AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಹಿದ್ ನಟನೆಯ ‘ಅಶ್ವತ್ಥಾಮ’ ಸಿನಿಮಾ ನಿಲ್ಲಿಸಿದ ನಿರ್ಮಾಪಕ; ಕಾರಣ ಪ್ರಭಾಸ್?

Shahid Kapoor: ಶಾಹೀದ್ ಕಪೂರ್ ಅಭಿನಯದ ಬಹುನಿರೀಕ್ಷಿತ 'ಅಶ್ವತ್ಥಾಮ' ಸಿನಿಮಾ ಕೈಬಿಡಲಾಗಿದೆ. ಪ್ರಭಾಸ್ ಅಭಿನಯದ 'ಕಲ್ಕಿ 2898 ಎಡಿ' ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಅವರ ಅಶ್ವತ್ಥಾಮ ಪಾತ್ರದ ಯಶಸ್ಸೇ ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ನಿರ್ಮಾಪಕ ಜಾಕಿ ಭಗ್ನಾನಿ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ.

ಶಾಹಿದ್ ನಟನೆಯ 'ಅಶ್ವತ್ಥಾಮ' ಸಿನಿಮಾ ನಿಲ್ಲಿಸಿದ ನಿರ್ಮಾಪಕ; ಕಾರಣ ಪ್ರಭಾಸ್?
ಶಾಹಿದ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Aug 17, 2026 | 1:05 PM

Share

ಮುಖ್ಯಾಂಶಗಳು

  • ಶಾಹೀದ್ ಕಪೂರ್ 'ಅಶ್ವತ್ಥಾಮ' ಸಿನಿಮಾಗೆ ಬಿತ್ತು ಬ್ರೇಕ್
  • 'ಕಲ್ಕಿ 2898 AD' ಪ್ರಭಾವವೇ ಸಿನಿಮಾ ನಿಲ್ಲಲು ಕಾರಣವೇ?
  • ನಿರ್ಮಾಪಕ ಜಾಕಿ ಭಗ್ನಾನಿ ನೀಡಿದ ಸ್ಪಷ್ಟನೆ ಏನು?

ಶಾಹೀದ್ ಕಪೂರ್ ಅಭಿನಯದ ‘ಅಶ್ವತ್ಥಾಮ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾ ಈಗ ಅಧಿಕೃತವಾಗಿ ನಿಂತುಹೋಗಿದೆ. ಇದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ತಂಡದ ಈ ನಿರ್ಧಾರಕ್ಕೆ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಭಾವವೇ ಮುಖ್ಯ ಕಾರಣ ಎಂದು ವರದಿ ಆಗಿದೆ.

‘ಅಶ್ವತ್ಥಾಮ’ ಸಿನಿಮಾ ನಿಂತುಹೋಗಲು ಹಲವು ಕಾರಣಗಳಿವೆ. ಈ ಬಗ್ಗೆ ನಿರ್ಮಾಪಕ ಜಾಕಿ ಭಗ್ನಾನಿ ಸ್ಪಷ್ಟನೆ ನೀಡಿದ್ದಾರೆ. ‘ವೀಕ್ಷಕರು ಬಜೆಟ್ ನೋಡಿ ಸಿನಿಮಾ ನೋಡುವುದಿಲ್ಲ. ಅವರಿಗೆ ಹೊಸತನ ಬೇಕು. ಕಲ್ಕಿ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಅವರು ಅಶ್ವತ್ಥಾಮ ಪಾತ್ರವನ್ನು ಅದ್ಭುತವಾಗಿ ಮಾಡಿದ್ದರು. ಈ ಪಾತ್ರ ಜನರ ಮನಸ್ಸಿನಲ್ಲಿ ಗಟ್ಟಿಯಾಗಿ ಕುಳಿತಿದೆ’ ಎಂದು ಹೇಳಿದ್ದಾರೆ.

ಇದರಿಂದಾಗಿ ಶಾಹೀದ್ ಕಪೂರ್ ಅವರ ‘ಅಶ್ವತ್ಥಾಮ’ ಸಿನಿಮಾಗೆ ದೊಡ್ಡ ಹಿನ್ನಡೆಯಾಗಿದೆ. ‘ಕಲ್ಕಿ’ ಸಿನಿಮಾ ಗೆದ್ದ ನಂತರ ನಿರ್ಮಾಪಕರು ಮರುಚಿಂತನೆ ನಡೆಸಿದರು. ತಮ್ಮ ಸಿನಿಮಾದಲ್ಲಿ ಹೊಸತನ ಇದೆಯೇ ಎಂದು ಪರಿಶೀಲಿಸಿದರು. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡಲು ಸಾಧ್ಯವೇ ಎಂದು ಯೋಚಿಸಿದರು. ಆತುರಪಟ್ಟು ಶೂಟಿಂಗ್ ಆರಂಭಿಸುವುದು ಬೇಡ ಎಂದು ನಿರ್ಧರಿಸಿದರು. ಕೊನೆಗೆ ಸಿನಿಮಾವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಮಾಪಕರು ತೀರ್ಮಾನಿಸಿದರು. ಶಾಹೀದ್ ಕಪೂರ್ ಅಭಿಮಾನಿಗಳಿಗೆ ಈ ಸುದ್ದಿ ತೀವ್ರ ನಿರಾಸೆ ತಂದಿದೆ.

ಆದರೆ ಮಾರುಕಟ್ಟೆಯ ಪರಿಸ್ಥಿತಿಗೆ ತಕ್ಕಂತೆ ನಿರ್ಮಾಪಕರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಸಿನಿಮಾ ರಂಗದಲ್ಲಿ ಇಂತಹ ನಿರ್ಧಾರಗಳು ಸಾಮಾನ್ಯ ಎಂಬ ಮಾತು ಕೇಳಿ ಬಂದಿದೆ. ಸಿನಿಮಾದ ಕಥೆಯಲ್ಲಿ ಬದಲಾವಣೆ ತರೋದು ಅಸಾಧ್ಯ. ಅಶ್ವತ್ಥಾಮನ ಕಥೆ ಹೇಗಿದೆಯೋ ಹಾಗೆಯೇ ಹೇಳಬೇಕು. ಆಗ ಎಲ್ಲರೂ ಈ ಸಿನಿಮಾ ಪಾತ್ರವನ್ನು ಅಮಿತಾಭ್ ಬಚ್ಚನ್ ನಟನೆಗೆ ಹೋಲಿಕೆ ಮಾಡುತ್ತಾರೆ. ಇದರಿಂದ ಸಿನಿಮಾಗೆ ಸಾಕಷ್ಟು ಹಿನ್ನಡೆ ಆಗಬಹುದು.

ಇದನ್ನೂ ಓದಿ: ‘ಫರ್ಜಿ’ ವೆಬ್ ಸೀರೀಸ್ ನೋಡಿ ಖೋಟಾ ನೋಟ್ ದಂಧೆ; ಈ ಗ್ಯಾಂಗ್ ಪೊಲೀಸ್​ ಖೆಡ್ಡಾಗೆ ಬಿದ್ದಿದ್ದೆ ರಣರೋಚಕ

ಶಾಹೀದ್ ಕಪೂರ್ ಅವರ ಹೊಸ ಸಿನಿಮಾದ ಘೋಷಣೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಜಾಕಿ ಭಗ್ನಾನಿ ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆಯೂ ಕುತೂಹಲ ಮೂಡಿದೆ. ಮತ್ತೊಂದೆಡೆ ‘ಕಲ್ಕಿ 2’ ಸಿನಿಮಾದ ಕೆಲಸಗಳು ಈಗಾಗಲೇ ಆರಂಭವಾಗಿವೆ. ಶೀಘ್ರದಲ್ಲೇ ಪ್ರಭಾಸ್ ಅವರು ಶೂಟಿಂಗ್‌ಗೆ ಸೇರಿಕೊಳ್ಳಲಿದ್ದಾರೆ. ‘ಕಲ್ಕಿ’ ಸಿನಿಮಾದ ಯಶಸ್ಸು ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!