಟ್​​ ನೋಡಿ ಕಂಗನಾ ರಣಾವತ್​ ಸಖತ್​ ಖುಷಿ ಆಗಿದ್ದಾರೆ. ಈ ಮಾತನ್ನು ಮೆಚ್ಚುಗೆಯ ರೀತಿ ಅವರು ಸ್ವೀಕರಿಸಿದ್ದಾರೆ.

Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
ಇಂದಿರಾ ಗಾಂಧಿ, ಕಂಗನಾ ರಣಾವತ್
TV9 Web
| Edited By: |

Updated on:Jul 24, 2022 | 11:05 AM

Share

ನಟಿ ಕಂಗನಾ ರಣಾವತ್ (Kangana Ranaut)​ ಅವರು ಇತ್ತೀಚಿನ ವರ್ಷಗಳಲ್ಲಿ ಗೆಲವು ಕಂಡಿಲ್ಲ. ಅವರು ನಟಿಸಿದ ಎಲ್ಲ ಸಿನಿಮಾಗಳು ಸೋತಿವೆ. ಹಾಗಂತ ಅವರಿಗೆ ಬರುವ ಆಫರ್​ ಕಡಿಮೆ ಆಗಿಲ್ಲ. ಒಂದಕ್ಕಿಂತ ಒಂದು ಡಿಫರೆಂಟ್​ ಪಾತ್ರ ಅವರಿಗೆ ಸಿಗುತ್ತಲೇ ಇದೆ. ವಿವಾದದ ಮೂಲಕವೂ ಅವರು ಸದ್ದು ಮಾಡುತ್ತಿರುತ್ತಾರೆ. ಈಗ ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಫಸ್ಟ್​ ಲುಕ್​ ಟೀಸರ್​ ಈಗಾಗಲೇ ಧೂಳೆಬ್ಬಿಸಿದೆ. ನೈಜ ಘಟನೆ ಆಧರಿತ ಈ ಚಿತ್ರದಲ್ಲಿ ಇಂದಿರಾ ಗಾಂಧಿ (Indira Gandhi) ಪಾತ್ರವನ್ನು ಕಂಗನಾ ಮಾಡುತ್ತಿದ್ದಾರೆ. ಆ ಕಾರಣದಿಂದ ‘ಎಮರ್ಜೆನ್ಸಿ’ ಮೇಲೆ ಸಿನಿಪ್ರಿಯರು ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಈಗ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಇಂದಿರಾ ಗಾಂಧಿ ಮತ್ತು ಕಂಗನಾ ರಣಾವತ್​ ನಡುವೆ ಸಾಮ್ಯತೆ ಇದೆ ಎಂಬುದಕ್ಕೆ ಸಾಕ್ಷಿಯಾಗಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

1984ರಲ್ಲಿ ಇಂದಿರಾ ಗಾಂಧಿ ನೀಡಿದ ವಿಶೇಷ ವಿಡಿಯೋ ಸಂದರ್ಶನದ ತುಣುಕನ್ನು ರಾಮ್​ ಗೋಪಾಲ್​ ವರ್ಮಾ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಆ ಕಾಲದಲ್ಲಿ ಪಂಜಾಬ್​ನಲ್ಲಿ ಇದ್ದ ಪರಿಸ್ಥಿತಿಯ ಬಗ್ಗೆ ಇಂದಿರಾ ಗಾಂಧಿ ಮಾತನಾಡಿದ್ದರು. ಈ ಸಂದರ್ಶನವನ್ನು ಕಂಡು ಆರ್​ಜಿವಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ನಂಬಿದ್ರೆ ನಂಬಿ, ಬಿಟ್ಟರೆ ಬಿಡಿ. ಈ ವಿಡಿಯೋದಲ್ಲಿ ಇಂದಿರಾ ಗಾಂಧಿ ಅವರು ಕಂಗನಾ ರೀತಿ ಮಾಡ್ತಿದ್ದಾರೆ’ ಎಂದು ರಾಮ್​ ಗೋಪಾಲ್​ ವರ್ಮಾ ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ
Image
‘ಹುಡುಗಿ’ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದ ರಾಮ್​ ಗೋಪಾಲ್​ ವರ್ಮಾ; ಜುಲೈ 15ಕ್ಕೆ ಸಿನಿಮಾ ರಿಲೀಸ್​
Image
‘ಡೇಂಜರಸ್​’ ಹುಡುಗಿಯರನ್ನು ಬೆಂಗಳೂರಿಗೆ ಕರೆತಂದು ಪರಿಚಯ ಮಾಡಿಸಿದ ರಾಮ್​ ಗೋಪಾಲ್ ವರ್ಮಾ
Image
‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?
Image
‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

ಈ ಟ್ವೀಟ್​ ನೋಡಿ ಕಂಗನಾ ರಣಾವತ್​ ಸಖತ್​ ಖುಷಿ ಆಗಿದ್ದಾರೆ. ರಾಮ್​ ಗೋಪಾಲ್​ ವರ್ಮಾ ಅವರ ಈ ಮಾತನ್ನು ಮೆಚ್ಚುಗೆಯ ರೀತಿ ಅವರು ಸ್ವೀಕರಿಸಿದ್ದಾರೆ. ಇಂದಿರಾ ಗಾಂಧಿ ಪಾತ್ರಕ್ಕೆ ತಮ್ಮ ಆಯ್ಕೆ ಸೂಕ್ತವಾಗಿದೆ ಎಂಬುದನ್ನು ಕಂಗನಾ ಖಚಿತಪಡಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಬಿಡುಗಡೆ ಆದ ಫಸ್ಟ್​ ಲುಕ್​ ನೋಡಿರುವ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದರು.

ಕಂಗನಾ ರಣಾವತ್​ ಅವರ ವೃತ್ತಿಜೀವನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಬಹುಮುಖ್ಯ ಆಗಲಿದೆ. ಅದಕ್ಕಾಗಿ ಅವರು ಸಖತ್​ ತಯಾರಿ ಮಾಡಿಕೊಂಡು ಶೂಟಿಂಗ್​ ಆರಂಭಿಸಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ಇಂದಿರಾ ಗಾಂಧಿ ಅವರ ಪಾತ್ರವನ್ನು ಬೇರೆ ನಟಿಯರು ಮಾಡಿದ್ದಾರೆ. ಆದರೆ ಅವರೆಲ್ಲರಿಗಿಂತಲೂ ಕಂಗನಾ ರಣಾವತ್​ ಅವರ ಲುಕ್​ ಹೆಚ್ಚು ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಕಂಗನಾ ನಟಿಸುವುದು ಮಾತ್ರವಲ್ಲದೇ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಜಯಪ್ರಕಾಶ್​ ನಾರಾಯಣ್​ ಪಾತ್ರವನ್ನು ಅನುಪಮ್ ಖೇರ್​ ಮಾಡುತ್ತಿದ್ದಾರೆ.

Published On - 11:05 am, Sun, 24 July 22

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​