AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ಕಚೇರಿ ನಂತರ ಇದೀಗ ಸೋನು ಮನೆಯಲ್ಲಿ ಐಟಿ ಅಧಿಕಾರಿಗಳ ಸರ್ವೆ; ರಾಜಕೀಯ ಬಣ್ಣ ಪಡೆಯಲಿದೆಯೇ ಪ್ರಕರಣ?

ನಿನ್ನೆ (ಸೆಪ್ಟೆಂಬರ್ 15) ಆದಾಯ ತೆರಿಗೆ ಅಧಿಕಾರಿಗಳು ಸೋನು ಸೂದ್​ ಕಚೇರಿ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಮೀಕ್ಷೆ ನಡೆಸಿದ್ದರು. ಇಂದು ಅವರ ಮನೆಯಲ್ಲಿ ಸರ್ವೆ ನಡೆಸಿದ್ದಾರೆ.

Sonu Sood: ಕಚೇರಿ ನಂತರ ಇದೀಗ ಸೋನು ಮನೆಯಲ್ಲಿ ಐಟಿ ಅಧಿಕಾರಿಗಳ ಸರ್ವೆ; ರಾಜಕೀಯ ಬಣ್ಣ ಪಡೆಯಲಿದೆಯೇ ಪ್ರಕರಣ?
ನಟ ಸೋನು ಸೂದ್
TV9 Web
| Edited By: |

Updated on:Sep 16, 2021 | 1:49 PM

Share

ನಟ ಸೋನು ಸೂದ್ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ್ದ ಸರ್ವೆ ನಿನ್ನೆ ರಾತ್ರಿ ಕೊನೆಗೊಂಡಿತ್ತು. ಇಂದು ಬೆಳಗ್ಗೆ ಅಧಿಕಾರಿಗಳು ಸೋನು ಅವರ ಮನೆಗೆ ತೆರಳಿದ್ದು, ಅಲ್ಲಿ ಸರ್ವೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಕ್ನೋ ಮೂಲದ ರಿಯಲ್ ಎಸ್ಟೇಟ್ ಕಂಪನಿಯೊಂದಿಗಿನ ಆಸ್ತಿ ಒಪ್ಪಂದದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಧಿಕಾರಿಗಳು ನಿನ್ನೆ ಜುಹುವಿನ ಮನೆಯಲ್ಲಿರುವ ಸೋನು ಅವರ ಚಾರಿಟಿಯ ಕಚೇರಿ ಸೇರಿದಂತೆ, ನಟನಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಸರ್ವೆ ನಡೆಸಿದ್ದಾರೆ.

ಸೋನು ಸೂದ್ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿನ ಒಪ್ಪಂದದ ಕುರಿತಂತೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಒಪ್ಪಂದದ ಮೇಲೆ ತೆರಿಗೆ ವಂಚನೆಯ ಆರೋಪ ಬಂದ ಕಾರಣ ಆ ಕುರಿತು ಸಮೀಕ್ಷೆಯನ್ನು ಆರಂಭಿಸಲಾಗಿದೆ. ಈ ಕಾರ್ಯಾಚರಣೆ ದಾಳಿಯಲ್ಲ, ಕೇವಲ ‘ಸರ್ವೆ’(ಸಮೀಕ್ಷೆ) ಎಂದು ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಎಪಿ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ನಾಂದಿಯಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ರನ್ನು ಸೋನು ಸೂದ್ ಭೇಟಿಯಾಗಿದ್ದರು. ಆಗ ಸೋನು ಅವರನ್ನು ‘ದೇಶ್ ಕಾ ಮೆಂಟರ್ಸ್’ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಿಸಲಾಗಿತ್ತು. ಇದೀಗ ಅವರ ಮನೆಯ ಮೇಲೆ ದಾಳಿ ನಡೆದಿರುವುದು ರಾಜಕೀಯ ಪ್ರೇರಿತ ಎಂಬ ವಾದವೂ ಕೇಳಿಬಂದಿದೆ. ಕೇಜ್ರಿವಾಲ್ ಭೇಟಿ ಮುಂದಿನ ಪಂಜಾಬ್​ ರಾಜ್ಯದ ಚುನಾವಣೆಯಲ್ಲಿ ಎಎಪಿಯಿಂದ ಸೋನು ನಿಲ್ಲಲಿದ್ದಾರೆ ಎಂಬ ಸುದ್ದಿಯನ್ನು ಹುಟ್ಟುಹಾಕಿತ್ತು.

ಆದರೆ ಸೋನು ಅದನ್ನು ಅಲ್ಲಗಳೆದಿದ್ದರು. ‘ಯಾವುದೇ ರಾಜಕೀಯವನ್ನು ಚರ್ಚಿಸಲಾಗಿಲ್ಲ’ ಎಂದು ಸೋನು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ್ದರು. ಈ ಹಿಂದೆ ಕೂಡ ಸೋನು ಸೂದ್, ತಾವು ರಾಜಕಾರಣಿಗಳಿಂದ ಗೌರವಿಸಲ್ಪಟ್ಟರೂ ಕೂಡ, ಯಾವುದೇ ಪಕ್ಷಕ್ಕೆ ಸಂಬಂಧಪಟ್ಟವನಲ್ಲ ಎಂದು ಹೇಳಿದ್ದರು. ಪ್ರಸ್ತುತ ಎಎಪಿ ಆರೋಪಕ್ಕೆ ಪ್ರತಿಯಾಗಿ ಬಿಜೆಪಿ ಪ್ರತಿಕ್ರಿಯಿಸಿದ್ದು, ‘ಎಎಪಿ ಆರೋಪ ನಿರಾಧಾರ. ಯಾವುದೇ ರಾಜಕೀಯ ಹಿನ್ನೆಲೆ ಈ ಪ್ರಕರಣಕ್ಕಿಲ್ಲ ಎಂದಿದೆ’.

ಕೊರೊನಾ ಸಂಕಷ್ಟದ ಸಮಯದಲ್ಲಿ ಸೋನು ಅವರ ಸಹಾಯ ಕಾರ್ಯ ದೇಶದ ಮನಗೆದ್ದಿತ್ತು. ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದ ಮತ್ತು ಅಸಹಾಯಕರಾಗಿದ್ದ  ನೂರಾರು ವಲಸಿಗರನ್ನು, ಅವರವರ ರಾಜ್ಯಕ್ಕೆ ಕರೆದೊಯ್ಯಲು ಬಸ್‌ಗಳು, ರೈಲುಗಳು ಮತ್ತು ವಿಮಾನಗಳ ವ್ಯವಸ್ಥೆಯನ್ನು ಸೋನು ಮಾಡಿದ್ದರು. ಈ ವರ್ಷದ ಆರಂಭದಲ್ಲಿ ಎರಡನೇ ಅಲೆಯಲ್ಲಿ ರೋಗಿಗಳಿಗೆ ಆಮ್ಲಜನಕ ಪೂರೈಸಿ ಆಪದ್ಭಾಂಧವ ಎನಿಸಿಕೊಂಡಿದ್ದರು.

ಇದನ್ನೂ ಓದಿ:

Big Breaking: ಸೋನು ಸೂದ್​ಗೆ ಸಂಕಷ್ಟ?; ನಟನಿಗೆ ಸೇರಿದ ಆರು ಜಾಗಗಳಲ್ಲಿ ಐಟಿ ಅಧಿಕಾರಿಗಳ ಸರ್ವೇ

Raj Kundra: ಚಿತ್ರರಂಗದಲ್ಲಿ ಕಷ್ಟಪಡುತ್ತಿದ್ದ ಯುವತಿಯರೇ ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ದಂಧೆಗೆ ಟಾರ್ಗೆಟ್

(IT Officials is in Sonu Sood’s Mumbai home after completing survey in his offices)

Published On - 1:47 pm, Thu, 16 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?