AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ

Ramayana: ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿ, ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಾತ್ರವಲ್ಲದೆ ಈ ಸಿನಿಮಾಕ್ಕೆ ಬಂಡವಾಳ ಸಹ ತೊಡಗಿಸಿದ್ದಾರೆ. ಸಿನಿಮಾದಲ್ಲಿ ಸಾಯಿ ಪಲ್ಲವಿ ಸೀತಾದೇವಿಯ ಪಾತ್ರದಲ್ಲಿ ನಟಿಸಲು ಯಶ್ ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಯಶ್ ಏನು ಹೇಳಿದ್ದರು? ಇಲ್ಲಿದೆ ಮಾಹಿತಿ...

ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ
Yash Sai Pallavi
ಮಂಜುನಾಥ ಸಿ.
|

Updated on: Mar 09, 2025 | 7:34 AM

Share

ರಣ್​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಇದಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದ್ದು, ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತಾಮಾತೆಯ ಪಾತ್ರದಲ್ಲಿ ಮತ್ತು ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದು, ಹಲವು ಅತ್ಯುತ್ತಮ ಹಾಲಿವುಡ್ ಪ್ರತಿಭೆಗಳು ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆ ಆಗಲು ಯಶ್ ಕಾರಣ ಎನ್ನಲಾಗುತ್ತಿದೆ.

ಹಾಲಿವುಡ್ ರಿಪೋರ್ಟರ್ ಯೂಟ್ಯೂಬ್ ಚಾನೆಲ್​ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಯಶ್​ಗೆ ಸಂದರ್ಶಕಿ ಅನುಪಮಾ ಚೋಪ್ರಾ, ‘ರಾಮಾಯಣ’ ಸಿನಿಮಾದ ರಾಮನ ಪಾತ್ರಕ್ಕೆ ರಣ್​ಬೀರ್ ಕಪೂರ್ ಮೊದಲೇ ಆಯ್ಕೆ ಆಗಿದ್ದರೆ ಎಂದು ಕೇಳುತ್ತಾರೆ ಅದಕ್ಕೆ ಯಶ್ ಹೌದು ಎನ್ನುತ್ತಾರೆ. ಸಾಯಿ ಪಲ್ಲವಿಯ ಆಯ್ಕೆಯೂ ಮೊದಲೇ ಆಗಿತ್ತೆ ಎನ್ನುತ್ತಾರೆ. ಅದಕ್ಕೆ ಯಶ್, ‘ಇಲ್ಲ, ಭಾರತದ ಎಲ್ಲ ಭಾಗದ ನಟರೂ ಈ ಸಿನಿಮಾದಲ್ಲಿ ಇರಬೇಕು ಎಂಬುದು ನನ್ನ ಆಸೆ ಆಗಿತ್ತು. ಈ ವಿಷಯವನ್ನು ನಾನು ನಿತೇಶ್ ಮುಂದೆ ಇರಿಸಿದೆ. ಅದಾದ ಬಳಿಕ ನಾವು ಎಲ್ಲರೂ ಚರ್ಚಿಸಿ ಒಟ್ಟಾಗಿ ಸಾಯಿ ಪಲ್ಲವಿ ಅವರನ್ನು ಸೀತೆಯ ಪಾತ್ರಕ್ಕೆ ಆಯ್ಕೆ ಮಾಡಿಕೊಂಡೆವು’ ಎಂದಿದ್ದಾರೆ ಯಶ್. ಅಂಹಾಗೆ ಯಶ್ ಈ ಸಿನಿಮಾದ ಸಹ ನಿರ್ಮಾಪಕ ಸಹ.

ಇದನ್ನೂ ಓದಿ:ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್

ಸಾಯಿ ಪಲ್ಲವಿ, ‘ರಾಮಾಯಣ’ ಸಿನಿಮಾನಲ್ಲಿ ಸೀತಾಮಾತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಣ್​ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿಯ ಕೆಲ ಪೋಸ್ಟರ್​ಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಸಿನಿಮಾವನ್ನು ವಿಶೇಷ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗುತ್ತಿದ್ದು, ಇದಕ್ಕಾಗಿ ನಟರಿಗೆಲ್ಲ ಅಮೆರಿಕದ ಪ್ರಸಿದ್ಧ ಸ್ಟುಡಿಯೋನಲ್ಲಿ ವಿಶೇಷ ತರಬೇತಿಯನ್ನು ಸಹ ನೀಡಲಾಗಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು ಸಿನಿಮಾ ಬಿಡುಗಡೆಗೆ ಇನ್ನೂ ಒಂದು ವರ್ಷವಾದರೂ ಸಮಯ ಹಿಡಿಯುತ್ತದೆ.

ಈ ಹಿಂದೆ ಪ್ರಭಾಸ್ ‘ಆದಿಪುರುಷ್’ ಹೆಸರಿನಲ್ಲಿ ರಾಮಾಯಣವನ್ನು ತೆರೆಗೆ ತಂದರು ಆದರೆ ಆ ಸಿನಿಮಾ ಅಟ್ಟರ್ ಫ್ಲಾಪ್ ಆಯ್ತು, ಮಾತ್ರವಲ್ಲದೆ ದೇಶದಾದ್ಯಂತ ತೀವ್ರ ಟೀಕೆಗೆ ಸಹ ಗುರಿಯಾಯ್ತು. ‘ಆದಿಪುರುಷ್’ ಸಿನಿಮಾದ ವಿರುದ್ಧ ಹಲವು ಪ್ರಕರಣಗಳು ದಾಖಲಾದವು. ಇಷ್ಟೆಲ್ಲ ಆದರೂ ಸಹ ನಿತೇಶ್ ತಿವಾರಿ ಅವರು ರಾಮಾಯಣದ ಕತೆಯನ್ನು ಸಿನಿಮಾ ಮಾಡಲು ಎತ್ತಿಕೊಂಡಿದ್ದಾರೆ. ಅಂದಹಾಗೆ ಈ ಸಿನಿಮಾಕ್ಕೆ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಸಂಗೀತ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ