AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ

Ramayana: ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಾತ್ರವಲ್ಲದೆ ಈ ಸಿನಿಮಾಕ್ಕೆ ಬಂಡವಾಳ ಸಹ ತೊಡಗಿಸಿದ್ದಾರೆ. ಸಿನಿಮಾದಲ್ಲಿ ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ ನಟಿಸಲು ಯಶ್ ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಯಶ್ ಏನು ಹೇಳಿದ್ದರು? ಇಲ್ಲಿದೆ ಮಾಹಿತಿ...

ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ
Yash Sai Pallavi
ಮಂಜುನಾಥ ಸಿ.
|

Updated on: Mar 09, 2025 | 7:34 AM

Share

ರಣ್​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಇದಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದ್ದು, ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾಮಾತೆಯ ಪಾತ್ರದಲ್ಲಿ ಮತ್ತು ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದು, ಹಲವು ಅತ್ಯುತ್ತಮ ಹಾಲಿವುಡ್ ಪ್ರತಿಭೆಗಳು ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆ ಆಗಲು ಯಶ್ ಕಾರಣ ಎನ್ನಲಾಗುತ್ತಿದೆ.

ಹಾಲಿವುಡ್ ರಿಪೋರ್ಟರ್ ಯೂಟ್ಯೂಬ್ ಚಾನೆಲ್​ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಯಶ್​ಗೆ ಸಂದರ್ಶಕಿ ಅನುಪಮಾ ಚೋಪ್ರಾ, ‘ರಾಮಾಯಣ’ ಸಿನಿಮಾದ ರಾಮನ ಪಾತ್ರಕ್ಕೆ ರಣ್​ಬೀರ್ ಕಪೂರ್ ಮೊದಲೇ ಆಯ್ಕೆ ಆಗಿದ್ದರೆ ಎಂದು ಕೇಳುತ್ತಾರೆ ಅದಕ್ಕೆ ಯಶ್ ಹೌದು ಎನ್ನುತ್ತಾರೆ. ಸಾಯಿ ಪಲ್ಲವಿಯ ಆಯ್ಕೆಯೂ ಮೊದಲೇ ಆಗಿತ್ತೆ ಎನ್ನುತ್ತಾರೆ. ಅದಕ್ಕೆ ಯಶ್, ‘ಇಲ್ಲ, ಭಾರತದ ಎಲ್ಲ ಭಾಗದ ನಟರೂ ಈ ಸಿನಿಮಾದಲ್ಲಿ ಇರಬೇಕು ಎಂಬುದು ನನ್ನ ಆಸೆ ಆಗಿತ್ತು. ಈ ವಿಷಯವನ್ನು ನಾನು ನಿತೇಶ್ ಮುಂದೆ ಇರಿಸಿದೆ. ಅದಾದ ಬಳಿಕ ನಾವು ಎಲ್ಲರೂ ಚರ್ಚಿಸಿ ಒಟ್ಟಾಗಿ ಸಾಯಿ ಪಲ್ಲವಿ ಅವರನ್ನು ಸೀತೆಯ ಪಾತ್ರಕ್ಕೆ ಆಯ್ಕೆ ಮಾಡಿಕೊಂಡೆವು’ ಎಂದಿದ್ದಾರೆ ಯಶ್. ಅಂಹಾಗೆ ಯಶ್ ಈ ಸಿನಿಮಾದ ಸಹ ನಿರ್ಮಾಪಕ ಸಹ.

ಇದನ್ನೂ ಓದಿ:ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್

ಸಾಯಿ ಪಲ್ಲವಿ, ‘ರಾಮಾಯಣ’ ಸಿನಿಮಾನಲ್ಲಿ ಸೀತಾಮಾತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಣ್​ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿಯ ಕೆಲ ಪೋಸ್ಟರ್​ಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಸಿನಿಮಾವನ್ನು ವಿಶೇಷ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗುತ್ತಿದ್ದು, ಇದಕ್ಕಾಗಿ ನಟರಿಗೆಲ್ಲ ಅಮೆರಿಕದ ಪ್ರಸಿದ್ಧ ಸ್ಟುಡಿಯೋನಲ್ಲಿ ವಿಶೇಷ ತರಬೇತಿಯನ್ನು ಸಹ ನೀಡಲಾಗಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು ಸಿನಿಮಾ ಬಿಡುಗಡೆಗೆ ಇನ್ನೂ ಒಂದು ವರ್ಷವಾದರೂ ಸಮಯ ಹಿಡಿಯುತ್ತದೆ.

ಈ ಹಿಂದೆ ಪ್ರಭಾಸ್ ‘ಆದಿಪುರುಷ್’ ಹೆಸರಿನಲ್ಲಿ ರಾಮಾಯಣವನ್ನು ತೆರೆಗೆ ತಂದರು ಆದರೆ ಆ ಸಿನಿಮಾ ಅಟ್ಟರ್ ಫ್ಲಾಪ್ ಆಯ್ತು, ಮಾತ್ರವಲ್ಲದೆ ದೇಶದಾದ್ಯಂತ ತೀವ್ರ ಟೀಕೆಗೆ ಸಹ ಗುರಿಯಾಯ್ತು. ‘ಆದಿಪುರುಷ್’ ಸಿನಿಮಾದ ವಿರುದ್ಧ ಹಲವು ಪ್ರಕರಣಗಳು ದಾಖಲಾದವು. ಇಷ್ಟೆಲ್ಲ ಆದರೂ ಸಹ ನಿತೇಶ್ ತಿವಾರಿ ಅವರು ರಾಮಾಯಣದ ಕತೆಯನ್ನು ಸಿನಿಮಾ ಮಾಡಲು ಎತ್ತಿಕೊಂಡಿದ್ದಾರೆ. ಅಂದಹಾಗೆ ಈ ಸಿನಿಮಾಕ್ಕೆ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಸಂಗೀತ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ