AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಷ್ಟದಲ್ಲಿಲ್ಲ ಪೂಜಾ ಎಂಟರ್​ಟೇನ್​ಮೆಂಟ್; ಲಾಭ ಕಂಡ ರಕುಲ್ ಪತಿಯ ಸಂಸ್ಥೆ

ಬಾಲಿವುಡ್​ನಲ್ಲಿ ಪೂಜಾ ಎಂಟರ್​ಟೇನ್​ಮೆಂಟ್ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದೆ. ಅಕ್ಷಯ್ ಕುಮಾರ್ ಸಿನಿಮಾಗಳನ್ನು ಹೆಚ್ಚೆಚ್ಚು ನಿರ್ಮಿಸಿ ಈ ಸಂಸ್ಥೆ ನಷ್ಟ ಅನುಭವಿಸಿದೆ. ‘ಬಡೇ ಮಿಯಾ ಚೋಟೆ ಮಿಯಾ’, ‘ಗಣಪತ್’, ‘ಮಿಷನ್ ರಾಣಿಗಂಜ್​’ ರೀತಿಯ ಸಿನಿಮಾಗಳು ನಿರ್ಮಾಣ ಸಂಸ್ಥೆಗೆ ಹೊರೆಯಾಗಿದೆ.

ನಷ್ಟದಲ್ಲಿಲ್ಲ ಪೂಜಾ ಎಂಟರ್​ಟೇನ್​ಮೆಂಟ್; ಲಾಭ ಕಂಡ ರಕುಲ್ ಪತಿಯ ಸಂಸ್ಥೆ
ರಕುಲ್-ಜಾಕಿ
ರಾಜೇಶ್ ದುಗ್ಗುಮನೆ
|

Updated on: Jul 02, 2024 | 12:58 PM

Share

ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ಪೂಜಾ ಎಂಟರ್​ಟೇನ್​ಮೆಂಟ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಈ ಸಂಸ್ಥೆಯ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿಗೆ ಸಂಕಷ್ಟ ಉಂಟಾಗಿದೆ ಎನ್ನಲಾಗಿದೆ. 250 ಕೋಟಿ ರೂಪಾಯಿ ಸಾಲ ತೀರಿಸಲು ಮುಂಬೈನ ಎಳಂತಸ್ತಿನ ಕಚೇರಿಯನ್ನು ಇವರು ಮಾರಾಟ ಮಾಡಿದರು ಎಂದು ಕೂಡ ವರದಿ ಆಗಿದೆ. ಈಗ 2023-24ನೇ ಸಾಲಿನ ಇವರ ಲಾಭ-ನಷ್ಟದ ಲೆಕ್ಕ ಸಿಕ್ಕಿದೆ. ಈ ವರದಿ ಗಮನ ಸೆಳೆದಿದೆ.

ಪೂಜಾ ಎಂಟರ್​ಟೇನ್​ಮೆಂಟ್ ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಸಿನಿಮಾಗಳನ್ನು ಹೆಚ್ಚೆಚ್ಚು ನಿರ್ಮಿಸಿ ಈ ಸಂಸ್ಥೆ ಕೈ ಸುಟ್ಟುಕೊಂಡಿದೆ. ‘ಬಡೇ ಮಿಯಾ ಚೋಟೆ ಮಿಯಾ’, ‘ಗಣಪತ್’, ‘ಮಿಷನ್ ರಾಣಿಗಂಜ್​’ ರೀತಿಯ ಸಿನಿಮಾಗಳು ನಿರ್ಮಾಣ ಸಂಸ್ಥೆಗೆ ಹೊರೆಯಾಗಿದೆ. ಆದರೆ, ಸಾಲದ ವಿಚಾರವನ್ನು ವಶು ಅವರು ಅಲ್ಲಗಳೆದಿದ್ದಾರೆ. ಈ ಮಧ್ಯೆ ಸಂಸ್ಥೆ ಲಾಭದಲ್ಲಿದೆ ಎಂದು ವರದಿ ಆಗಿದೆ.

ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಪೂಜಾ ಎಂಟರ್​ಟೇನ್​ಮೆಂಟ್ ಲಾಭದಲ್ಲಿದೆ. 2023-24ನೇ ಆರ್ಥಿಕ ವರ್ಷದಲ್ಲಿ ಪೂಜಾ ಎಂಟರ್​ಟೇನ್​ಮೆಂಟ್ 58.07 ಕೋಟಿ ಆದಾಯ ಗಳಿಸಿದೆ. ಇತರ ಖರ್ಚುಗಳನ್ನು ಕಳೆದರೆ ಈ ಚಿತ್ರದಿಂದ ಸಂಸ್ಥೆಗೆ ಆದ ಲಾಭ ಕೇವಲ 8 ಕೋಟಿ ರೂಪಾಯಿ. 2022-23ನೇ ಸಾಲಿನಲ್ಲಿ ಆದಾಯ 46.6 ಕೋಟಿ ರೂಪಾಯಿ ಇತ್ತು ಮತ್ತು ಲಾಭ ಕೇವ 2.86 ಕೋಟಿ ರೂಪಾಯಿ ಆಗಿತ್ತು.

ಷೇರು ಮಾರುಕಟ್ಟೆಯಲ್ಲಿ ಪೂಜಾ ಎಂಟರ್​ಟೇನ್​ಮೆಂಟ್ (Vashu Bhagnani Industries Ltd) ಷೇರು ನಷ್ಟ ಅನುಭವಿಸುತ್ತಿದೆ. ಸೋಮವಾರ ಹಾಗೂ ಮಂಗಳವಾರ ಈ ಸಂಸ್ಥೆಯ ಷೇರುಗಳು ನಷ್ಟ ಅನುಭವಿಸುತ್ತಿವೆ. ಈ ಸಂಸ್ಥೆಯ ಷೇರಿನ ಬೆಲೆ 406 ರೂಪಾಯಿ ತಲುಪಿತ್ತು. ಈಗ 283 ರೂಪಾಯಿಗೆ ಇಳಿದಿದೆ.

ಇದನ್ನೂ ಓದಿ: ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಸಂಭಾವನೆಯನ್ನು ಈಗಲೇ ನೀಡೋದು ಬೇಡ ಎಂದು ಅಕ್ಷಯ್ ಹೇಳಿದ್ದಾರಂತೆ. ‘ಅಕ್ಷಯ್ ಕುಮಾರ್​ ಇತ್ತೀಚೆಗೆ ಭೇಟಿ ಆಗಿದ್ದರು. ಸಿನಿಮಾಗಾಗಿ ಕೆಲಸ ಮಾಡಿದ ಎಲ್ಲರಿಗೂ ಸಂಬಳ ನೀಡುವ ತನಕ ತಮ್ಮ ಸಂಭಾವನೆಯನ್ನು ನೀಡುವುದು ಬೇಡ ಅಂತ ಅವರು ಹೇಳಿದ್ದಾರೆ. ನಮ್ಮ ಸಂದರ್ಭವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಅಕ್ಷಯ್​ ಕುಮಾರ್ ಅವರಿಗೆ ಧನ್ಯವಾದಗಳು’ ಎಂದು ಜಾಕಿ ಭಗ್ನಾನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು