AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

ಯಾವುದೇ ಪಾತ್ರ ಕೊಟ್ಟರೂ ನಟ ರಣವೀರ್ ಸಿಂಗ್ ಅವರು ಯಶಸ್ವಿಯಾಗಿ ನಿಭಾಯಿಸುತ್ತಾರೆ. ಲಲಿತ್ ಮೋದಿ ಬಯೋಪಿಕ್​ನಲ್ಲಿ ನಟಿಸಲು ರಣವೀರ್ ಸಿಂಗ್ ಆಸಕ್ತಿ ತೋರಿಸಿದ್ದರು ಎಂಬ ವಿಷಯ ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಲಲಿತ್ ಮೋದಿ ಅವರೇ ಬಹಿರಂಗಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?
Lalit Modi, Ranveer SinghImage Credit source: PTI
ಮದನ್​ ಕುಮಾರ್​
|

Updated on: Jun 04, 2026 | 9:46 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಿಸಿ ಕ್ರಿಕೆಟ್ ಲೋಕದ ಚಿತ್ರಣವನ್ನೇ ಬದಲಿಸಿದ ಲಲಿತ್ ಮೋದಿ (Lalit Modi) ಅವರ ಜೀವನ ಚರಿತ್ರೆ ಈಗ ಬೆಳ್ಳಿಪರದೆಗೆ ಬರಲು ಸಿದ್ಧವಾಗುತ್ತಿದೆ. ತಮ್ಮ ಜೀವನ ಆಧಾರಿತ ಬಯೋಪಿಕ್ (Lalit Modi Biopic) ಕೆಲಸಗಳು ಈಗ ಸ್ಕ್ರಿಪ್ಟಿಂಗ್ ಹಂತದಲ್ಲಿವೆ ಎಂದು ಲಲಿತ್ ಮೋದಿ ಅವರೇ ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಚಿತ್ರದಲ್ಲಿ ತಮ್ಮ ಪಾತ್ರವನ್ನು ಮಾಡಲು ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ತೀವ್ರ ಆಸಕ್ತಿ ತೋರಿಸಿದ್ದರು ಎಂಬ ಆಸಕ್ತಿದಾಯಕ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ.

ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿದ ಲಲಿತ್ ಮೋದಿ, ‘ನನ್ನ ಬಯೋಪಿಕ್ ಕೆಲಸಗಳು ನಡೆಯುತ್ತಿರುವುದು ನಿಜ. ಸದ್ಯ ಅದಕ್ಕೆ ಕಥೆ ಮತ್ತು ಚಿತ್ರಕಥೆ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ನೂರಾರು ಸಂದರ್ಶನಗಳನ್ನು ಮಾಡಲಾಗಿದೆ. ಸೋನಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದ ಸ್ನೇಹಾ ರಜನಿ ಅವರ ನೇತೃತ್ವದ ಇಡೀ ತಂಡ ಈ ಸ್ಕ್ರಿಪ್ಟಿಂಗ್ ಜವಾಬ್ದಾರಿಯನ್ನು ಹೊತ್ತುಕೊಂಡಿದೆ’ ಎಂದು ತಿಳಿಸಿದ್ದಾರೆ.

ಬಯೋಪಿಕ್‌ನಲ್ಲಿ ನಿಮ್ಮ ಪಾತ್ರವನ್ನು ಯಾರು ನಿರ್ವಹಿಸಬೇಕೆಂದು ಬಯಸುತ್ತೀರಿ ಎಂದು ಕೇಳಿದಾಗ, ಲಲಿತ್ ಮೋದಿ ಅವರು ರಣವೀರ್ ಸಿಂಗ್ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು. ‘ರಣವೀರ್ ಸಿಂಗ್ ನನ್ನ ಪಾತ್ರವನ್ನು ಮಾಡಲು ಬಯಸಿದ್ದಾರೆ. ಎರಡು ವರ್ಷಗಳ ಹಿಂದೆ ಅವರೇ ಸ್ವತಃ ನನಗೆ ಕರೆ ಮಾಡಿ, ನನ್ನನ್ನು ಭೇಟಿಯಾಗಲು ಲಂಡನ್‌ಗೆ ಬಂದಿದ್ದರು. ಅದಕ್ಕೂ ಮುನ್ನ ನನಗೆ ರಣವೀರ್ ಪರಿಚಯ ಇರಲಿಲ್ಲ, ಆದರೆ ದೀಪಿಕಾ ಪಡುಕೋಣೆ ಚೆನ್ನಾಗಿ ಗೊತ್ತಿದ್ದರು. ರಣವೀರ್ ನನ್ನನ್ನು ಭೇಟಿಯಾದ ಆ ದಿನ ನನಗೆ ಇಂದಿಗೂ ನೆನಪಿದೆ’ ಎಂದಿದ್ದಾರೆ.

ಲಲಿತ್ ಮೋದಿ ಅವರ ಪ್ರಕಾರ, ರಣವೀರ್ ಸಿಂಗ್ ಅವರ ಸಿನಿ ಜರ್ನಿಯನ್ನು ಅರ್ಥಮಾಡಿಕೊಳ್ಳಲು ತುಂಬಾ ಆಸಕ್ತಿ ತೋರಿಸಿದ್ದರಂತೆ. ‘ತಮ್ಮ ಸಿನಿಮೀಯ ಜೀವನದಲ್ಲಿ ಯಾವುದಾದರೂ ಒಂದು ಐತಿಹಾಸಿಕ ಪಾತ್ರವನ್ನು ಮಾಡಬೇಕು ಎಂದರೆ, ಅದು ಐಪಿಎಲ್ ಕಮಿಷನರ್ ಆಗಿದ್ದ ಲಲಿತ್ ಮೋದಿ ಅವರ ಪಾತ್ರ ಮಾತ್ರ ಎಂದು ರಣವೀರ್ ನನ್ನ ಬಳಿ ಹೇಳಿದ್ದರು. ನಾನಾಗಿಯೇ ಅವರಿಗೆ ಈ ಆಫರ್ ಕೊಟ್ಟಿರಲಿಲ್ಲ, ಅವರೇ ಆಸಕ್ತಿ ವಹಿಸಿದ್ದರು. ರಣವೀರ್ ಒಬ್ಬ ಅದ್ಭುತ ನಟ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಮೋದಿ ಹೊಗಳಿದ್ದಾರೆ.

ಇದನ್ನೂ ಓದಿ: ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಆದರೆ, ರಣವೀರ್ ಸಿಂಗ್ ಈಗ ತುಂಬಾ ಬಿಜಿಯಾಗಿದ್ದು, ಅವರ ಸಿನಿಮಾ ಗ್ರಾಫ್ ಮತ್ತಷ್ಟು ಎತ್ತರಕ್ಕೆ ಬೆಳೆದಿದೆ. ಹೀಗಾಗಿ ಅವರು ಇಂದಿಗೂ ಈ ಪ್ರಾಜೆಕ್ಟ್‌ನಲ್ಲಿ ನಟಿಸಲು ಆಸಕ್ತಿ ಹೊಂದಿದ್ದಾರಾ ಅಥವಾ ಇಲ್ಲವೇ ಎಂಬುದು ಸದ್ಯಕ್ಕೆ ತಮಗೂ ತಿಳಿದಿಲ್ಲ ಎಂದು ಲಲಿತ್ ಮೋದಿ ಸ್ಪಷ್ಟಪಡಿಸಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಹಬ್ಬವಾದ ಐಪಿಎಲ್ ಅನ್ನು ಕಟ್ಟಿಬೆಳೆಸಿದ ಲಲಿತ್ ಮೋದಿ ಅವರ ಬಯೋಪಿಕ್ ಅನ್ನು ಯಾರು ನಿರ್ದೇಶನ ಮಾಡಲಿದ್ದಾರೆ ಮತ್ತು ಯಾರೆಲ್ಲಾ ನಟಿಸಲಿದ್ದಾರೆ ಎಂಬ ಅಧಿಕೃತ ಪ್ರಕಟಣೆಗಾಗಿ ಸದ್ಯ ಸಿನಿಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್