AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನೆ, ನಿರ್ದೇಶನ, ನಿರ್ಮಾಣದ ಬಳಿಕ ಸಂಗೀತ ಸಂಯೋಜನೆ ಮಾಡ್ತಾರಾ ಕಂಗನಾ? ನೆಟ್ಟಿಗರಿಗೆ ಮೂಡಿದೆ ಗುಮಾನಿ

‘ಎಮರ್ಜೆನ್ಸಿ’ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸ ನಡೆಯುತ್ತಿದೆ. ಜಿ.ವಿ. ಪ್ರಕಾಶ್​ ಅವರ ಸಂಗೀತ ನಿರ್ದೇಶನದಲ್ಲಿ ಕಂಗನಾ ರಣಾವತ್​ ಹಸ್ತಕ್ಷೇಪ ಮಾಡಬಹುದು ಎಂಬುದು ಕೆಲವರ ಅನಿಸಿಕೆ.

ನಟನೆ, ನಿರ್ದೇಶನ, ನಿರ್ಮಾಣದ ಬಳಿಕ ಸಂಗೀತ ಸಂಯೋಜನೆ ಮಾಡ್ತಾರಾ ಕಂಗನಾ? ನೆಟ್ಟಿಗರಿಗೆ ಮೂಡಿದೆ ಗುಮಾನಿ
ಕಂಗನಾ
ಮದನ್​ ಕುಮಾರ್​
|

Updated on: Apr 26, 2023 | 7:30 AM

Share

ಬೇರೆ ನಟಿಯರಿಗಿಂತ ಕಂಗನಾ ರಣಾವತ್​ (Kangana Ranaut) ಅವರು ಕೊಂಚ ಡಿಫರೆಂಟ್​. ಕ್ಯಾಮೆರಾ ಮುಂದೆ ಕೇವಲ ಗ್ಲಾಮರಸ್​ ಆಗಿ ಕಾಣಿಸಿಕೊಂಡು ಸುಮ್ಮನಾಗುವ ನಟಿ ಅವರಲ್ಲ. ಸಿನಿಮಾದ ಎಲ್ಲ ವಿಭಾಗಗಳಲ್ಲೂ ಅವರು ತೊಡಗಿಕೊಳ್ಳುತ್ತಾರೆ. ನಟನೆ ಮಾತ್ರವಲ್ಲದೇ ಅವರು ನಿರ್ದೇಶನದಲ್ಲೂ ಆಸಕ್ತಿ ಹೊಂದಿ​ದ್ದಾರೆ. ಅವರ ನಿರ್ದೇಶನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮೂಡಿಬರುತ್ತಿದೆ. ಈ ಚಿತ್ರದ ನಿರ್ಮಾಣದಲ್ಲಿ ಅವರು ಪಾಲುದಾರಿಕೆ ಹೊಂದಿ​ದ್ದಾರೆ. ಹಾಗಾಗಿ ಅವರು ನಿರ್ಮಾಪಕಿ ಕೂಡ ಹೌದು. ಈ ಸಿನಿಮಾವನ್ನು ನಿರ್ಮಾಣ ಮಾಡಲು ಅವರು ಆಸ್ತಿ ಅಡವಿಟ್ಟಿರುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿದೆ. ಈಗ ಅವರು ಸಂಗೀತ ಸಂಯೋಜನೆ ವಿಭಾಗದಲ್ಲೂ ಮೂಗು ತೂರಿಸುತ್ತಿದ್ದಾರಾ ಎಂಬ ಗುಮಾನಿ ಮೂಡಿದೆ. ಅದಕ್ಕೆ ಕಾರಣ ಆಗಿರುವುದ ಒಂದು ವಿಡಿಯೋ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಎಮರ್ಜೆನ್ಸಿ’ ಸಿನಿಮಾಗೆ ಜಿ.ವಿ. ಪ್ರಕಾಶ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಕಂಗನಾ ರಣಾವತ್​ ಅವರು ಜಿ.ವಿ. ಪ್ರಕಾಶ್​ ಜೊತೆ ಇರುವ ವಿಡಿಯೋವನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ಸಂಗೀತ ನಿರ್ದೇಶಕನ ಪ್ರತಿಭೆಯನ್ನು ಅವರು ಹೊಗಳಿದ್ದರು. ಅದನ್ನು ನೋಡಿದ ನೆಟ್ಟಿಗರಿಗೆ ಬೇರೆ ಗುಮಾನಿ ಮೂಡಿದೆ.

ಇದನ್ನೂ ಓದಿ: ಕಂಗನಾ ರಣಾವತ್​-ಕರಣ್​ ಜೋಹರ್​ ನಡುವಿನ ಜಗಳ ಜೋರಾಯ್ತು; ಪರೋಕ್ಷವಾಗಿ ಕುಟುಕಿದ ನಿರ್ಮಾಪಕ

ಜಿ.ವಿ. ಪ್ರಕಾಶ್​ ಅವರ ಸಂಗೀತ ಸಂಯೋಜನೆಯ ಕೆಲಸದಲ್ಲಿ ಕಂಗನಾ ಅವರು ಮೂಗು ತೂರಿಸಬಹುದು ಎಂಬುದು ಕೆಲವರ ಅನಿಸಿಕೆ. ಯಾಕೆಂದರೆ ಈ ಹಿಂದೆ ‘ಮಣಿಕರ್ಣಿಕ’ ಸಿನಿಮಾದಲ್ಲಿ ಕಂಗನಾ ಅವರು ನಿರ್ದೇಶಕನ ಸ್ಥಾನವನ್ನು ಆಕ್ರಮಿಸಿಕೊಂಡಿದ್ದರು. ಅದೇ ರೀತಿ ಅವರು ‘ಎಮರ್ಜೆನ್ಸಿ’ ಚಿತ್ರದ ಮ್ಯೂಸಿಕ್​ ವಿಭಾಗದಲ್ಲೂ ಏನಾದರೂ ಹಸ್ತಕ್ಷೇಪ ಮಾಡುತ್ತಿದ್ದಾರಾ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮೂವೀ ಮಾಫಿಯಾ ವಿಚಾರ ಬಂದ್ರೆ ನೀವೆಲ್ಲ ಸೈಲೆಂಟ್ ಆಗ್ತೀರಿ’; ಮತ್ತೆ ಸಿಟ್ಟಾದ ಕಂಗನಾ ರಣಾವತ್

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧವಾಗುತ್ತಿದೆ. ಆ ಕಾಲಘಟ್ಟದಲ್ಲಿ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲು ಕಾರಣರಾದ ಅನೇಕ ನಾಯಕರ ಪಾತ್ರಗಳು ಈ ಸಿನಿಮಾದಲ್ಲಿ ಹೈಲೈಟ್​ ಆಗಲಿವೆ. ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಂಗನಾ ರಣಾವತ್​ ನಟಿಸಿದ್ದಾರೆ. ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ.

ಈ ಸಿನಿಮಾದಲ್ಲಿ ಶ್ರೇಯಸ್​ ತಲ್ಪಡೆ, ಅನುಪಮ್​ ಖೇರ್​, ಮಿಲಿಂದ್​ ಸೋಮನ್​, ಸತೀಶ್​ ಕೌಶಿಕ್​, ಮಹಿಮಾ ಚೌಧರಿ ಮುಂತಾದವರು ನಟಿಸುತ್ತಿದ್ದಾರೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್​ ಅವರ ಲುಕ್​ ನೋಡಿದಾಗ ಎಲ್ಲರಿಗೂ ಅಚ್ಚರಿ ಆಗಿತ್ತು. ಆದಷ್ಟು ಬೇಗ ಈ ಚಿತ್ರ ಬಿಡುಗಡೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್