AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ಇರಾ ಖಾನ್ ಮದುವೆ; ಅಂಬಾನಿ ಸೇರಿ ಹಲವು ಸೆಲೆಬ್ರಿಟಿಗಳು ಭಾಗಿ

ಆಮಿರ್ ಖಾನ್ ಹಾಗೂ ರೀನಾ ದತ್ತ ಅವರ ಮಗಳು ಇರಾ. ಆಮಿರ್ ಹಾಗೂ ರೀನಾ ವಿಚ್ಛೇದನ ಪಡೆದಿದ್ದಾರೆ. ಆದರೆ, ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಇಬ್ಬರೂ ಪಡೆದಿದ್ದಾರೆ. ಹೀಗಾಗಿ ಮದುವೆಗೆ ಇಬ್ಬರೂ ಆಗಮಿಸಿದ್ದರು.

ಅದ್ದೂರಿಯಾಗಿ ನಡೆದ ಇರಾ ಖಾನ್ ಮದುವೆ; ಅಂಬಾನಿ ಸೇರಿ ಹಲವು ಸೆಲೆಬ್ರಿಟಿಗಳು ಭಾಗಿ
ನುಪುರ್-ಆಮಿರ್-ಇರಾ
ರಾಜೇಶ್ ದುಗ್ಗುಮನೆ
|

Updated on:Jan 04, 2024 | 8:18 AM

Share

ಆಮಿರ್ ಖಾನ್ ಮಗಳು ಇರಾ ಖಾನ್ ಹಾಗೂ ಫಿಟ್ನೆಸ್​ ಟ್ರೇನರ್ ನೂಪುರ್ ಶಿಖಾರೆ ಅವರ ಮದುವೆ ಬುಧವಾರ (ಜನವರಿ 3) ಅದ್ದೂರಿಯಾಗಿ ನೆರವೇರಿದೆ. ಮುಂಬೈನ ಖಾಸಗಿ ಹೋಟೆಲ್​ನಲ್ಲಿ ಮದುವೆ ಆಯೋಜನೆ ಮಾಡಲಾಗಿತ್ತು. ಈ ವಿವಾಹ ಸಮಾರಂಭಕ್ಕೆ ಉದ್ಯಮಿಗಳಾದ ಮುಕೇಶ್ ಅಂಬಾನಿ (Mukesh Ambani), ನೀತಾ ಅಂಬಾನಿ ಹಾಗೂ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆಮಿರ್ ಖಾನ್ ಹಾಗೂ ರೀನಾ ದತ್ತ ಅವರ ಮಗಳು ಇರಾ. ಆಮಿರ್ ಹಾಗೂ ರೀನಾ ವಿಚ್ಛೇದನ ಪಡೆದಿದ್ದಾರೆ. ಆದರೆ, ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಇಬ್ಬರೂ ಪಡೆದಿದ್ದಾರೆ. ಹೀಗಾಗಿ ಮದುವೆಗೆ ಇಬ್ಬರೂ ಆಗಮಿಸಿದ್ದರು. ನವ ದಂಪತಿ ನೂಪುರ್ ಹಾಗೂ ಇರಾ ಜೊತೆ ಆಮಿರ್ ಖಾನ್ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಕಳೆದ ಒಂದು ವಾರದಿಂದ ವಿವಾಹ ಪೂರ್ವ ಶಾಸ್ತ್ರಗಳು ಆರಂಭ ಆಗಿದ್ದವು. ಮೊದಲು ರಿಜಿಸ್ಟರ್ ಮ್ಯಾರೇಜ್ ಆದ ಈ ಜೋಡಿ, ಆ ಬಳಿಕ ಸಾಂಪ್ರದಾಯಿಕವಾಗಿ ವಿವಾಹ ಆದರು. ಈ ಮೂಲಕ ಪತಿ-ಪತ್ನಿಯರಾದರು. ಹಲವು ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಿದ್ದಾರೆ. ಮದುವೆ ವೇಳೆ ಎಲ್ಲರೂ ಕುಣಿದು ಕುಪ್ಪಳಿಸಿದ್ದಾರೆ. ಮಗಳ ವಿವಾಹದಲ್ಲಿ ಮಾಜಿ ಪತ್ನಿ ಕಿರಣ್ ರಾವ್ ಅವರಿಗೆ ಆಮಿರ್ ಖಾನ್ ಕಿಸ್ ಮಾಡಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಪುತ್ರಿ ಇರಾ ಖಾನ್ ಮದುವೆಯಾಗುತ್ತಿರುವ ನೂಪುರ್ ಶಿಖರೆ ಯಾರು?

ಹೋಟೆಲ್​ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ವಿಶೇಷ ಎಂದರೆ ಮುಂದಿನ ದಿನಗಳಲ್ಲಿ ಆಪ್ತರು ಹಾಗೂ ಸೆಲೆಬ್ರಿಟಿಗಳಿಗಾಗಿ ದೆಹಲಿ, ಜೋದ್​ಪುರ್ ಹಾಗೂ ಮುಂಬೈನಲ್ಲಿ ರಿಸೆಪ್ಷನ್ ಸಮಾರಂಭ ನಡೆಯಲಿದೆ. ಇರಾ ಖಾನ್ ಹಾಗೂ ನೂಪುರ್ ಶಿಖಾರೆ ಅವರು ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇರಾ ಖಿನ್ನತೆಗೆ ಒಳಗಾದಾಗ ನೂಪುರ್ ಅವರ ಬೆಂಬಲಕ್ಕೆ ನಿಂತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:36 am, Thu, 4 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು