AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಷ್ಟದಲ್ಲಿಲ್ಲ ಪೂಜಾ ಎಂಟರ್​ಟೇನ್​ಮೆಂಟ್; ಲಾಭ ಕಂಡ ರಕುಲ್ ಪತಿಯ ಸಂಸ್ಥೆ

ಬಾಲಿವುಡ್​ನಲ್ಲಿ ಪೂಜಾ ಎಂಟರ್​ಟೇನ್​ಮೆಂಟ್ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದೆ. ಅಕ್ಷಯ್ ಕುಮಾರ್ ಸಿನಿಮಾಗಳನ್ನು ಹೆಚ್ಚೆಚ್ಚು ನಿರ್ಮಿಸಿ ಈ ಸಂಸ್ಥೆ ನಷ್ಟ ಅನುಭವಿಸಿದೆ. ‘ಬಡೇ ಮಿಯಾ ಚೋಟೆ ಮಿಯಾ’, ‘ಗಣಪತ್’, ‘ಮಿಷನ್ ರಾಣಿಗಂಜ್​’ ರೀತಿಯ ಸಿನಿಮಾಗಳು ನಿರ್ಮಾಣ ಸಂಸ್ಥೆಗೆ ಹೊರೆಯಾಗಿದೆ.

ನಷ್ಟದಲ್ಲಿಲ್ಲ ಪೂಜಾ ಎಂಟರ್​ಟೇನ್​ಮೆಂಟ್; ಲಾಭ ಕಂಡ ರಕುಲ್ ಪತಿಯ ಸಂಸ್ಥೆ
ರಕುಲ್-ಜಾಕಿ
ರಾಜೇಶ್ ದುಗ್ಗುಮನೆ
|

Updated on: Jul 02, 2024 | 12:58 PM

Share

ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ಪೂಜಾ ಎಂಟರ್​ಟೇನ್​ಮೆಂಟ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಈ ಸಂಸ್ಥೆಯ ವಶು ಭಗ್ನಾನಿ ಹಾಗೂ ಜಾಕಿ ಭಗ್ನಾನಿಗೆ ಸಂಕಷ್ಟ ಉಂಟಾಗಿದೆ ಎನ್ನಲಾಗಿದೆ. 250 ಕೋಟಿ ರೂಪಾಯಿ ಸಾಲ ತೀರಿಸಲು ಮುಂಬೈನ ಎಳಂತಸ್ತಿನ ಕಚೇರಿಯನ್ನು ಇವರು ಮಾರಾಟ ಮಾಡಿದರು ಎಂದು ಕೂಡ ವರದಿ ಆಗಿದೆ. ಈಗ 2023-24ನೇ ಸಾಲಿನ ಇವರ ಲಾಭ-ನಷ್ಟದ ಲೆಕ್ಕ ಸಿಕ್ಕಿದೆ. ಈ ವರದಿ ಗಮನ ಸೆಳೆದಿದೆ.

ಪೂಜಾ ಎಂಟರ್​ಟೇನ್​ಮೆಂಟ್ ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಸಿನಿಮಾಗಳನ್ನು ಹೆಚ್ಚೆಚ್ಚು ನಿರ್ಮಿಸಿ ಈ ಸಂಸ್ಥೆ ಕೈ ಸುಟ್ಟುಕೊಂಡಿದೆ. ‘ಬಡೇ ಮಿಯಾ ಚೋಟೆ ಮಿಯಾ’, ‘ಗಣಪತ್’, ‘ಮಿಷನ್ ರಾಣಿಗಂಜ್​’ ರೀತಿಯ ಸಿನಿಮಾಗಳು ನಿರ್ಮಾಣ ಸಂಸ್ಥೆಗೆ ಹೊರೆಯಾಗಿದೆ. ಆದರೆ, ಸಾಲದ ವಿಚಾರವನ್ನು ವಶು ಅವರು ಅಲ್ಲಗಳೆದಿದ್ದಾರೆ. ಈ ಮಧ್ಯೆ ಸಂಸ್ಥೆ ಲಾಭದಲ್ಲಿದೆ ಎಂದು ವರದಿ ಆಗಿದೆ.

ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಪೂಜಾ ಎಂಟರ್​ಟೇನ್​ಮೆಂಟ್ ಲಾಭದಲ್ಲಿದೆ. 2023-24ನೇ ಆರ್ಥಿಕ ವರ್ಷದಲ್ಲಿ ಪೂಜಾ ಎಂಟರ್​ಟೇನ್​ಮೆಂಟ್ 58.07 ಕೋಟಿ ಆದಾಯ ಗಳಿಸಿದೆ. ಇತರ ಖರ್ಚುಗಳನ್ನು ಕಳೆದರೆ ಈ ಚಿತ್ರದಿಂದ ಸಂಸ್ಥೆಗೆ ಆದ ಲಾಭ ಕೇವಲ 8 ಕೋಟಿ ರೂಪಾಯಿ. 2022-23ನೇ ಸಾಲಿನಲ್ಲಿ ಆದಾಯ 46.6 ಕೋಟಿ ರೂಪಾಯಿ ಇತ್ತು ಮತ್ತು ಲಾಭ ಕೇವ 2.86 ಕೋಟಿ ರೂಪಾಯಿ ಆಗಿತ್ತು.

ಷೇರು ಮಾರುಕಟ್ಟೆಯಲ್ಲಿ ಪೂಜಾ ಎಂಟರ್​ಟೇನ್​ಮೆಂಟ್ (Vashu Bhagnani Industries Ltd) ಷೇರು ನಷ್ಟ ಅನುಭವಿಸುತ್ತಿದೆ. ಸೋಮವಾರ ಹಾಗೂ ಮಂಗಳವಾರ ಈ ಸಂಸ್ಥೆಯ ಷೇರುಗಳು ನಷ್ಟ ಅನುಭವಿಸುತ್ತಿವೆ. ಈ ಸಂಸ್ಥೆಯ ಷೇರಿನ ಬೆಲೆ 406 ರೂಪಾಯಿ ತಲುಪಿತ್ತು. ಈಗ 283 ರೂಪಾಯಿಗೆ ಇಳಿದಿದೆ.

ಇದನ್ನೂ ಓದಿ: ತಮ್ಮ ಸಿನಿಮಾ ನಿರ್ಮಿಸಿ ಕೈ ಸುಟ್ಟುಕೊಂಡ ನಿರ್ಮಾಪಕನಿಗೆ ಅಕ್ಷಯ್​ ಕುಮಾರ್ ಸಹಾಯ

‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಸಂಭಾವನೆಯನ್ನು ಈಗಲೇ ನೀಡೋದು ಬೇಡ ಎಂದು ಅಕ್ಷಯ್ ಹೇಳಿದ್ದಾರಂತೆ. ‘ಅಕ್ಷಯ್ ಕುಮಾರ್​ ಇತ್ತೀಚೆಗೆ ಭೇಟಿ ಆಗಿದ್ದರು. ಸಿನಿಮಾಗಾಗಿ ಕೆಲಸ ಮಾಡಿದ ಎಲ್ಲರಿಗೂ ಸಂಬಳ ನೀಡುವ ತನಕ ತಮ್ಮ ಸಂಭಾವನೆಯನ್ನು ನೀಡುವುದು ಬೇಡ ಅಂತ ಅವರು ಹೇಳಿದ್ದಾರೆ. ನಮ್ಮ ಸಂದರ್ಭವನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಅಕ್ಷಯ್​ ಕುಮಾರ್ ಅವರಿಗೆ ಧನ್ಯವಾದಗಳು’ ಎಂದು ಜಾಕಿ ಭಗ್ನಾನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?