AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯ ಗೆಲ್ಲುತ್ತದೆ’; ವಿವಾದಾತ್ಮಕ ಫೋಟೋ ಬಗ್ಗೆ ಮೊದಲ ಬಾರಿಗೆ ಮೌನ ಮುರಿದು ಜಾಕ್ವೆಲಿನ್​

ಜಾಕ್ವೆಲಿನ್​ಗೆ ಸಮಾಜದಲ್ಲಿ ಇರುವ ಗೌರವ ಕಡಿಮೆ ಆಗುತ್ತಿದೆ.  ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರಕಟಣೆ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ವಿಶೇಷ ಮನವಿ ಮಾಡಿಕೊಂಡಿದ್ದಾರೆ.  

‘ನ್ಯಾಯ ಗೆಲ್ಲುತ್ತದೆ’; ವಿವಾದಾತ್ಮಕ ಫೋಟೋ ಬಗ್ಗೆ ಮೊದಲ ಬಾರಿಗೆ ಮೌನ ಮುರಿದು ಜಾಕ್ವೆಲಿನ್​
ಜಾಕ್ವೆಲಿನ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 08, 2022 | 8:31 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ (Jacqueline Fernandez) ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಅವರ ವರ್ಚಸ್ಸಿಗೆ ಹಾನಿ ಆಗುವಂತಹ ಘಟನೆ ನಡೆಯುತ್ತಿದೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್​ ಅವರು ಜಾಕ್ವೆಲಿನ್​ ಜತೆಗಿನ ಫೋಟೋಗಳನ್ನು ವೈರಲ್​ ಮಾಡುತ್ತಿದ್ದಾರೆ. ಇದರಿಂದ ಜಾಕ್ವೆಲಿನ್​ಗೆ ಸಮಾಜದಲ್ಲಿ ಇರುವ ಗೌರವ ಕಡಿಮೆ ಆಗುತ್ತಿದೆ.  ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರಕಟಣೆ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ವಿಶೇಷ ಮನವಿ ಮಾಡಿಕೊಂಡಿದ್ದಾರೆ.  

‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ಮಾಧ್ಯಮದ ಸ್ನೇಹಿತರೂ ಸೇರಿದ್ದಾರೆ. ಅವರಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ. ಪ್ರಸ್ತುತ ಕಷ್ಟದ ದಿನಗಳನ್ನು ನೋಡುತ್ತಿದ್ದೇನೆ. ನನ್ನ ಸ್ನೇಹಿತರು ಮತ್ತು ಅಭಿಮಾನಿಗಳಿಗೂ ಇದು ಅರ್ಥವಾಗುತ್ತದೆ ಎಂದುಕೊಂಡಿದ್ದೇನೆ. ನನ್ನ ವೈಯಕ್ತಿಕ ಫೋಟೋಗಳನ್ನು ಪ್ರಸಾರ ಮಾಡದಂತೆ ನಾನು ಕೋರುತ್ತಿದ್ದೇನೆ. ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಮಾಡುವುದಿಲ್ಲ, ಅದೇ ರೀತಿ ನನಗೂ ಈ ರೀತಿ ಮಾಡುವುದಿಲ್ಲ ಎಂದು ನನಗೆ ಖಾತ್ರಿಯಿದೆ. ನ್ಯಾಯ ಮತ್ತು ಒಳ್ಳೆಯ ಪ್ರಜ್ಞೆಯು ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇವೆ. ಧನ್ಯವಾದಗಳು’ ಎಂದು ಜಾಕ್ವೆಲಿನ್​ ಬರೆದುಕೊಂಡಿದ್ದಾರೆ.

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಅವರು ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿದೆ. ಇತ್ತೀಚೆಗೆ ಇಬ್ಬರೂ ಆಪ್ತವಾಗಿದ್ದ ಫೋಟೋ ವೈರಲ್​ ಆಗಿತ್ತು. ಈಗ ಮತ್ತೊಂದು ಹೊಸ ಫೋಟೋ ಹೊರಬಿದ್ದಿದೆ. ಜಾಕ್ವೆಲಿನ್ ಫರ್ನಾಂಡಿಸ್​ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ಹೊಸ ರೊಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಜಾಕ್ವೆಲಿನ್​ಗೆ ಸುಕೇಶ್​ ಕಿಸ್​ ಮಾಡುತ್ತಿದ್ದಾರೆ. ಜಾಕ್ವೆಲಿನ್​ ಕತ್ತಿನಲ್ಲಿ ಒಂದು ಕಲೆ ಕಂಡಿದೆ. ಸುಕೇಶ್​ ಅವರೇ ಈ ಕಲೆ ಮಾಡಿದ್ದಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ