AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ಇರಾ ಖಾನ್ ಮದುವೆ; ಅಂಬಾನಿ ಸೇರಿ ಹಲವು ಸೆಲೆಬ್ರಿಟಿಗಳು ಭಾಗಿ

ಆಮಿರ್ ಖಾನ್ ಹಾಗೂ ರೀನಾ ದತ್ತ ಅವರ ಮಗಳು ಇರಾ. ಆಮಿರ್ ಹಾಗೂ ರೀನಾ ವಿಚ್ಛೇದನ ಪಡೆದಿದ್ದಾರೆ. ಆದರೆ, ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಇಬ್ಬರೂ ಪಡೆದಿದ್ದಾರೆ. ಹೀಗಾಗಿ ಮದುವೆಗೆ ಇಬ್ಬರೂ ಆಗಮಿಸಿದ್ದರು.

ಅದ್ದೂರಿಯಾಗಿ ನಡೆದ ಇರಾ ಖಾನ್ ಮದುವೆ; ಅಂಬಾನಿ ಸೇರಿ ಹಲವು ಸೆಲೆಬ್ರಿಟಿಗಳು ಭಾಗಿ
ನುಪುರ್-ಆಮಿರ್-ಇರಾ
Follow us
ರಾಜೇಶ್ ದುಗ್ಗುಮನೆ
|

Updated on:Jan 04, 2024 | 8:18 AM

ಆಮಿರ್ ಖಾನ್ ಮಗಳು ಇರಾ ಖಾನ್ ಹಾಗೂ ಫಿಟ್ನೆಸ್​ ಟ್ರೇನರ್ ನೂಪುರ್ ಶಿಖಾರೆ ಅವರ ಮದುವೆ ಬುಧವಾರ (ಜನವರಿ 3) ಅದ್ದೂರಿಯಾಗಿ ನೆರವೇರಿದೆ. ಮುಂಬೈನ ಖಾಸಗಿ ಹೋಟೆಲ್​ನಲ್ಲಿ ಮದುವೆ ಆಯೋಜನೆ ಮಾಡಲಾಗಿತ್ತು. ಈ ವಿವಾಹ ಸಮಾರಂಭಕ್ಕೆ ಉದ್ಯಮಿಗಳಾದ ಮುಕೇಶ್ ಅಂಬಾನಿ (Mukesh Ambani), ನೀತಾ ಅಂಬಾನಿ ಹಾಗೂ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆಮಿರ್ ಖಾನ್ ಹಾಗೂ ರೀನಾ ದತ್ತ ಅವರ ಮಗಳು ಇರಾ. ಆಮಿರ್ ಹಾಗೂ ರೀನಾ ವಿಚ್ಛೇದನ ಪಡೆದಿದ್ದಾರೆ. ಆದರೆ, ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಇಬ್ಬರೂ ಪಡೆದಿದ್ದಾರೆ. ಹೀಗಾಗಿ ಮದುವೆಗೆ ಇಬ್ಬರೂ ಆಗಮಿಸಿದ್ದರು. ನವ ದಂಪತಿ ನೂಪುರ್ ಹಾಗೂ ಇರಾ ಜೊತೆ ಆಮಿರ್ ಖಾನ್ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಕಳೆದ ಒಂದು ವಾರದಿಂದ ವಿವಾಹ ಪೂರ್ವ ಶಾಸ್ತ್ರಗಳು ಆರಂಭ ಆಗಿದ್ದವು. ಮೊದಲು ರಿಜಿಸ್ಟರ್ ಮ್ಯಾರೇಜ್ ಆದ ಈ ಜೋಡಿ, ಆ ಬಳಿಕ ಸಾಂಪ್ರದಾಯಿಕವಾಗಿ ವಿವಾಹ ಆದರು. ಈ ಮೂಲಕ ಪತಿ-ಪತ್ನಿಯರಾದರು. ಹಲವು ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಿದ್ದಾರೆ. ಮದುವೆ ವೇಳೆ ಎಲ್ಲರೂ ಕುಣಿದು ಕುಪ್ಪಳಿಸಿದ್ದಾರೆ. ಮಗಳ ವಿವಾಹದಲ್ಲಿ ಮಾಜಿ ಪತ್ನಿ ಕಿರಣ್ ರಾವ್ ಅವರಿಗೆ ಆಮಿರ್ ಖಾನ್ ಕಿಸ್ ಮಾಡಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಪುತ್ರಿ ಇರಾ ಖಾನ್ ಮದುವೆಯಾಗುತ್ತಿರುವ ನೂಪುರ್ ಶಿಖರೆ ಯಾರು?

ಹೋಟೆಲ್​ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ವಿಶೇಷ ಎಂದರೆ ಮುಂದಿನ ದಿನಗಳಲ್ಲಿ ಆಪ್ತರು ಹಾಗೂ ಸೆಲೆಬ್ರಿಟಿಗಳಿಗಾಗಿ ದೆಹಲಿ, ಜೋದ್​ಪುರ್ ಹಾಗೂ ಮುಂಬೈನಲ್ಲಿ ರಿಸೆಪ್ಷನ್ ಸಮಾರಂಭ ನಡೆಯಲಿದೆ. ಇರಾ ಖಾನ್ ಹಾಗೂ ನೂಪುರ್ ಶಿಖಾರೆ ಅವರು ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇರಾ ಖಿನ್ನತೆಗೆ ಒಳಗಾದಾಗ ನೂಪುರ್ ಅವರ ಬೆಂಬಲಕ್ಕೆ ನಿಂತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:36 am, Thu, 4 January 24

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ